spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ LKG UKG ತರಗತಿಗಳ ಪ್ರಾರಂಭ

Date:

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಳಕೆ ಇರ್ವತ್ತೂರು ಇಲ್ಲಿ ನೂತನವಾಗಿ ಆರಂಭಿಸಿರುವ ಎಲ್ ಕೆ ಜಿ ,ಯು ಕೆ ಜಿ ತರಗತಿಗಳ ಉದ್ಘಾಟನೆಯನ್ನು ಇಲ್ಲಿಯ ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಹಕಾರ ಸಂಘದ ಧುರೀಣರಾದ ಶ್ರೀ ಭಾಸ್ಕರ್ ಎಸ್ ಕೋಟ್ಯಾನ್ ರವರು ನೆರವೇರಿಸಿದರು. ಕಂಬಳ ಕ್ಷೇತ್ರದ ಭೀಷ್ಮ ನಮ್ಮ ಶಾಲಾ ಹಳೆ ವಿದ್ಯಾರ್ಥಿ ಶ್ರೀ ಗುಣಪಾಲ ಕಡಂಬರು, ಕೊಳಕ್ಕೆ ಮನೆತನದ ಶ್ರೀ ಜಯಕೀರ್ತಿ ಕಡಂಬರು, ಮುಂಬಯಿ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಸದಾನಂದ ಪೂಜಾರಿ ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಿರಿಜಮ್ಮ , ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ರಮನಾಥ ಶೆಣೈ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಧ್ವರಾಜ್, ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಉದಯ ಎಸ್ ಕೋಟ್ಯಾನ್, ಪಂಚಾಯತ್ ಸದಸ್ಯರಾದ ಶೇಖರ್ ಅಂಚನ್ ಮತ್ತು ಬಾಲಕೃಷ್ಣ ಶೆಟ್ಟಿ, ಶಿಕ್ಷಣ ಸಂಯೋಜಕರಾದ ಬಾಲಕೃಷ್ಣ ನಾಯಕ್, ರೋಟರಿ ರಾಕ್ ಸಿಟಿ ಅಧ್ಯಕ್ಷರಾದ ಉಪೇಂದ್ರ ವಾಗ್ಲೆ, ಜಿಲ್ಲಾ ಮಾಜಿ ಗವರ್ನರ್ ಡಾ. ಭರತೇಶ್, ಚಂದ್ರ ರಾಜ್ ಅತಿಕಾರಿ,ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ, ಸಿಆರ್‌ಪಿ ಉಮೇಶ್ ಯುವಕ ಮಂಡಲದ ಅಧ್ಯಕ್ಷರಾದ ರಾಜೇಂದ್ರ ಪೂಜಾರಿ ,ಪ್ರಭಾರ ಮುಖ್ಯ ಶಿಕ್ಷಕಿ ಶಕುಂತಲಾ ರಾವ್ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಆನಂದ್ ಪೂಜಾರಿ ಅವರು ಪ್ರಸ್ತಾಪಿಸಿ ಎಲ್ಲರನ್ನು ಸ್ವಾಗತಿಸಿದರು. ಶಿಕ್ಷಕ ಅರುಣ್ ಕುಮಾರ್ ಶೇಟ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು . ಎಲ್ಲಾ ಶಿಕ್ಷಕರ , ಊರವರ , ಪೋಷಕರ ಹಾಗೂ ಶತಮಾನೋತ್ಸವ ಸಮಿತಿ ಸದಸ್ಯರ ನೆರವಿನಿಂದ ಕಾರ್ಯಕ್ರಮ ಯಶಸ್ವಿಯಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮದುವೆ ಪ್ರಸ್ತಾಪ ನಿರಾಕರಿಸಿದ ಯುವತಿಗೆ ಚಾಕು ಇರಿತ; ಬ್ರಹ್ಮಾವರದಲ್ಲಿ ಭೀಕರ ಘಟನೆ

ಪ್ರೀತಿ ಹಾಗೂ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣಕ್ಕಾಗಿ ಯುವತಿಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.

ಬ್ಯಾಟ್ ಹಿಡಿದ ‘ಹಿಟ್‌ಮ್ಯಾನ್’: ಸಾಮಾಜಿಕ ಜಾಲತಾಣದಲ್ಲಿ ಅಭ್ಯಾಸದ ವಿಡಿಯೋ ಹಂಚಿಕೊಂಡ ರೋಹಿತ್

ನಿವೃತ್ತಿಯ ವದಂತಿಗಳ ಬೆನ್ನಲ್ಲೇ ಭಾರತದ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ಮತ್ತೆ ಕ್ರಿಕೆಟ್ ಅಂಗಳಕ್ಕೆ ಮರಳಿದ್ದಾರೆ.

ಹಮಾಸ್‌-ಇಸ್ರೇಲ್ ಸಂಘರ್ಷ: ಗಾಜಾದಲ್ಲಿ ಆಹಾರ, ಹಣವಿಲ್ಲದೆ ಸ್ಥಳಾಂತರಕ್ಕೆ ಪರದಾಡುತ್ತಿರುವ ನಾಗರಿಕರು

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದ ತತ್ತರಿಸಿರುವ ಗಾಜಾದಲ್ಲಿ, ನಾಗರಿಕರು ಸುರಕ್ಷಿತ ಸ್ಥಳಗಳಿಗೆ ತೆರಳಲು ಪರದಾಡುತ್ತಿದ್ದಾರೆ.

ರೈಲಿನಿಂದ ಜಿಗಿದು ಗಾಯಗೊಂಡ ‘ಪ್ಯಾರ್ ಕಾ ಪಂಚನಾಮಾ’ ಖ್ಯಾತಿಯ ನಟಿ ಕರಿಷ್ಮಾ ಶರ್ಮಾ ಆಸ್ಪತ್ರೆಗೆ ದಾಖಲು

ಖ್ಯಾತ ಬಾಲಿವುಡ್ ನಟಿ ಕರಿಷ್ಮಾ ಶರ್ಮಾ ಅವರು ಚಲಿಸುತ್ತಿರುವ ರೈಲಿನಿಂದ ಇಳಿಯುವ ಸಾಹಸಕ್ಕೆ ಕೈ ಹಾಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.