spot_img

ಸರ್ಕಾರಿ ಪಾಲಿಟೆಕ್ನಿಕ್‌ ಕ್ಯಾಂಪಸ್: ಶಾಸಕ ವಿ ಸುನಿಲ್ ಕುಮಾರ್ ಭೇಟಿ – ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ, ಅಧಿಕಾರಿಗಳೊಂದಿಗೆ ಸಭೆ

Date:

spot_img

ಜೂನ್ 16 : ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಜೂನ್ 16 ರಂದು ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ ರೈಟ್ಸ್ ಮೂಲಕ ನೂತನವಾಗಿ ನಿರ್ಮಾಣಗೊಂಡ 01 ಕೋಟಿ ವೆಚ್ಚದ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಬಳಿಕ ಸುಮಾರು 3.97 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿ ಮೂಲಕ ನಿರ್ಮಿಸುತ್ತಿರುವ ಪಾಲಿಟೆಕ್ನಿಕ್ ಕಟ್ಟಡ ವೀಕ್ಷಿಸಿ ಅಧಿಕಾರಿಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಿದರು. ಜೊತೆಗೆ ಮಳೆಗಾಲದ ಪ್ರಕೃತಿ ವಿಕೋಪ ಮುನ್ನೆಚ್ಚರಿಕೆ ಅಂಗವಾಗಿ ಪಾಲಿಟೆಕ್ನಿಕ್ ವಠಾರದಲ್ಲಿ ಮಳೆ ನೀರು ಹರಿದು ಹೋಗಲು ಒಳಚರಂಡಿ ವ್ಯವಸ್ಥೆ ಹಾಗೂ ಹೈ ವೋಲ್ಟೇಜ್ ವಿದ್ಯುತ್‌ ಪರಿವರ್ತಕ ಮತ್ತು ಜನರೇಟರ್ ಗಳಿಗೆ ಪ್ರತ್ಯೇಕ ಮಾಡಿನ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ಯೋಜನೆಯಡಿ ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬಾಲಕರ ಶೌಚಾಲಯ ಕಾಮಗಾರಿ ವೀಕ್ಷಿಸಿ ಕ್ಯಾಂಪಸ್ಸಿನಲ್ಲಿ ಕಾರ್ಯಾಚರಿಸುತ್ತಿರುವ ತಮ್ಮ ಮಹತ್ವಾಕಾಂಕ್ಷೆಯ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್‌ಟ್ಯೂಟ್ (ಕೆಜಿಟಿಟಿಐ) ಕಾರ್ಯಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.

ನಂತರ ಅವರು ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆದ್ಯತೆಯ ಅನುಸಾರ ತ್ವರಿತವಾಗಿ ಪೂರ್ಣಗೊಳಿಸುವ ಕಾಮಗಾರಿಗಳು ಮತ್ತು ಹೆಚ್ಚುವರಿ ಅನುದಾನ ಪಡೆದು ಶೀಘ್ರ ಪೂರೈಸುವ ಕಾಮಗಾರಿಗಳ ಪಟ್ಟಿ ತಯಾರಿಸಿ, ತ್ವರಿತ ವಿಲೇವಾರಿಗಾಗಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಂದು ಪ್ರಕಟಣೆಯಲ್ಲಿ ಶಾಸಕರ ವಿಕಾಸ ಜನಸೇವಾ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಾಸ ಜನಸೇವಾ ಕಛೇರಿ ಕಾರ್ಕಳ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಂಗಳೂರಲ್ಲಿ ಹೆಬ್ಬಾವು ಮಾರಾಟ ಜಾಲ ಭೇದಿಸಿದ ಅರಣ್ಯ ಇಲಾಖೆ: 4 ಆರೋಪಿಗಳ ಬಂಧನ

ಖಚಿತ ಮಾಹಿತಿ ಆಧರಿಸಿ ಮಂಗಳೂರಿನಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಹೆಬ್ಬಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

₹200 ಕೋಟಿ ವಂಚನೆ: ‘ಮದ್ಯದ ದೊರೆ’ ರೋಹನ್ ಸಲ್ಡಾನಾ ಅಂದರ್!

ಕೋಟ್ಯಂತರ ರೂಪಾಯಿ ಸಾಲದ ಆಮಿಷವೊಡ್ಡಿ ದೇಶಾದ್ಯಂತದ ಉದ್ಯಮಿಗಳಿಗೆ ಸುಮಾರು ₹200 ಕೋಟಿಗೂ ಅಧಿಕ ಹಣ ವಂಚಿಸಿದ್ದ ಕುಖ್ಯಾತ ವಂಚಕ ರೋಹನ್ ಸಲ್ಡಾನಾನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅಮರನಾಥ ಯಾತ್ರೆಗೆ ಅಡ್ಡಿಯಾದ ಭೂಕುಸಿತ: ಓರ್ವ ಸಾವು, ಮೂವರಿಗೆ ಗಾಯ, ಯಾತ್ರೆ ತಾತ್ಕಾಲಿಕ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಪವಿತ್ರ ಅಮರನಾಥ ಯಾತ್ರೆಯ ಮಾರ್ಗದಲ್ಲಿ ಭೂಕುಸಿತಕ್ಕೆ ಕಾರಣವಾಗಿದ್ದು, ದುರದೃಷ್ಟವಶಾತ್ ಓರ್ವ ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ.

ಹಿರಿಯಡಕ: ಅನಾರೋಗ್ಯದಿಂದ ಜಿಗುಪ್ಸೆಗೊಂಡ ಮಹಿಳೆ ನೇಣಿಗೆ ಶರಣು

ಕಳೆದ ಬುಧವಾರ, ಜುಲೈ 16, 2025ರ ರಾತ್ರಿ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 44 ವರ್ಷ ವಯಸ್ಸಿನ ರೇಖಾ ಎಂಬುವವರು ತಮ್ಮ ಮನೆಯ ಮಲಗುವ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.