ಸರ್ಕಾರಿ ಪಾಲಿಟೆಕ್ನಿಕ್‌ ಕ್ಯಾಂಪಸ್: ಶಾಸಕ ವಿ ಸುನಿಲ್ ಕುಮಾರ್ ಭೇಟಿ – ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ, ಅಧಿಕಾರಿಗಳೊಂದಿಗೆ ಸಭೆ

Date:

spot_img

ಜೂನ್ 16 : ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಜೂನ್ 16 ರಂದು ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ ರೈಟ್ಸ್ ಮೂಲಕ ನೂತನವಾಗಿ ನಿರ್ಮಾಣಗೊಂಡ 01 ಕೋಟಿ ವೆಚ್ಚದ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕರು ಬಳಿಕ ಸುಮಾರು 3.97 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿ ಮೂಲಕ ನಿರ್ಮಿಸುತ್ತಿರುವ ಪಾಲಿಟೆಕ್ನಿಕ್ ಕಟ್ಟಡ ವೀಕ್ಷಿಸಿ ಅಧಿಕಾರಿಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಿದರು. ಜೊತೆಗೆ ಮಳೆಗಾಲದ ಪ್ರಕೃತಿ ವಿಕೋಪ ಮುನ್ನೆಚ್ಚರಿಕೆ ಅಂಗವಾಗಿ ಪಾಲಿಟೆಕ್ನಿಕ್ ವಠಾರದಲ್ಲಿ ಮಳೆ ನೀರು ಹರಿದು ಹೋಗಲು ಒಳಚರಂಡಿ ವ್ಯವಸ್ಥೆ ಹಾಗೂ ಹೈ ವೋಲ್ಟೇಜ್ ವಿದ್ಯುತ್‌ ಪರಿವರ್ತಕ ಮತ್ತು ಜನರೇಟರ್ ಗಳಿಗೆ ಪ್ರತ್ಯೇಕ ಮಾಡಿನ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ಯೋಜನೆಯಡಿ ಪಾಲಿಟೆಕ್ನಿಕ್ ಕ್ಯಾಂಪಸ್ಸಿನಲ್ಲಿ 10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬಾಲಕರ ಶೌಚಾಲಯ ಕಾಮಗಾರಿ ವೀಕ್ಷಿಸಿ ಕ್ಯಾಂಪಸ್ಸಿನಲ್ಲಿ ಕಾರ್ಯಾಚರಿಸುತ್ತಿರುವ ತಮ್ಮ ಮಹತ್ವಾಕಾಂಕ್ಷೆಯ ಕರ್ನಾಟಕ ಜರ್ಮನ್ ಟೆಕ್ನಿಕಲ್ ಟ್ರೈನಿಂಗ್ ಇನ್ಸ್‌ಟ್ಯೂಟ್ (ಕೆಜಿಟಿಟಿಐ) ಕಾರ್ಯಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.

ನಂತರ ಅವರು ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆದ್ಯತೆಯ ಅನುಸಾರ ತ್ವರಿತವಾಗಿ ಪೂರ್ಣಗೊಳಿಸುವ ಕಾಮಗಾರಿಗಳು ಮತ್ತು ಹೆಚ್ಚುವರಿ ಅನುದಾನ ಪಡೆದು ಶೀಘ್ರ ಪೂರೈಸುವ ಕಾಮಗಾರಿಗಳ ಪಟ್ಟಿ ತಯಾರಿಸಿ, ತ್ವರಿತ ವಿಲೇವಾರಿಗಾಗಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಂದು ಪ್ರಕಟಣೆಯಲ್ಲಿ ಶಾಸಕರ ವಿಕಾಸ ಜನಸೇವಾ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಾಸ ಜನಸೇವಾ ಕಛೇರಿ ಕಾರ್ಕಳ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.