spot_img

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ – ನಳಿನ್ ಕುಮಾರ್

Date:

ಉಡುಪಿ: ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹಿಂಸಾತ್ಮಕ ಘಟನೆಗಳು ಹಾಗೂ ಹಿಂದೂ ಸಂಘಟನೆಗಳ ಮೇಲಿನ ದಾಳಿಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಮಾಜಿ ಸಂಸದ ಮತ್ತು ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಸರ್ಕಾರದ ವಿರುದ್ಧ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಸರ್ಕಾರ ಮೊದಲು ತನ್ನ ಕರ್ತವ್ಯ ಮಾಡಲಿ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಹಿಂದೂ ಮುಖಂಡರ ಮೇಲಿನ ದಾಳಿ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಮಂಗಳೂರಿನಲ್ಲಿ ಬೆಳೆದುಬಂದಿರುವ ಪರಿಸ್ಥಿತಿ ಕಾಶ್ಮೀರವನ್ನು ಹೋಲುತ್ತಿದೆ. ” ಎಂದು ಹೇಳಿದ್ದಾರೆ.

“ಈ ದೇಶದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವವರನ್ನು ಸರಿಯಾಗಿ ಶಿಕ್ಷಿಸಲಾಗುತ್ತಿಲ್ಲ. ಆದರೆ ಜನಿವಾರ ಹಾಕಿದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಈ ಸರ್ಕಾರ ಏನು ಮಾಡುತ್ತಿದೆ ಎಂಬ ಪ್ರಶ್ನೆ ಎಲ್ಲರಿಗೂ ಇದೆ,” ಎಂದರು.

ರಾಜ್ಯ ಸರ್ಕಾರದ ಕಾರ್ಯಪದ್ಧತಿಯನ್ನು ತರಾಟೆಗೆ ತೆಗೆದುಕೊಂಡ ನಳಿನ್, “ಸರ್ಕಾರ ತನ್ನ ಕರ್ತವ್ಯ ಬದ್ಧತೆಯಿಂದ ನಿಭಾಯಿಸಬೇಕು. ತಪ್ಪುಗಳನ್ನು ಇತರರ ಮೇಲೆ ಹೋರಿಸದೇ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ತಾವು ಹೊಣೆಯುಳ್ಳವರಾಗಿ ನಡೆದುಕೊಳ್ಳಬೇಕು,” ಎಂದು ಟೀಕಿಸಿದರು.

ಅವರು ಮುಂದುವರಿದು, “ಕರ್ನಾಟಕದ ನೈತಿಕತೆ ಹಾಗೂ ಶಾಸನಸಮ್ಮತ ಆಡಳಿತ ವ್ಯವಸ್ಥೆಗೆ ಈಗ ಬಹಳ ಅವಹೇಳನೆಯಾಗುತ್ತಿದೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ, ಜನರು ತಾವೇ ಉತ್ತರ ನೀಡುವ ಪರಿಸ್ಥಿತಿ ಬರುವುದು ಖಚಿತ,” ಎಂದು ಎಚ್ಚರಿಕೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.

ಹಿಂದೂ ಹೆಣ್ಣು ಮಕ್ಕಳ ಮೇಲೆ ಪುರುಷ ಪೇದೆಯ ದೌರ್ಜನ್ಯ ಎಷ್ಟು ಸಮಂಜಸ ? ? – ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳ

ಹಿಂದೂ ಹೆಣ್ಣು ಮಕ್ಕಳ ಮೇಲೆ ಪುರುಷ ಪೇದೆಯ ದೌರ್ಜನ್ಯ ಎಷ್ಟು ಸಮಂಜಸ ?ಎಂದು ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಮೇಲ್‌ನಲ್ಲಿ ಅಡಗಿರುವ 5 ಮಹತ್ವದ ವೈಶಿಷ್ಟ್ಯಗಳು: ಇಮೇಲ್ ಬಳಕೆ ಇನ್ನಷ್ಟು ಸುಲಭ

ಜಿಮೇಲ್‌ನಲ್ಲಿರುವ 5 ಮಹತ್ವದ ವೈಶಿಷ್ಟ್ಯಗಳು ನಮ್ಮ ದೈನಂದಿನ ಕೆಲಸವನ್ನು ಇನ್ನಷ್ಟು ಸುಲಭ ಮತ್ತು ಪರಿಣಾಮಕಾರಿಯಾಗಿಸುತ್ತವೆ.