spot_img

ಮೊಮ್ಮಕ್ಕಳನ್ನು ರಕ್ಷಿಸಲು ನೀರಿಗೆ ಹಾರಿದ ತಾತ, ಮೂವರು ನೀರುಪಾಲು

Date:

spot_img

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನಲ್ಲಿ ಶನಿವಾರ ಸಂಜೆ ನೀರಿನಲ್ಲಿ ಮುಳುಗಿ ತಾತ ಮತ್ತು ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದಾರೆ. ಈ ದುರಂತ ಘಟನೆ ಕಾವೇರಿ ನದಿ ತೀರದಲ್ಲಿ ನಡೆದಿದೆ. ಮೃತರನ್ನು ಚೌಡಯ್ಯ (70), ಭರತ್ (13), ಮತ್ತು ಧನುಷ್ (10) ಎಂದು ಗುರುತಿಸಲಾಗಿದೆ. ಇವರು ಟಿ. ನರಸೀಪುರ ಪಟ್ಟಣದ ತಿರುಮಕೂಡಲು ನಿವಾಸಿಗಳು.

ಘಟನೆಯ ಸಂದರ್ಭದಲ್ಲಿ, ಇಬ್ಬರು ಮೊಮ್ಮಕ್ಕಳು ತಮ್ಮ ತಾತನ ಜೊತೆ ಕಾವೇರಿ ನದಿ ತೀರಕ್ಕೆ ಫಿರಂಗಿ ಮಾಡಲು ಬಂದಿದ್ದರು. ಆಗ ಆಕಸ್ಮಿಕವಾಗಿ ಮಕ್ಕಳು ನೀರಿಗೆ ಬಿದ್ದರು. ಈಜಲು ಬಾರದ ಮಕ್ಕಳು ನೀರಿನಲ್ಲಿ ಒದ್ದಾಡುತ್ತಿರುವುದನ್ನು ಕಂಡ ತಾತ, ಅವರನ್ನು ರಕ್ಷಿಸಲು ನೀರಿಗೆ ಇಳಿದರು. ಆದರೆ, ತಾತನಿಗೂ ಈಜು ತಿಳಿದಿರದ ಕಾರಣ ಅವರೂ ನೀರಿನಲ್ಲಿ ಮುಳುಗಿದರು.

ಈ ಸುದ್ದಿ ತಿಳಿದು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಘಟನಾಸ್ಥಳಕ್ಕೆ ತೆರಳಿ, ಮೂವರ ಮೃತದೇಹಗಳನ್ನು ನೀರಿನಿಂದ ಹೊರತೆಗೆದರು. ಈ ಘಟನೆ ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಯಲ್ಲಾಪುರ ಸಮೀಪ ಭೀಕರ ರಸ್ತೆ ಅಪಘಾತ- ಕೆಎಸ್ಆರ್‌ಟಿಸಿ ಬಸ್-ಲಾರಿ ಡಿಕ್ಕಿ, ಮೂವರು ಬಲಿ

ಕೇರಳ ಮೂಲದ ಲಾರಿ, ಬಾಗಲಕೋಟೆ ಬಸ್ - ಯಲ್ಲಾಪುರ ಘಟ್ಟದಲ್ಲಿ ಸಂಭವಿಸಿದ ಭೀಕರ ಅಪಘಾತ

ಮನುಷ್ಯರಂತೆ ಯೋಚಿಸುವ ಏಜೆಂಟಿಕ್ Ai ನಿರ್ಮಿಸುತ್ತಿದೆ ಮೈಕ್ರೋಸಾಫ್ಟ್

ಕೀಬೋರ್ಡ್, ಮೌಸ್‌ಗಳಿಲ್ಲದ ಭವಿಷ್ಯದ ವಿಂಡೋಸ್ 2030

ಕೋಸು ತರಕಾರಿಯಲ್ಲ, ಅದೊಂದು ಸೂಪರ್ ಫುಡ್! ದೇಹದ ರಕ್ಷಣೆಗೆ ಇದರ ಪಾತ್ರ ಅತ್ಯಗತ್ಯ ಏಕೆ?

ಸಾಮಾನ್ಯವಾಗಿ ಆಹಾರದಲ್ಲಿ ಹಿಂದುಳಿದಿರುವ ಕೋಸು, ವಾಸ್ತವವಾಗಿ ಆರೋಗ್ಯದ ಭಂಡಾರವೇ ಸರಿ

ಪರ್ಕಳ: ಅಗ್ರಹಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಳೆಯಿಂದ ಸಿಂಹಮಾಸದ ವಿಶೇಷ ಪೂಜೆ

ಹೆರ್ಗ ಗ್ರಾಮದ ಅಗ್ರಹಾರದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸಿಂಹಮಾಸದ ವಿಶೇಷ ಪೂಜೆಯಾದ ಸೋಣಾರತಿಯು ನಾಳೆಯಿಂದ ಆರಂಭಗೊಳ್ಳಲಿದೆ.