spot_img

‘ಮದ್ಯ ಪ್ರಿಯರಿಗೆ’ ಭರ್ಜರಿ ಗುಡ್ ನ್ಯೂಸ್ – ಪ್ರತೀ ಬಾಟೆಲ್ ಮೇಲೆ 10 ರಿಂದ 100 ರೂ ಕಡಿತ!!

Date:

ಆಂಧ್ರಪ್ರದೇಶ : ಮದ್ಯಪ್ರಿಯರಿಗೆ ಸಿಹಿ ಸುದ್ದಿ! ನಮ್ಮ ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಮದ್ಯದ ಬೆಲೆಗಳನ್ನು ಭರ್ಜರಿಯಾಗಿ ಕಡಿತಗೊಳಿಸಲಾಗಿದೆ. ಪ್ರತಿ ಬಾಟಲಿಯ ಮೇಲೆ ₹10 ರಿಂದ ₹100 ವರೆಗೆ ಬೆಲೆ ಇಳಿಕೆ ಮಾಡಲಾಗಿದ್ದು, ಇದರಿಂದ ಗ್ರಾಹಕರಿಗೆ ಮಾಸಿಕ ₹116 ಕೋಟಿಗಳಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ, ಮದ್ಯ ನೀತಿಯಲ್ಲಿ ಪಾರದರ್ಶಕತೆ ಕಾಯ್ದುಕೊಂಡು, ಕೈಗೆಟುಕುವ ದರದಲ್ಲಿ ಮದ್ಯ ಪೂರೈಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಅಲ್ಲದೆ, ನಕಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವರದಿಗಳ ಪ್ರಕಾರ, ರಾಜ್ಯದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ಮದ್ಯದ ಬ್ರಾಂಡ್‌ಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಅಕ್ರಮ ಅಥವಾ ಹಾನಿಕಾರಕ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚಿಸಲಾಗಿದೆ. ಹೊಸ ಮದ್ಯ ನೀತಿಯು ರಾಜ್ಯದ ಆದಾಯವನ್ನು ಹೆಚ್ಚಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಕುಸಿದಿದ್ದ ಮದ್ಯ ಮಾರಾಟ ಈಗ ಮತ್ತೆ ಚೇತರಿಸಿಕೊಂಡಿದ್ದು, ನಕಲಿ ಬ್ರಾಂಡ್‌ಗಳಿಗೆ ಕಡಿವಾಣ ಬಿದ್ದಿರುವುದರಿಂದ ಬಡ ವರ್ಗಗಳಲ್ಲಿನ ವ್ಯಸನವನ್ನು ನಿಗ್ರಹಿಸಲು ಸಹಾಯವಾಗಿದೆ ಎಂದಿದ್ದಾರೆ.

ಈ ಬೆಲೆ ಕಡಿತದಿಂದಾಗಿ, ಆಂಧ್ರಪ್ರದೇಶದಲ್ಲಿ ಸುಮಾರು 30 ಬ್ರಾಂಡ್‌ಗಳ ಮದ್ಯದ ಬೆಲೆಗಳು ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿಗಿಂತ ಕಡಿಮೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಮದ್ಯಪ್ರಿಯರಿಗೆ ನಿಜಕ್ಕೂ ಭರ್ಜರಿ ಗುಡ್ ನ್ಯೂಸ್ ಆಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ಮಿಂಚಿದ ನಚಿಕೇತ ವಿದ್ಯಾಲಯ : ಒಟ್ಟು 6 ಪದಕಗಳ ಸಾಧನೆ

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.