spot_img

ಹಸಿ ಮೆಣಸಿನಕಾಯಿ ಆರೋಗ್ಯಕ್ಕೆ ವರದಾನ!

Date:

ಹಸಿ ಮೆಣಸಿನಕಾಯಿ ಕೇವಲ ಅಡುಗೆಗೆ ರುಚಿ ಮತ್ತು ಪರಿಮಳ ನೀಡುವುದಷ್ಟೇ ಅಲ್ಲ, ಅನೇಕ ಆರೋಗ್ಯ ಪ್ರಯೋಜನಗಳನ್ನು ಸಹ ಒದಗಿಸುತ್ತದೆ. ಇದು ಕಬ್ಬಿಣ, ಪೊಟ್ಯಾಸಿಯಮ್, ವಿಟಮಿನ್ ಸಿ, ಎ, ಬಿ5 ಸೇರಿದಂತೆ ಹಲವಾರು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಹಾಗಾಗಿ ಇದರ ನಿಯಮಿತ ಸೇವನೆ ದೇಹಕ್ಕೆ ಹಲವಾರು ರೀತಿಯಲ್ಲಿ ಉಪಯೋಗಕಾರಿ ಎಂದು ತಜ್ಞರು ಹೇಳುತ್ತಾರೆ.

ಜೀರ್ಣಕ್ರಿಯೆ ಮತ್ತು ತೂಕ ನಿಯಂತ್ರಣಕ್ಕೆ ಸಹಾಯ
ಹಸಿ ಮೆಣಸಿನಕಾಯಿಯಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಗಮಗೊಳಿಸಿ, ಹೊಟ್ಟೆ ಸಂಬಂಧಿತ ಸಮಸ್ಯೆಗಳನ್ನು ತಗ್ಗಿಸುತ್ತದೆ. ಇದರಲ್ಲಿ ಕಡಿಮೆ ಕ್ಯಾಲೊರಿಗಳು ಇರುವುದರಿಂದ ತೂಕ ತಗ್ಗಿಸಲು ಸಹಕಾರಿಯಾಗುತ್ತದೆ. ಬೊಜ್ಜು ನಿಯಂತ್ರಣದ ದೃಷ್ಠಿಯಿಂದ ಒಣ ಮೆಣಸಿನಕಾಯಿ ಬದಲಿಗೆ ಹಸಿ ಮೆಣಸಿನಕಾಯಿ ಸೇವನೆ ಉತ್ತಮ ಆಯ್ಕೆಯಾಗಿದೆ.

ಚರ್ಮಕ್ಕೆ ಉಜ್ವಲತೆ ಮತ್ತು ರಕ್ಷಣಾ ಶಕ್ತಿ
ವಿಟಮಿನ್ ಸಿ ಹಾಗೂ ಆಂಟಿ-ಆಕ್ಸಿಡೆಂಟ್ಸ್‌ ಇರುವುದರಿಂದ, ಇದು ಚರ್ಮದ ಆರೋಗ್ಯವನ್ನು ಕಾಪಾಡಿ, ಮೊಡವೆ, ಸುಕ್ಕು ಮತ್ತು ಕಲೆಗಳನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಕಾಲಜನ್ ಉತ್ಪಾದನೆ ಹೆಚ್ಚಿಸಿ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

ಕಣ್ಣಿನ ದೃಷ್ಟಿ ಮತ್ತು ರೋಗನಿರೋಧಕ ಶಕ್ತಿ
ಹಸಿ ಮೆಣಸಿನಕಾಯಿಯಲ್ಲಿರುವ ವಿಟಮಿನ್ ಎ ಕಣ್ಣಿನ ದೃಷ್ಟಿಯನ್ನು ಸುಧಾರಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಇದಲ್ಲದೆ, ಬೀಟಾ-ಕ್ಯಾರೋಟಿನ್, ಲುಟೀನ್ ಮತ್ತು ಜಿಯಾಕ್ಸಾಂಥಿನ್‌ ಮುಂತಾದ ಪೋಷಕಾಂಶಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ಕ್ಯಾನ್ಸರ್ ತಡೆಯಲು ಸಹಾಯಕ!
ಹಸಿ ಮೆಣಸಿನಕಾಯಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹವನ್ನು ಫ್ರೀ ರಾಡಿಕಲ್ಗಳಿಂದ ರಕ್ಷಿಸಿ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಜೊತೆಗೆ ಜೀರ್ಣಾಂಗ ಆರೋಗ್ಯವನ್ನು ಕಾಪಾಡಲು ಸಹ ಇದು ಸಹಕಾರಿಯಾಗುತ್ತದೆ.

ದಿನಕ್ಕೆ ಎಷ್ಟು ಸೇವನೆ ಮಾಡಬೇಕು?
ಸಾಮಾನ್ಯ ಆರೋಗ್ಯವನ್ನು ಕಾಪಾಡಿಕೊಳ್ಳಲು ದಿನಕ್ಕೆ 2-3 ಹಸಿ ಮೆಣಸಿನಕಾಯಿಗಳನ್ನು ಸೇವಿಸುವುದು ಉತ್ತಮ. ಆದರೆ, ಅತಿಯಾಗಿ ತಿನ್ನುವುದು ಕೆಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಸಮತೋಲನವಾಗಿಯೇ ಸೇವಿಸುವುದು ಶ್ರೇಷ್ಟ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.