spot_img

ಗ್ರೀನ್ ಪಾರ್ಕ್ ಶಾಲಾ ಮಕ್ಕಳಿಂದ ಗದ್ದೆಯಲ್ಲಿ ನೇಜಿ ನಾಟಿ

Date:

spot_img

ಹಿರಿಯಡಕ: ಗ್ರೀನ್ ಪಾರ್ಕ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಬೊಮ್ಮರಬೆಟ್ಟು ಗ್ರಾಮದ ಮುಂಡೂಜೆ ಸುರೇಶ್ ನಾಯಕ್ ಅವರ ಹೊಲದಲ್ಲಿ ನೇಜಿ ನೆಡುವ ಮೂಲಕ ಕೃಷಿ ಚಟುವಟಿಕೆಗಳ ಅನುಭವ ಪಡೆದರು. ಸುಮಾರು 70 ವಿದ್ಯಾರ್ಥಿಗಳು ಉತ್ಸಾಹದಿಂದ ಈ ಕ್ಷೇತ್ರಪ್ರವಾಸದಲ್ಲಿ ಭಾಗವಹಿಸಿದರು.

ವಿದ್ಯಾರ್ಥಿಗಳ ಆಸಕ್ತಿ ಮತ್ತು ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸುರೇಶ್ ನಾಯಕ್ ಅವರು, ಮಕ್ಕಳಿಗೆ ಸಿಹಿ ಹಂಚಿ ಸಂತೋಷಪಟ್ಟರು. ಈ ಸಮಯದಲ್ಲಿ ಶಾಲೆಯ ಆಡಳಿತಾಧಿಕಾರಿ ಶೇಖರ್ ಗುಜ್ಜರ್‌ಬೆಟ್ಟು, ಸಂಯೋಜಕಿ ಉಷಾ ರಾವ್, ಶಿಕ್ಷಕಿಯರಾದ ಶುಭ್ರ ಶೆಟ್ಟಿ, ರಂಜಿತಾ ಮತ್ತು ದೈಹಿಕ ಶಿಕ್ಷಕಿ ಮಮತಾ ಶೆಟ್ಟಿ ಉಪಸ್ಥಿತರಿದ್ದರು.

ಕೃಷಿಯ ಮಹತ್ವ ಹಾಗೂ ಕೃಷಿ ಕಾರ್ಯಗಳ ಕುರಿತು ಪ್ರಾಯೋಗಿಕ ಜ್ಞಾನ ಪಡೆದ ಮಕ್ಕಳು, ತಮ್ಮ ಕ್ಷೇತ್ರ ಪ್ರವಾಸದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜ್ಞಾನಸುಧಾದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ; ನಡೆ-ನುಡಿ-ನಡವಳಿಕೆಯಿಂದ ಚಾರಿತ್ರ್ಯ ನಿರ್ಮಾಣ : ದೀಪಕ್‌ರಾಜ್

ರಾಷ್ಟ್ರೀಯ ತರಬೇತುದಾರ ಶ್ರೀ ದೀಪಕ್ ರಾಜ್ ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕ್ರಿಯೇಟಿವ್ ಕಾಲೇಜಿಗೆ ಆಗಸ್ಟ್ 15ರಂದು ಪದ್ಮಶ್ರೀ ಪುರಸ್ಕೃತ, ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್ ಆಗಮನ

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.

ಪ್ರಾಮಾಣಿಕವಾಗಿರುವವರು ಆರೋಗ್ಯವಾಗಿರುತ್ತಾರೆ : ಶ್ರೀಮತಿ ಜ್ಯೋತಿ ಮಹಾದೇವ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್‌ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಹಿಪ್ನೋ ಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್‌ ಮಾತನಾಡಿದರು.

ಹಿರಿಯಡಕ ಬಂಟರ ಸಂಘದಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಯಶಸ್ವಿ

ಬಂಟರ ಸಂಘ ಹಿರಿಯಡಕ (ರಿ.) ವತಿಯಿಂದ ಆಗಸ್ಟ್ 10, ಭಾನುವಾರದಂದು ಹಿರಿಯಡಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ 'ಆಟಿಡೊಂಜಿ ದಿನ' ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.