spot_img

ಗೃಹಲಕ್ಷ್ಮಿ ಯೋಜನೆ ನಿರಂತರ: ಚುನಾವಣಾ ಆರೋಪ ಸುಳ್ಳು – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

spot_img

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ನಿರಂತರವಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಈ ಯೋಜನೆ ರದ್ದಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸಲು ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. “ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರ ಕಲ್ಯಾಣಕ್ಕಾಗಿ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೇರವಾಗಿ ಯಜಮಾನಿಯ ಖಾತೆಗೆ ಜಮಾ ಮಾಡಲಾಗುತ್ತಿದೆ. ಚುನಾವಣಾ ಕ್ಷೇತ್ರಗಳಿಗೆ ಮಾತ್ರ ಹಣ ನೀಡಲಾಗುತ್ತಿದೆ ಎಂಬ ಆರೋಪ ಶುದ್ಧ ಸುಳ್ಳು, ಆಧಾರರಹಿತ” ಎಂದು ಅವರು ಸ್ಪಷ್ಟಪಡಿಸಿದರು.

ಯೋಜನೆಗೆ ಯಾವುದೇ ಅಡೆತಡೆ ಇಲ್ಲ ಎಂದು ತಿಳಿಸಿದ ಸಚಿವೆ, “ಜಿಎಸ್ಟಿ, ಜಿಎಸ್ಟಿಯೇತರ ಹಾಗೂ ಆದಾಯ ತೆರಿಗೆ ಅಂಶಗಳನ್ನು ಪರಿಗಣಿಸಿ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ನವೆಂಬರ್, ಡಿಸೆಂಬರ್ ತಿಂಗಳ ಹಣ ಶೀಘ್ರದಲ್ಲೇ ಸಂದಾಯ ಮಾಡಲಾಗುವುದು. ಗೃಹಲಕ್ಷ್ಮಿ ಯೋಜನೆ ಚುನಾವಣೆಗೋಸ್ಕರವಲ್ಲ, ಅದು ನಿರಂತರವಾಗಿ ಮುಂದುವರಿಯಲಿದೆ” ಎಂದು ಭರವಸೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದ ಗೋವಿಂದೂರಿನಲ್ಲಿ ಭೀಕರ ಗಾಳಿ ಮಳೆಗೆ ಅಯ್ಯಪ್ಪ ಶಿಬಿರದ ಮೇಲ್ಚಾವಣಿ ಕುಸಿತ

ಇಂದು ಮದ್ಯಾಹ್ನ 3:00 ಸುಮಾರಿಗೆ ಬಿರುಸಿನ ಗಾಳಿ ಮಳೆಗೆ ಕಾರ್ಕಳದ ಗೋವಿಂದೂರಿನ ಅಯ್ಯಪ್ಪ ಶಿಬಿರದ ಮೇಲ್ಚಾವಣಿ ಗಾಳಿಯ ರಭಸಕ್ಕೆ ಹಾರಿ ನುಚ್ಚುನೂರಾಗಿದೆ.

40 ದಾಟಿದವರ ಸಂಧು ನೋವಿಗೆ ಆಯುರ್ವೇದದಲ್ಲಿದೆ ಪರಿಣಾಮಕಾರಿ ಪರಿಹಾರ!

ವಯಸ್ಸು 40 ದಾಟಿದಂತೆ ಕಾಣಿಸಿಕೊಳ್ಳುವ ಸಂಧು ನೋವು ಅದೆಷ್ಟೋ ಜನರನ್ನು ಕಾಡುತ್ತದೆ.

ವಾಟ್ಸಾಪ್‌ನಿಂದ ಹೊಸ AI ವೈಶಿಷ್ಟ್ಯ ‘ಕ್ವಿಕ್ ರಿಕ್ಯಾಪ್’: ಇನ್ನು ಮಿಸ್ಡ್ ಮೆಸೇಜ್ ಚಿಂತೆ ಇಲ್ಲ!

ಮೆಟಾ ಕಂಪನಿಯು ಅಭಿವೃದ್ಧಿಪಡಿಸಿರುವ ವಾಟ್ಸಾಪ್ ಕ್ವಿಕ್ ರಿಕ್ಯಾಪ್ AI (WhatsApp Quick Recap AI) ಎಂಬ ನೂತನ ಕೃತಕ ಬುದ್ಧಿಮತ್ತೆ ಆಧಾರಿತ ವೈಶಿಷ್ಟ್ಯವು, ಬಳಕೆದಾರರು ಗ್ರೂಪ್‌ಗಳು ಅಥವಾ ವೈಯಕ್ತಿಕ ಚಾಟ್‌ಗಳಲ್ಲಿ ಮಿಸ್ ಮಾಡಿಕೊಂಡ ಸಂದೇಶಗಳನ್ನು ಸರಳ ಮತ್ತು ಅರ್ಥಪೂರ್ಣವಾಗಿ ಸಂಕ್ಷಿಪ್ತಗೊಳಿಸಲು ನೆರವಾಗಲಿದೆ.

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.