ಮಧ್ಯಪ್ರದೇಶದಲ್ಲಿ ಅಟ್ಟಹಾಸ: ನಿವೃತ್ತ ಸೇನಾಧಿಕಾರಿಯನ್ನು ಕಿಲೋ ಮೀಟರ್ ದೂರ ಬಾನೆಟ್ ಮೇಲೆ ಎಳೆದೊಯ್ದ ಪಾಪಿಗಳು!

Date:

spot_img

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಾನವೀಯತೆ ಮರೆತ ವಾಹನ ಸವಾರರು, ನಿವೃತ್ತ ಸೇನಾ ಯೋಧರೊಬ್ಬರನ್ನು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಕೂರಿಸಿಕೊಂಡು ಕಿಲೋ ಮೀಟರ್‌ಗಳಷ್ಟು ದೂರ ಎಳೆದೊಯ್ದ ಭೀಕರ ಘಟನೆ ನಡೆದಿದೆ. ಕ್ಷುಲ್ಲಕ ರಸ್ತೆ ಅಪಘಾತದ ಜಗಳವು ಕೊನೆಗೆ ಪ್ರಾಣಾಪಾಯ ಉಂಟುಮಾಡುವ ಮಟ್ಟಕ್ಕೆ ತಲುಪಿದ್ದು, ಈ ಘಟನೆಯ ವಿಡಿಯೋ ಇದೀಗ ಇಡೀ ದೇಶದ ಗಮನ ಸೆಳೆದಿದೆ.

ಗ್ವಾಲಿಯರ್‌ನ ಮಹಾರಾಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆದಿತ್ಯ ಪುರಂ ಎಂಬಲ್ಲಿ ಶನಿವಾರ ತಡರಾತ್ರಿ 11 ಗಂಟೆಯ ಸುಮಾರಿಗೆ ಈ ಅಮಾನವೀಯ ಕೃತ್ಯ ನಡೆದಿದೆ. ನಿವೃತ್ತ ಯೋಧ ಕಲ್ಯಾಣ್ ಕಿಶೋರ್ ಕಾಂತ್ ಶರ್ಮಾ ಅವರು ತಮ್ಮ ಸಂಬಂಧಿಕರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಮತ್ತೊಂದು ಕಾರಿಗೆ ಅಲ್ಪ ಪ್ರಮಾಣದ ಹಾನಿಯಾಗಿತ್ತು. ಈ ಸಂಬಂಧ ಮಾತಿನ ಚಕಮಕಿ ಆರಂಭವಾದಾಗ ಎದುರಾಳಿ ಕಾರಿನಲ್ಲಿದ್ದ ಯುವಕರು ನಿವೃತ್ತ ಅಧಿಕಾರಿಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ.

ಘರ್ಷಣೆ ತೀವ್ರಗೊಂಡು ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ, ಅವರನ್ನು ತಡೆಯಲು ಶರ್ಮಾ ಅವರು ಕಾರಿನ ಮುಂದೆ ನಿಂತಿದ್ದಾರೆ. ಆದರೆ, ಕ್ರೂರವಾಗಿ ವರ್ತಿಸಿದ ಚಾಲಕ ಅಡ್ಡ ನಿಂತಿದ್ದ ಅಧಿಕಾರಿಯ ಮೇಲೆಯೇ ಕಾರು ಹತ್ತಿಸಲು ಮುಂದಾಗಿದ್ದಾನೆ. ಈ ವೇಳೆ ಬಾನೆಟ್ ಮೇಲೆ ಹಾರಿದ ಅಧಿಕಾರಿ ಅದನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಯೋಧ ಕಾರಿನ ಮೇಲಿದ್ದರೂ ಕಿಂಚಿತ್ತೂ ಕರುಣೆ ತೋರದ ಕಿರಾತಕರು ಸುಮಾರು 1 ಕಿಲೋಮೀಟರ್ ದೂರದವರೆಗೆ ಅತಿ ವೇಗವಾಗಿ ಕಾರನ್ನು ಚಲಾಯಿಸಿದ್ದಾರೆ. ಕೊನೆಗೆ ಸಡನ್ ಬ್ರೇಕ್ ಹಾಕಿದ ಪರಿಣಾಮ ಶರ್ಮಾ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಈ ದೃಶ್ಯವನ್ನು ಚಿತ್ರೀಕರಿಸಿದ್ದು, ಪೊಲೀಸರು ಕಾರನ್ನು ವಶಪಡಿಸಿಕೊಂಡು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.