spot_img

“ಅವರು ಆರೆಸ್ಸೆಸ್ ಗೀತೆ ಹಾಡಬಹುದು, ಕುಂಭಮೇಳಕ್ಕೂ ಹೋಗಬಹುದು, ಅಂಬಾನಿ ಮಗನ ಮದುವೆಯಲ್ಲೂ ಭಾಗವಹಿಸಬಹುದು”: ಡಿಕೆಶಿ ವಿರುದ್ಧ ಕೆ.ಎನ್.ರಾಜಣ್ಣ ಕಿಡಿ

Date:

spot_img
spot_img

ತುಮಕೂರು : ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಅವರು ಆರೆಸ್ಸೆಸ್ ಗೀತೆ ಹಾಡಬಹುದು, ಕುಂಭಮೇಳಕ್ಕೂ ಹೋಗಬಹುದು, ಅಂಬಾನಿ ಮಗನ ಮದುವೆಯಲ್ಲೂ ಭಾಗವಹಿಸಬಹುದು, ಆದರೆ ನಾವು ಮಾಡಿದರೆ ಮಾತ್ರ ತಪ್ಪು ಎನ್ನುವುದು ವೈರುಧ್ಯ. ಇದಕ್ಕೆ ಕಾಲವೇ ಉತ್ತರ ನೀಡಲಿದೆ” ಎಂದು ರಾಜಣ್ಣ ಟೀಕಿಸಿದ್ದಾರೆ.

ತುಮಕೂರು ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮುವಾದಿಗಳಿಗೆ ಬೆಂಬಲ ನೀಡುವ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರೂ ಡಿಕೆಶಿ ಭಾಗವಹಿಸಿದ್ದಾರೆ. ಜೊತೆಗೆ, ಎಐಸಿಸಿ ಅಧ್ಯಕ್ಷರೇ ಕುಂಭಮೇಳದ ಬಗ್ಗೆ ಪ್ರಶ್ನಿಸಿದ್ದರೂ, ಕುಟುಂಬ ಸಮೇತ ಹೋಗಿ ಪುಣ್ಯ ಸ್ನಾನ ಮಾಡಿದ್ದಾರೆ. ಇಷ್ಟೆಲ್ಲಾ ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾಗಿದ್ದರೂ ಅದು ಸರಿಯೇ? ಎಂದರು.

ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾದ ಆರೆಸ್ಸೆಸ್ ಗೀತೆಯನ್ನು ಸದನದಲ್ಲಿ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ಆದರೆ ನಾವು ನಡೆಸಿದರೆ ಅದು ಅಪರಾಧವಾಗುತ್ತದೆ. ಈ ಎಲ್ಲಾ ವೈರುಧ್ಯಗಳಿಗೆ ಸರಿಯಾದ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದು ರಾಜಣ್ಣ ತಮ್ಮ ಅಸಮಾಧಾನವನ್ನು ಹೊರಹಾಕಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಡ್‌ ಪಾಯ್ಸನಿಂಗ್ ಏಕೆ ಆಗುತ್ತದೆ? ಈ ಸಂದರ್ಭಗಳಲ್ಲಿ ಏನು ತಿನ್ನಬೇಕು, ಏನು ತಿನ್ನಬಾರದು?

ಫುಡ್‌ ಪಾಯ್ಸನಿಂಗ್‌ನಿಂದಾಗಿ ಆರೋಗ್ಯ ಹದಗೆಡುತ್ತದೆ, ಹೊಟ್ಟೆ ನೋವು, ಅತಿಸಾರ (ಲೂಸ್‌ಮೋಷನ್‌), ವಾಕರಿಕೆ ಮತ್ತು ವಾಂತಿಯಂತಹ ಸಮಸ್ಯೆಗಳು ಕಾಡುತ್ತವೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ: ‘ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಪ್ಪೇನಿದೆ?’ – ತಮಿಳುನಾಡು ಮಾದರಿ ಪರಿಶೀಲಿಸಿ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.

ನಿಟ್ಟೆಯಲ್ಲಿ ನಡೆದ ಕೇಶದಾನ

ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನಿಟ್ಟೆ ಕಾಲೇಜಿನಿಂದ 'ಕೇಶ ದಾನ' ಅಭಿಯಾನ ನಡೆಯಿತು.

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , ‘ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು’ ಎಂದು ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , 'ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು' ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.