“ಅವರು ಆರೆಸ್ಸೆಸ್ ಗೀತೆ ಹಾಡಬಹುದು, ಕುಂಭಮೇಳಕ್ಕೂ ಹೋಗಬಹುದು, ಅಂಬಾನಿ ಮಗನ ಮದುವೆಯಲ್ಲೂ ಭಾಗವಹಿಸಬಹುದು”: ಡಿಕೆಶಿ ವಿರುದ್ಧ ಕೆ.ಎನ್.ರಾಜಣ್ಣ ಕಿಡಿ

Date:

spot_img

ತುಮಕೂರು : ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಅವರು ಆರೆಸ್ಸೆಸ್ ಗೀತೆ ಹಾಡಬಹುದು, ಕುಂಭಮೇಳಕ್ಕೂ ಹೋಗಬಹುದು, ಅಂಬಾನಿ ಮಗನ ಮದುವೆಯಲ್ಲೂ ಭಾಗವಹಿಸಬಹುದು, ಆದರೆ ನಾವು ಮಾಡಿದರೆ ಮಾತ್ರ ತಪ್ಪು ಎನ್ನುವುದು ವೈರುಧ್ಯ. ಇದಕ್ಕೆ ಕಾಲವೇ ಉತ್ತರ ನೀಡಲಿದೆ” ಎಂದು ರಾಜಣ್ಣ ಟೀಕಿಸಿದ್ದಾರೆ.

ತುಮಕೂರು ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮುವಾದಿಗಳಿಗೆ ಬೆಂಬಲ ನೀಡುವ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರೂ ಡಿಕೆಶಿ ಭಾಗವಹಿಸಿದ್ದಾರೆ. ಜೊತೆಗೆ, ಎಐಸಿಸಿ ಅಧ್ಯಕ್ಷರೇ ಕುಂಭಮೇಳದ ಬಗ್ಗೆ ಪ್ರಶ್ನಿಸಿದ್ದರೂ, ಕುಟುಂಬ ಸಮೇತ ಹೋಗಿ ಪುಣ್ಯ ಸ್ನಾನ ಮಾಡಿದ್ದಾರೆ. ಇಷ್ಟೆಲ್ಲಾ ಕಾಂಗ್ರೆಸ್ ಸಿದ್ಧಾಂತಕ್ಕೆ ವಿರುದ್ಧವಾಗಿದ್ದರೂ ಅದು ಸರಿಯೇ? ಎಂದರು.

ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾದ ಆರೆಸ್ಸೆಸ್ ಗೀತೆಯನ್ನು ಸದನದಲ್ಲಿ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ಆದರೆ ನಾವು ನಡೆಸಿದರೆ ಅದು ಅಪರಾಧವಾಗುತ್ತದೆ. ಈ ಎಲ್ಲಾ ವೈರುಧ್ಯಗಳಿಗೆ ಸರಿಯಾದ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದು ರಾಜಣ್ಣ ತಮ್ಮ ಅಸಮಾಧಾನವನ್ನು ಹೊರಹಾಕಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ