ಕ್ರಿಯೇಟಿವ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Date:

spot_img

ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು, ಕಾರ್ಕಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ), ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ 12 ಸೆಪ್ಟೆಂಬರ್ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ”ವನ್ನು ಆಯೋಜಿಸಲಾಯಿತು.

ಉದ್ಘಾಟಕರಾಗಿ ಆಗಮಿಸಿದ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಂತೋಷ್ ಶೆಟ್ಟಿ ಇವರು ಮಾತನಾಡಿ ‘ಸಮಾಜದ ಪ್ರಗತಿ ಆರೋಗ್ಯದ ಹಾದಿಯಲ್ಲೇ ಅಡಗಿದೆ. ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ‘ ಎಂದು ಕಿವಿಮಾತುಗಳನ್ನು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಾದೇಶಿಕ ಕಛೇರಿ, ಉಡುಪಿಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯರವರು ‘ ಆರೋಗ್ಯದ ಅರಿವು ಬೆಳಗಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ‘ ಎಂಬ ಸತ್ಯವಾಕ್ಯವನ್ನು ತಮ್ಮ ನಿರರ್ಗಳ ನುಡಿಗಳೊಂದಿಗೆ ತಿಳಿಸಿಕೊಟ್ಟರು. ಅಲ್ಲದೇ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿಯವರು ‘ ಜಾಗೃತಿಯ ಬೆಳಕು ಮೂಡಿದಾಗಲೇ ಸಮಾಜ ಆರೋಗ್ಯ, ಅರಿವು ಮತ್ತು ಪ್ರಗತಿಯನ್ನು ಕಾಣುತ್ತದೆ ‘ ಎಂಬುದಾಗಿ ಹಲವು ಅಮೂಲ್ಯ ವಿಚಾರಗಳನ್ನು ಅಧ್ಯಕ್ಷೀಯ ನುಡಿಗಳೊಂದಿಗೆ ಹಂಚಿಕೊಂಡರು.

ಈ ಸಂದರ್ಭದಲ್ಲಿ ಕರುಣಾಕರ ಕಡಂಬ, ಸದಸ್ಯರು, ತಾಲೂಕು ಜನಜಾಗೃತಿ ವೇದಿಕೆ , ವಾಸು ಶೆಟ್ಟಿ, ಸದಸ್ಯರು, ತಾಲೂಕು ಜನ ಜಾಗೃತಿ ವೇದಿಕೆ, ಸುಭಾಷ್, ಅಧ್ಯಕ್ಷರು, ಹಿರ್ಗಾನ ‘ಎ’ ಒಕ್ಕೂಟ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಲ್ಲಾ ಅತಿಥಿವರೇಣ್ಯರನ್ನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿ, ವಾಸು ಶೆಟ್ಟಿಯವರು ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.