
ಕಲಬುರ್ಗಿ : ಕಲಬುರ್ಗಿಯ ಜಿಲ್ಲಾ ಕೋರ್ಟ್ ಆವರಣದಲ್ಲಿ ಹೃದಯಾಘಾತ ಸಂಭವಿಸಿದ ಪರಿಣಾಮ ಹಿರಿಯ ನ್ಯಾಯಾಧೀಶ ವಿಶ್ವನಾಥ್ ವಿ. ಮೂಗತಿ (44) ಅವರು ಅಸುನೀಗಿದ ದುರ್ಘಟನೆ ನಡೆದಿದೆ. ಕಳೆದ ವಾರವಷ್ಟೇ ಕಲಬುರ್ಗಿ ಜಿಲ್ಲಾ 3ನೇ ಶ್ರೇಣಿ ಹಿರಿಯ ನ್ಯಾಯಾಧೀಶರಾಗಿ ವರ್ಗಾವಣೆಗೊಂಡ ಅವರು ಇಂದು ಬೆಳಗ್ಗೆ ಕೋರ್ಟ್ ಗೆ ಹಾಜರಾಗಿದ್ದರು.
ಕೋರ್ಟ್ ಹಾಲ್ಗೆ ಪ್ರವೇಶಿಸುವ ಮೊದಲು ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಲ್ಪಕಾಲದಲ್ಲಿ ಅವರು ನಿಧನರಾದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.