
Coastal Karnataka : ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಏಪ್ರಿಲ್ 21ರಂದು ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇರುವುದರಿಂದ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.
ಮಂಗಳೂರಿನಲ್ಲಿ ಮತ್ತು ಸುತ್ತಮುತ್ತದ ಭಾಗಗಳಲ್ಲಿ ನಿನ್ನೆ (ರವಿವಾರ) ಮಳೆಯಾಗಿದ್ದು, ಸ್ಥಳೀಯವಾಗಿ ತಾಪಮಾನ 33.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ಕೆಲ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಆಗುವ ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.