ಬೆಂಗಳೂರಿನಲ್ಲಿ ಮಳೆಯ ತೀವ್ರತೆ: ಮುಳುಗಿದ ಕಾರುಗಳು, ಅರ್ಧ ದರಕ್ಕೆ ಮಾರಾಟ ಮಾಡಲು ಮುಂದಾದ ಮಾಲೀಕರು

Date:

spot_img

ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರೀ ಮಳೆಯ ಅಬ್ಬರ ಕಡಿಮೆಯಾದರೂ ಅದರ ಪರಿಣಾಮಗಳು ಇನ್ನೂ ಸರಿಯಾಗಿಲ್ಲ. ಮಳೆನೀರು ಮನೆಗಳಿಗೆ ನುಗ್ಗಿದ ಹಾನಿಯೊಂದಿಗೆ ರಸ್ತೆಗಳ ಮೇಲೆ ನಿಂತ ನೀರಿನಿಂದ ಅನೇಕ ಕಾರುಗಳು ಹಾಗೂ ಬೈಕುಗಳು ನಾಶವಾಗಿದೆ.

ಮಳೆ ನೀರಲ್ಲಿ ಮುಳುಗಿ ಹಾನಿಗೊಳಗಾದ ಕಾರುಗಳ ಮೌಲ್ಯವು ಗಮನಾರ್ಹವಾಗಿ ಕುಸಿದಿದೆ. ಹಲವರು ತಮ್ಮ ವಾಹನಗಳನ್ನು ಅರ್ಧ ಬೆಲೆಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ಬೊಲೆರೋ ಕಾರಿನ ಮಾಲಿಕ ಉದಯ ಎಂಬುವವರು , ಹನ್ನೆರಡು ಲಕ್ಷ ಮೌಲ್ಯದ ಕಾರನ್ನು ಕೇವಲ 6.8 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಕೃಷ್ಣ ಎಂಬುವವರು 10 ಸಾವಿರ ಕಿಮಿ ಓಡಿದ ಝನ್ ಕಾರನ್ನು ಕೇವಲ 70 ಸಾವಿರಕ್ಕೆ ನೀಡಿದರೆ, ಸುನಿಲ್ ಎಂಬುವವರು ಹೋಂಡಾ ಸಿಟಿ (18-20 ಲಕ್ಷ ಮೌಲ್ಯ) ಕೇವಲ 7 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ.

ಕಳೆದ ವರ್ಷವೂ ಯಲಹಂಕದ ಕೇಂದ್ರಿಯ ಅಪಾರ್ಟ್‌ಮೆಂಟ್ ಮಳೆಗೆ ನಲುಗಿ ಹೋಗಿದ್ದು, 2500 ಜನರನ್ನು ಸ್ಥಳಾಂತರಿಸಲಾಗಿತ್ತು. 300 ಕ್ಕೂ ಹೆಚ್ಚು ಕಾರುಗಳು ಮುಳುಗಡೆಯಾಗಿದ್ದವು. ಅವುಗಳಿಗೆ ವಿಮೆ ದೊರಕದ ಕಾರಣ ಮಾಲೀಕರಿಗೆ ಮತ್ತಷ್ಟು ನಷ್ಟ ಉಂಟಾಗಿತ್ತು.

ಈ ವರ್ಷದ ಮುಂಗಾರು ಮಳೆಯಿಂದ ಸಾಯಿ ಲೇಔಟ್, ಕೋರಮಂಗಲ, ಬಿಟಿಎಂ ಲೇಔಟ್, ಹೆಚ್‌ಬಿಆರ್ ಲೇಔಟ್ ಸೇರಿ ಹಲವಾರು ಪ್ರದೇಶಗಳ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ ಹಾಗೂ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳು ನೀರಿನಲ್ಲಿ ಮುಳುಗಿದ್ದು, ವಾಹನ ಮಾಲೀಕರಿಗೆ ಭಾರೀ ತೊಂದರೆ ಉಂಟಾಗಿದೆ.

ಪ್ರತಿ ವರ್ಷ ಮಳೆ ಬಂದಾಗ ಬರುವ ಈ ಸಂಕಷ್ಟಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಜನರು ಅನೇಕ ಬಾರಿ ಮನವಿ ಮಾಡಿದ್ದರೂ, ಅಧಿಕಾರಿಗಳಿಂದ ಸೂಕ್ತ ಕ್ರಮ ಇಲ್ಲದೆ ಮಳೆಗಾಲ ಒಂದು ಭೀತಿಗಾಲವಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ