spot_img

ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯ ಹಿನ್ನಲೆ ಭೂ ಕುಸಿತದ ಸಾಧ್ಯತೆ : ಭಾರಿ ವಾಹನಗಳ ಸಂಚಾರ ನಿಷೇಧ

Date:

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ಪ್ರದೇಶದಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂ ಕುಸಿತ ಸಂಭವಿಸುವ ಅಪಾಯದ ಮುನ್ನೆಚ್ಚರಿಕಾ ಕ್ರಮವಾಗಿ, ಜಿಲ್ಲಾಡಳಿತವು ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ.

ಮಲ್ಪೆ-ಆಗುಂಬೆ ಸಂಪರ್ಕಿಸುವ 169ಎ ಹೆದ್ದಾರಿಯಲ್ಲಿ ಭಾರೀ ಮಳೆಯಿಂದಾಗಿ ಭೂಮಿಯಲ್ಲಿ ಭೂ ಕುಸಿತ ಸಂಭವಿಸುವ ಅಪಾಯದ ಮುನ್ನೆಚ್ಚರಿಕಾ ಕ್ರಮವಾಗಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಉಡುಪಿಯಿಂದ ತೀರ್ಥಹಳ್ಳಿಗೆ ಪ್ರಯಾಣಿಸುವ ಭಾರೀ ವಾಹನಗಳು ಈಗ ಬದಲಿ ಮಾರ್ಗವಾದ ಉಡುಪಿ – ಕುಂದಾಪುರ – ಸಿದ್ದಾಪುರ – ಮಾಸ್ತಿಕಟ್ಟೆ – ತೀರ್ಥಹಳ್ಳಿ ಮಾರ್ಗವಾಗಿ ಸಾಗಬೇಕಾಗಿದೆ. ಲಘು ವಾಹನಗಳಿಗೆ ಮಾತ್ರ ಆಗುಂಬೆ ಘಾಟಿ ರಸ್ತೆ ತೆರೆಯಲ್ಪಟ್ಟಿದ್ದು, ವಾಹನಚಾಲಕರು ಎಚ್ಚರಿಕೆಯಿಂದ ಸಾಗಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ಪರಿಸ್ಥಿತಿಗೆ ಅನುಗುಣವಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ವೃದ್ಧರ ವಿರುದ್ಧದ ದೌರ್ಜನ್ಯ ಜಾಗೃತಿ ದಿನ

ಪ್ರತಿ ವರ್ಷ ಜೂನ್ 15 ರಂದು ವಿಶ್ವದಾದ್ಯಂತ ವಿಶ್ವ ವೃದ್ಧರ ವಿರುದ್ಧದ ದೌರ್ಜನ್ಯ ಜಾಗೃತಿ ದಿನ (World Elder Abuse Awareness Day – WEAAD) ಅನ್ನು ಆಚರಿಸಲಾಗುತ್ತದೆ

ಕಾರ್ಕಳ ಬಿಜೆಪಿ ವತಿಯಿಂದ ಜೂನ್ 16ರಂದು ವಿಕಸಿತ ಭಾರತ ಸಂಕಲ್ಪ ಸಭೆ- ನವೀನ್ ನಾಯಕ್

ಕಾರ್ಕಳ ಬಿಜೆಪಿ ವತಿಯಿಂದ ವಿಕಾಸ ಜನಸೇವಾ ಕಛೇರಿಯಲ್ಲಿ ಜೂನ್ 16 ಬೆಳಿಗ್ಗೆ 10.00 ಗಂಟೆಗೆ ವಿಕಸಿತ ಭಾರತ ಸಂಕಲ್ಪ ಸಭೆಯನ್ನು ಆಯೋಜಿಸಲಾಗಿದೆ .

ಸ್ಲಾಬ್ ಪರಿಶೀಲನೆ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯ ತಪ್ಪಿ ಬಿದ್ದು ಓರ್ವನ ಸಾವು, ಮಹಿಳೆ ಗಂಭೀರ

ಉಡುಪಿಯ ಕೋರ್ಟ್ ಹಿಂಭಾಗದ ಲೋಕೋಪಯೋಗಿ ಇಲಾಖೆ (PWD) ಕಚೇರಿ ಬಳಿ ನಡೆದ ಕ್ರೇನ್ ದುರ್ಘಟನೆ ಒಂದರಲ್ಲಿ ಹಿರಿಯ ನಾಗರಿಕರು ಸಾವಿಗೀಡಾಗಿದ್ದು, ಜೊತೆಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಿದಿಯೂರು ಶ್ಯಾಮಿಲಿ ಪಿ.ಯು. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಹಾಗೂ ಶ್ಯಾಮಿಲಿ ಪದವಿ ಪೂರ್ವ ಕಾಲೇಜು ಕಿದಿಯೂರು ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರಗಿತು.