spot_img

ಮುದ್ರಾಡಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Date:

spot_img
spot_img

ಹೆಬ್ರಿ: ಸತ್ಯ ಮತ್ತು ಅಹಿಂಸೆಯ ದೀಪವನ್ನು ಬೆಳಗಿಸಿದ ಮಹಾನ್ ಶಕ್ತಿ ಮಹಾತ್ಮ ಗಾಂಧೀಜಿಯವರು. ಭಾರತವು ಸ್ವಾತಂತ್ರ್ಯವನ್ನು ಪಡೆಯಲು ಅವರು ಅನುಸರಿಸಿದ ಸತ್ಯಾಗ್ರಹ ಹಾಗೂ ಅಸಹಕಾರ ಚಳುವಳಿ ಜಗತ್ತಿನ ಇತರ ದೇಶಗಳಿಗೂ ಮಾದರಿಯಾಗಿರುವುದು ಗಾಂಧೀಜಿಯವರು ಭಾರತಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಅಸ್ಪೃಶ್ಯತೆ ನಿರ್ಮೂಲನೆ, ಸ್ವಚ್ಛತೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ತುಂಬಾ ಮಹತ್ವವನ್ನು ನೀಡಿದರು. ಲಾಲ್ ಬಹದ್ದೂರ್ ಶಾಸ್ತ್ರಿ ಯವರು ದೇಶದ ಉತ್ತಮ ಆಡಳಿತಗಾರರಾಗಿ, ದೇಶದ ಪ್ರಧಾನಮಂತ್ರಿಯಾಗಿ ದೇಶಸೇವೆಯಲ್ಲೇ ತೊಡಗಿಸಿಕೊಂಡ ಮಹಾನ್ ನಾಯಕ. ಗಾಂಧೀಜಿಯವರ ತತ್ವಗಳನ್ನು ಹಾಗೂ ಶಾಸ್ತ್ರೀಜಿಯವರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಬೇಕೆಂದು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಹೇಳಿದರು.
ಅವರು ತಮ್ಮ ಶಾಲೆಯಲ್ಲಿ ನಡೆದ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಶಿಕ್ಷಕರಾದ ಮಹೇಶ್ ನಾಯ್ಕ್, ಶ್ಯಾಮಲಾ, ರಘುಪತಿ ಹೆಬ್ಬಾರ್ ಹಾಗೂ ಮಹೇಶ್ ಕಾನ್ಗುಂಡಿ, ರಘುನಂದನ್,ವಿದ್ಯಾರ್ಥಿ ನಾಯಕ ಕಾರ್ತಿಕ್, ಉಪನಾಯಕ ಪ್ರತೀಕ್, ತರಗತಿ ಪ್ರತಿನಿಧಿಗಳಾದ ಮಣಿಕಂಠ, ಯಕ್ಷಿತ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸ್ನೇಹಾ ಸ್ವಾಗತಿಸಿ, ಲಾವಣ್ಯ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.