ಹೆಬ್ರಿ ಗಣೇಶೋತ್ಸವ ಸುವರ್ಣ ಸಂಭ್ರಮಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆಯೊಂದಿಗೆ ಚಾಲನೆ

Date:

spot_img

ಹೆಬ್ರಿ: ಹೆಬ್ರಿಯಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಸುವರ್ಣ ಸಂಭ್ರಮದ ಅಂಗವಾಗಿ ಭಕ್ತರು ಸಂಭ್ರಮದಿಂದ ಹಸಿರು ಹೊರೆ ಕಾಣಿಕೆ ಮೆರವಣಿಗೆಯನ್ನು ನಡೆಸಿದರು. ಹೆಬ್ರಿ ಬಂಟರ ಭವನದಿಂದ ಆರಂಭವಾದ ಈ ಮೆರವಣಿಗೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ರಿ ತಾಲೂಕು ಯೋಜನಾಧಿಕಾರಿ ಶ್ರೀಮತಿ ಲೀಲಾವತಿಯವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಜನಾರ್ಧನ ಎಚ್, ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ಯ, ಧಾರ್ಮಿಕ ಮುಖಂಡ ಎಚ್. ಭಾಸ್ಕರ್ ಜೋಯಿಸ್, ಉಪಾಧ್ಯಕ್ಷರಾದ ಎಚ್.ಕೆ. ಸುಧಾಕರ್, ಪ್ರಕಾಶ್ ಮಲ್ಯ, ದಿವಾಕರ್ ಶೆಟ್ಟಿ ಸೀತಾನದಿ, ಕೋಶಾಧಿಕಾರಿಗಳಾದ ದೇವಾನಂದ ನಾಯಕ್, ಜೊತೆ ಕಾರ್ಯದರ್ಶಿಗಳಾದ ಶಂಕರ್ ಸೇರಿಗಾರ್, ಶೇಖರ್ ನಾಯ್ಕ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕರಾದ ಉದಯ್, ಸೇವಾ ಪ್ರತಿನಿಧಿಗಳು, ಎಸ್.ಆರ್. ಸಂಸ್ಥೆಯ ಅಧ್ಯಕ್ಷರಾದ ನಾಗರಾಜ ಶೆಟ್ಟಿ, ಸಪ್ನ ನಾಗರಾಜ ಶೆಟ್ಟಿ, ಗಣೇಶೋತ್ಸವ ಉಪ ಸಮಿತಿಗಳ ಸಂಚಾಲಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ವೇದಿಕೆ ಸಮಿತಿ ಸಂಚಾಲಕರಾದ ಪ್ರಸಾದ್ ಶೆಟ್ಟಿ ಸ್ವಾಗತಿಸಿದರೆ, ಟಿ.ಜಿ. ಆಚಾರ್ಯ ವಂದನಾರ್ಪಣೆ ಮಾಡಿದರು. ಈ ಹಸಿರು ಹೊರೆಕಾಣಿಕೆ ಮೆರವಣಿಗೆಯು ಗಣೇಶೋತ್ಸವದ ವೈಭವಕ್ಕೆ ಮತ್ತಷ್ಟು ಮೆರುಗು ನೀಡಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ