
ಹೆಬ್ರಿ : ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಗ್ರಾಮದಲ್ಲಿ ಹಿರಿಯ ನಾಗರಿಕರೊಬ್ಬರು ತೀವ್ರ ಅನಾರೋಗ್ಯದ ಕಾರಣದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಪುರ ನಿವಾಸಿಯಾದ ಪೂವಪ್ಪ ಪೂಜಾರಿ (83) ಎಂಬುವವರೇ ಮೃತಪಟ್ಟ ದುರ್ದೈವಿ.
ಮೃತ ಪೂವಪ್ಪ ಪೂಜಾರಿ ಅವರು ಕಳೆದ ದೀರ್ಘಕಾಲದಿಂದ ಶ್ವಾಸಕೋಶದ ತೊಂದರೆ, ರಕ್ತದೊತ್ತಡ (BP) ಹಾಗೂ ಕ್ಯಾನ್ಸರ್ನಂತಹ ಮಾರಕ ಕಾಯಿಲೆಗಳಿಂದ ಬಳಲುತ್ತಿದ್ದರು. ವಿಪರೀತ ಧೂಮಪಾನದ ಹವ್ಯಾಸ ಹೊಂದಿದ್ದ ಇವರಿಗೆ ಕುಟುಂಬಸ್ಥರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಸಹ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿರಲಿಲ್ಲ. ಅನಾರೋಗ್ಯದ ಬಾಧೆ ತಡೆಯಲಾರದೆ ತೀವ್ರವಾಗಿ ನೊಂದಿದ್ದ ಅವರು, ಫೆಬ್ರವರಿ 26 ರಂದು ಸಂಜೆ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



































