
ಹೆಬ್ರಿ : ಇತ್ತೀಚಿಗೆ ಉಡುಪಿಗೆ ಲಕ್ಷಕಂಠ ಗೀತಾ ಪಾರಾಯಣಕ್ಕೆ ಆಗಮಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಬಿಡಿಸಿದ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಆಶಿಶ್ ಎಚ್. ಇವರಿಗೆ ಪ್ರಧಾನಿ ಕಛೇರಿಯಿಂದ ಮೆಚ್ಚುಗೆಯ ಪ್ರಶಂಸಾ ಪತ್ರ ಕಳುಹಿಸಿರುತ್ತಾರೆ.

ಈ ವಿದ್ಯಾರ್ಥಿಯನ್ನು ಅಮೃತ ಭಾರತಿ ವಿದ್ಯಾಲಯ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ ಮತ್ತು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.



































