
ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು . ಮುಖ್ಯ ಅತಿಥಿಗಳಾಗಿ ಅಮೃತ ಭಾರತಿ ವಿದ್ಯಾಕೇಂದ್ರದ ಹಿಂದಿ ಭಾಷಾ ಶಿಕ್ಷಕ ಲವ ಮಾತನಾಡಿ, ವಿವೇಕಾನಂದರು ಬಾಲ್ಯದಲ್ಲಿ ತಾಯಿಯಿಂದ ಉತ್ತಮ ಸಂಸ್ಕಾರ, ಅಧ್ಯಾತ್ಮದ ಸೆಳೆತದಿಂದ ಗುರುಗಳಾದ ರಾಮಕೃಷ್ಣ ಪರಮಹಂಸರಿಂದ ಉತ್ತಮ ಧಾರ್ಮಿಕ ವಿಚಾರಗಳನ್ನು ತಿಳಿದುಕೊಂಡು ಆದರ್ಶ ವ್ಯಕ್ತಿಗಳಾಗಿ ರೂಪುಗೊಂಡರು ಎಂದು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ನ ಸದಸ್ಯರಾದ ಬಾಲಕೃಷ್ಣ ಮಲ್ಯ ವಹಿಸಿ ಮಾತನಾಡಿ ಭಾರತ ಭೋಗ ಭೂಮಿ ಅಲ್ಲ, ತ್ಯಾಗ ಭೂಮಿ ನಾವು ಅದರಂತೆ ಬದುಕಬೇಕು ಇಲ್ಲಿನ ಸಾಧಕರ ಜೀವನ ಚರಿತ್ರೆ ನಮ್ಮದಾಗಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್, ಶಕುಂತಲಾ ಹಾಗೂ ಸಂಸ್ಥೆಯ ಗುರುವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು . ವಿವೇಕಾನಂದರ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ವಿಜೇತ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರೌಢಶಾಲೆಯ ಮೀನಾಕ್ಷಿ ವಾಚಿಸಿದರು. ಪುಟಾಣಿ ವಿದ್ಯಾರ್ಥಿಗಳು ವಿವೇಕಾನಂದರ ವೇಷ ಧರಿಸಿದ್ದರು. ವಿದ್ಯಾರ್ಥಿಗಳಾದ ಸ್ಮಿತಿ ಸ್ವಾಗತಿಸಿ, ಆರಾಧ್ಯ ನಿರೂಪಿಸಿ, ಅವನಿ ವಂದಿಸಿದರು .



































