spot_img

ಹಿರಿಯಡಕ ಬಂಟರ ಸಂಘದಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಯಶಸ್ವಿ

Date:

spot_img

ಉಡುಪಿ: ಬಂಟರ ಸಂಘ ಹಿರಿಯಡಕ (ರಿ.) ವತಿಯಿಂದ ಆಗಸ್ಟ್ 10, ಭಾನುವಾರದಂದು ಹಿರಿಯಡಕದ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಬಂಟರ ಸಂಘದ ಸದಸ್ಯರು ಮತ್ತು ಸ್ಥಳೀಯ ಬಂಟ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.

ಬೆಳಿಗ್ಗೆ 9:30ರಿಂದ ಆಟಿ ತಿಂಗಳ ಹಿನ್ನೆಲೆಯುಳ್ಳ ವಿವಿಧ ಸಾಂಪ್ರದಾಯಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಹಿರಿಯಡಕದ ಅಧ್ಯಕ್ಷರಾದ ಶ್ರೀ ನಿತೀಶ್ ಕುಮಾರ್ ಶೆಟ್ಟಿ ಅವರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಭಾಸ್ಕರ್ ಶೆಟ್ಟಿ , ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶ ಶೆಟ್ಟಿ ಗುರ್ಮೆ, ಶ್ರೀ ಪುನೀತ್ ಪೊಲೀಸ್ ಅಧಿಕಾರಿಗಳು ಹಿರಿಯಡಕ ಪೊಲೀಸ್ ಠಾಣೆ , ಶ್ರೀಮತಿ ಮಂಜುಳಾ ಹಾಗೂ ಶ್ರೀಮತಿ ಯಶೋಧ ಶೆಟ್ಟಿ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಬಂಟರ ಸಂಘ ಹಿರಿಯಡಕದ ಸ್ಥಾಪಕಾಧ್ಯಕ್ಷರಾದ ವಿಶ್ವನಾಥ ರೈ , ಉಪಾಧ್ಯಕ್ಷರಾದ ರವೀಂದ್ರನಾಥ್ ಹೆಗ್ಡೆ , ಕಾಯದರ್ಶಿಗಳಾದ ನವೀನ್ ಶೆಟ್ಟಿ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ, ಮಧ್ಯಾಹ್ನ 1:00 ಗಂಟೆಗೆ ಆಟಿ ತಿಂಗಳ ವಿಶೇಷ ಖಾದ್ಯಗಳ ಭೋಜನವನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಂಜನಾ ರೈ ಅವರನ್ನು ಸಂಘದ ಸದಸ್ಯರು ಅಭಿನಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಜ್ಞಾನಸುಧಾದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ; ನಡೆ-ನುಡಿ-ನಡವಳಿಕೆಯಿಂದ ಚಾರಿತ್ರ್ಯ ನಿರ್ಮಾಣ : ದೀಪಕ್‌ರಾಜ್

ರಾಷ್ಟ್ರೀಯ ತರಬೇತುದಾರ ಶ್ರೀ ದೀಪಕ್ ರಾಜ್ ಅವರು ಜೆ.ಸಿ.ಐ ಕಾರ್ಕಳದ ಸಹಯೋಗದೊಂದಿಗೆ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಎನ್.ಎಸ್.ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕ್ರಿಯೇಟಿವ್ ಕಾಲೇಜಿಗೆ ಆಗಸ್ಟ್ 15ರಂದು ಪದ್ಮಶ್ರೀ ಪುರಸ್ಕೃತ, ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್ ಕಿರಣ್ ಕುಮಾರ್ ಆಗಮನ

ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.

ಪ್ರಾಮಾಣಿಕವಾಗಿರುವವರು ಆರೋಗ್ಯವಾಗಿರುತ್ತಾರೆ : ಶ್ರೀಮತಿ ಜ್ಯೋತಿ ಮಹಾದೇವ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್‌ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಹಿಪ್ನೋ ಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್‌ ಮಾತನಾಡಿದರು.

ಗ್ರೀನ್ ಪಾರ್ಕ್ ಶಾಲಾ ಮಕ್ಕಳಿಂದ ಗದ್ದೆಯಲ್ಲಿ ನೇಜಿ ನಾಟಿ

ಗ್ರೀನ್ ಪಾರ್ಕ್ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳು ಬೊಮ್ಮರಬೆಟ್ಟು ಗ್ರಾಮದ ಮುಂಡೂಜೆ ಸುರೇಶ್ ನಾಯಕ್ ಅವರ ಹೊಲದಲ್ಲಿ ನೇಜಿ ನೆಡುವ ಮೂಲಕ ಕೃಷಿ ಚಟುವಟಿಕೆಗಳ ಅನುಭವ ಪಡೆದರು.