spot_img

ರಾಜ್ಯ ಮತ್ತು ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗಳಲ್ಲಿ 6 ಪದಕಗಳನ್ನು ಗೆದ್ದ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲಾ ವಿದ್ಯಾರ್ಥಿಗಳು

Date:

ಹಿರಿಯಡ್ಕ: ಕರಾಟೆ ಕ್ರೀಡೆಯಲ್ಲಿ ಹಿರಿಯಡ್ಕದ ಗ್ರೀನ್ ಪಾರ್ಕ್ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿಸ್ಮಯ ಅಕಾಡೆಮಿಯವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಕರ್ನಾಟಕ-ಗೋವಾ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಶಾರ್ವಣಿ ಕಂಚಿನ ಪದಕ ಪಡೆದಿದ್ದಾರೆ.

ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ 5 ಪದಕಗಳ ಸಾಧನೆ

ಅಲ್ಲದೆ, ಶಿವಮೊಗ್ಗದಲ್ಲಿ ನಡೆದ 8 ರಾಷ್ಟ್ರಗಳನ್ನೊಳಗೊಂಡ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಶಾಲೆಯ ಇತರ ವಿದ್ಯಾರ್ಥಿಗಳು ಮಿಂಚಿದ್ದಾರೆ. ವಿದ್ಯಾರ್ಥಿಗಳಾದ ಅಂಶುಲ್ ಯು ಪೂಜಾರಿ, ಶ್ರೇಷ್ಟ್ ಶೆಟ್ಟಿ ಮತ್ತು ಸಾನ್ವಿ ನಾಯಕ್ ಸೇರಿ ಒಟ್ಟು 2 ಚಿನ್ನ, 2 ಬೆಳ್ಳಿ ಮತ್ತು 1 ಕಂಚಿನ ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.

ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರಿಂದ ಅಭಿನಂದನೆ

ಕರಾಟೆ ಶಿಕ್ಷಕರಾದ ರೆನ್ಶಿ ರಘುರಾಜ್ ಪಣಿಯಾಡಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಪ್ರಾಂಶುಪಾಲೆ ಕ್ಲಾರಿನ್ ನಿಕೋಲಸ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪೂಜಾ ಹೆಗ್ಡೆ ಟಾಲಿವುಡ್‌ಗೆ ಕಂಬ್ಯಾಕ್‌: ದುಲ್ಕರ್ ಸಲ್ಮಾನ್ ಜೊತೆ ಹೊಸ ಸಿನಿಮಾ

ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಮಾಲಿವುಡ್ ನಟ ದುಲ್ಕರ್ ಸಲ್ಮಾನ್ ಜೊತೆ ಹೊಸ ಚಿತ್ರವೊಂದರಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಕಣಜಾರು : ಬೇಟೆಯ ವೇಳೆ ಗುಂಡು ಹಾರಿಸಿದ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಬೇಟೆಯ ವೇಳೆ ಗುಂಡು ಹಾರಿಸಿ ಅದು ಕಾರು ಮತ್ತು ಮನೆಯ ಬಾಗಿಲಿಗೆ ತಗುಲಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯಡ್ಕ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆತ್ಮಹತ್ಯೆ ತಡೆಗಟ್ಟುವಿಕೆಯ ಬಗ್ಗೆ ನಿಟ್ಟೆ ಕಾಲೇಜಿನಲ್ಲಿ ‘ಪ್ರತ್ಯಾಹಾರ್’ ಬೀದಿ ನಾಟಕ

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಾಲೀಮ್ ತಂಡ ಹಾಗೂ ಸಿಒಪಿಇ-ಆದಿತ್ಯ ಬಿರ್ಲಾ ಗ್ರೂಪ್ ನ ಎಂಪವರ್ ಜಂಟಿಯಾಗಿ 'ಪ್ರತ್ಯಾಹಾರ್' ಎಂಬ 15 ನಿಮಿಷಗಳ ಕಾಲದ ಆತ್ಮಹತ್ಯೆ ತಡೆಗಟ್ಟುವಿಕೆಯ ಬಗೆಗಿನ ಬೀದಿ ನಾಟಕವನ್ನು ಸೆ.10 ರಂದು ಕಾಲೇಜಿನ ಆವರಣದಲ್ಲಿ ಏರ್ಪಡಿಸಿತು.

ದಿನ ವಿಶೇಷ – ಸರಗರಿ ಯುದ್ಧ

ಸೆಪ್ಟೆಂಬರ್ 12 ರಂದು ನಾವು ಸ್ಮರಿಸುವುದು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿ ಬರೆದುಕೊಂಡ...