spot_img

ಹನಿಟ್ರ್ಯಾಪ್ ವಂಚನೆ: ಪೋಷಕನನ್ನು ಬ್ಲ್ಯಾಕ್‌ಮೇಲ್ ಮಾಡಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಿದ ಪ್ರೀ-ಸ್ಕೂಲ್ ಶಿಕ್ಷಕಿ

Date:

spot_img

ಬೆಂಗಳೂರು: ಖಾಸಗಿ ಪ್ರೀ-ಸ್ಕೂಲ್ ನಡೆಸುತ್ತಿದ್ದ ಶಿಕ್ಷಕಿ ಶ್ರೀದೇವಿ ರುಡಿಗಿ ಹನಿಟ್ರ್ಯಾಪ್ ಮೂಲಕ ಪೋಷಕರೊಬ್ಬರಿಂದ ಲಕ್ಷಾಂತರ ರೂಪಾಯಿ ವಸೂಲಿ ಮಾಡಲು ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಶ್ರೀದೇವಿ ಸೇರಿದಂತೆ ಆಕೆಯ ಸಹಚರರಾದ ಸಾಗರ್ ಹಾಗೂ ಅರುಣ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹಣ ಸಹಾಯದಿಂದ ಹನಿಟ್ರ್ಯಾಪ್ ತನಕ!
2023ರಲ್ಲಿ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಖಾಸಗಿ ಪ್ರೀ-ಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ, ಪೋಷಕ ರಾಕೇಶ್ ಅವರಿಗೆ ಪರಿಚಯವಾಗಿದ್ದರು. ಶಾಲೆ ನಿರ್ವಹಣೆ ಹಾಗೂ ತಂದೆಯ ಚಿಕಿತ್ಸೆಗೆಂದು ರಾಕೇಶ್‌ನಿಂದ 4 ಲಕ್ಷ ರೂಪಾಯಿ ಸಾಲವಾಗಿ ಪಡೆದು, 2024ರ ಮಾರ್ಚ್‌ನಲ್ಲಿ ವಾಪಸ್ ಕೊಡಲು ಒಪ್ಪಿಕೊಂಡಿದ್ದರು. ಆದರೆ ಹಣ ವಾಪಸ್ ಕೇಳಿದಾಗ, ಅದನ್ನು ಕೊಡಲು ಸಾಧ್ಯವಿಲ್ಲವೆಂದು ತಿರಸ್ಕರಿಸಿ, ‘ನೀವು ಶಾಲೆಯ ಪಾರ್ಟನರ್ ಆಗಿ’ ಎಂಬ ಆಫರ್ ನೀಡಿದ್ದರು.

ಸಂಬಂಧದಿಂದ ಬ್ಲ್ಯಾಕ್‌ಮೇಲ್ ತನಕ
ಶ್ರೀದೇವಿ ಹಾಗೂ ರಾಕೇಶ್ ನಡುವಿನ ಸಂಬಂಧ ವೃದ್ಧಿಯಾಗಿ, ಇಬ್ಬರೂ ಜತೆಯಾಗಿ ಹಲವು ಕಡೆಗಳಿಗೆ ಸುತ್ತಾಡಿದರು. ಈ ನಡುವೆ, ಜನವರಿ 2024ರ ಮೊದಲ ವಾರದಲ್ಲಿ ರಾಕೇಶ್ ತಮ್ಮ ಹಣವನ್ನು ವಾಪಸ್ ಕೇಳಿದಾಗ, ಶ್ರೀದೇವಿ 15 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಅದಕ್ಕೆ ರಾಕೇಶ್ ಒಪ್ಪಲಿಲ್ಲ.ನಂತರ, ಶ್ರೀದೇವಿ ರಾಕೇಶ್ ಅವರ ಮನೆಗೆ ತೆರಳಿ, ಅವರಿಗೆ ಮುತ್ತುಕೊಟ್ಟು ಅವರನ್ನು ಬ್ಲ್ಯಾಕ್‌ಮೇಲ್ ಮಾಡಿ 50 ಸಾವಿರ ರೂಪಾಯಿ ವಸೂಲಿ ಮಾಡಿದರು. ಹೀಗೇ ಪದೇ ಪದೇ ಹಣಕ್ಕೆ ಬೇಡಿಕೆ ಇಡುವ ಹಿನ್ನಲೆಯಲ್ಲಿ, ರಾಕೇಶ್ ಈ ಸಂಬಂಧಕ್ಕೆ ತೆರೆ ಎಳೆಯಲು ನಿರ್ಧರಿಸಿದರು. ಅವರೊಂದಿಗೆ ಸಂಪರ್ಕ ಇಟ್ಟಿದ್ದ ಸಿಮ್ ಕಾರ್ಡ್ ಮುರಿದುಬಿಸಾಕಿದರು.

ಬ್ಲ್ಯಾಕ್‌ಮೇಲ್‌ಗೆ ಬಲಿಯಾದ ಪೋಷಕ
ಮಾರ್ಚ್ 12ರಂದು, ಶ್ರೀದೇವಿ ರಾಕೇಶ್ ಪತ್ನಿಗೆ ಕರೆ ಮಾಡಿ, ‘ನಿಮ್ಮ ಮಕ್ಕಳ ಟಿಸಿ ಕಳುಹಿಸುತ್ತೇನೆ, ಪತಿಯನ್ನು ಕಳುಹಿಸಿ’ ಎಂದರು. ಇದರಿಂದಾಗಿ ರಾಕೇಶ್ ಅವರ ಶಾಲೆಗೆ ಹೋದಾಗ, ಅಲ್ಲಿ ನಿರೀಕ್ಷೆಯಂತೆ ಶ್ರೀದೇವಿಯೊಂದಿಗೆ ಆರೋಪಿ ಸಾಗರ್ ಹಾಗೂ ಗಣೇಶ್ ಕೂಡಿದ್ದರು.ಅವರು ರಾಕೇಶ್‌ಗೆ ಬೆದರಿಕೆ ಹಾಕಿ, ‘‘ಸಾಗರ್ ಹಾಗೂ ಶ್ರೀದೇವಿಯ ನಿಶ್ಚಿತಾರ್ಥವಾಗಿದೆ, ಆದರೆ ನೀನು ಆಕೆಯೊಂದಿಗೆ ಸಂಬಂಧ ಹೊಂದಿದ್ದಿ’’ ಎಂದು ಆರೋಪಿಸಿದರು. ನಂತರ, ರಾಕೇಶ್ ಅವರನ್ನು ಕಾರಿನಲ್ಲಿ ಕೂರಿಸಿಕೊಂಡು, ಬ್ಲ್ಯಾಕ್‌ಮೇಲ್ ಮಾಡುತ್ತಾ, ‘‘ಇದು ಯಾರಿಗೂ ತಿಳಿಯಬಾರದು ಎಂದರೆ 1 ಕೋಟಿ ರೂಪಾಯಿ ಕೊಡು’’ ಎಂದು ಬೆದರಿಕೆ ಹಾಕಿದರು. ಕೊನೆಗೂ 20 ಲಕ್ಷ ರೂಪಾಯಿ ಬೇಡಿಕೆ ಇಟ್ಟು, ಅದರಲ್ಲಿ 1.90 ಲಕ್ಷ ರೂಪಾಯಿ ವಸೂಲಿ ಮಾಡಿದ್ದರು.

ಆರೋಪಿಗಳ ಬಂಧನ
ಹಣದ ನಿರಂತರ ಬೇಡಿಕೆ ಹಾಗೂ ಜೀವ ಬೆದರಿಕೆ ತಾಳಲಾರದೆ, ರಾಕೇಶ್ ಸಿಸಿಬಿ ಪೊಲೀಸರಿಗೆ ದೂರು ನೀಡಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಶ್ರೀದೇವಿ, ಸಾಗರ್ ಹಾಗೂ ಅರುಣ್ ಅವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆದಿದ್ದಾರೆ. ಮೂವರೂ ವಿಜಯಪುರ ಮೂಲದವರಾಗಿದ್ದಾರೆ ಎಂದು ವರದಿ ತಿಳಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಜಿಲ್ಲೆಗೆ ವರುಣನ ಆರ್ಭಟ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಉಡುಪಿ ಜಿಲ್ಲಾಡಳಿತವು ಮಹತ್ವದ ನಿರ್ಧಾರ ಕೈಗೊಂಡಿದೆ.

ಸಿಂಗಾಪುರಕ್ಕೆ ಚೀನಾ ಮೂಲದ ಸೈಬರ್ ಭೀತಿ: ರಾಷ್ಟ್ರೀಯ ಮಹತ್ವದ ಮೂಲಸೌಕರ್ಯಗಳ ಮೇಲೆ ಗುರಿ

ಸಿಂಗಾಪುರ ಪ್ರಸ್ತುತ ಅತಿ ಸಂಕೀರ್ಣವಾದ ಸೈಬರ್ ಆಕ್ರಮಣವನ್ನು ಎದುರಿಸುತ್ತಿದೆ, ಇದು ದೇಶದ ಭದ್ರತೆ ಮತ್ತು ಪ್ರಮುಖ ಸೇವೆಗಳ ವ್ಯವಸ್ಥೆಗಳಿಗೆ ತೀವ್ರ ಅಪಾಯವನ್ನುಂಟುಮಾಡಿದೆ

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ – ದಿನೇಶ್ ಪೂಜಾರಿ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷರು

ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ ಮಾಡಿರುವ ಪ್ರತಿಭಟನೆಯು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸರಣಿ ವೈಫಲ್ಯವನ್ನು ಮರೆಮಾಚಲು ಮಾಡಿರುವ ನಾಟಕವಾಗಿದೆ.

“ನೀವೇ ದುಡಿಯಬಹುದಲ್ಲ?”: ₹12 ಕೋಟಿ ಜೀವನಾಂಶ ಕೋರಿದ್ದ ಮಹಿಳೆಗೆ ಸುಪ್ರೀಂ ತರಾಟೆ!

ವೈವಾಹಿಕ ವಿವಾದ ಪ್ರಕರಣವೊಂದರಲ್ಲಿ ₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯೂ ಕಾರು ಮತ್ತು ಮುಂಬೈನಲ್ಲಿ ಮನೆಯನ್ನು ಪರಿಹಾರವಾಗಿ ನೀಡಬೇಕೆಂದು ಕೋರಿದ್ದ ಮಹಿಳೆಯೊಬ್ಬರಿಗೆ, "ತಾವೇ ದುಡಿಯಬಹುದಲ್ಲವೇ?" ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ.