spot_img

ಅಂಬಲಪಾಡಿ ಹೆದ್ದಾರಿ ಬಳಿ ಭೀಕರ ಅಪಘಾತ : ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

Date:

ಉಡುಪಿ : ಉಡುಪಿ ತಾಲೂಕಿನ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಟ್ರಕ್‌ನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ.

ದುರಂತದ ವಿವರ:

ಅಂಬಲಪಾಡಿ ಸುರಭಿ ಆಟೋಮೊಬೈಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ದೆಂದೂರುಕಟ್ಟೆಯ ಪ್ರದೀಪ್ (38) ಮೃತ ದುರ್ದೈವಿ. ಕೆಲಸ ಮುಗಿಸಿ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಪ್ರದೀಪ್ ಅವರ ತಲೆ ಭಾಗವು ಸಂಪೂರ್ಣವಾಗಿ ಛಿದ್ರಗೊಂಡಿದೆ.

ಅಪಘಾತದ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಸಾವರನನ್ನು ಟ್ರಕ್ ಎಳೆದುಕೊಂಡು ಹೋಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಅಧಿಕಾರಿಗಳು ತಕ್ಷಣ ಭೇಟಿ ನೀಡಿ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದರು.

ಘಟನೆಯ ನಂತರ, ಸ್ಥಳೀಯ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಪೊಲೀಸರಿಗೆ ಸಹಕರಿಸಿದರು. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ನಾರಾಯಣ ಗುರು ಜಯಂತಿ

ಜ್ಞಾನ ಮತ್ತು ಸಮಾನತೆಯ ಪುನರುತ್ಥಾನಕ್ಕೆ ಪ್ರೇರಣೆಯ ದಿನಪ್ರತಿ ವರ್ಷ ಸೆಪ್ಟೆಂಬರ್ 7, ಭಾರತದ ಕರಾವಳಿ ತೀರದ ಜನತೆಗೆ ಒಂದು ಪವಿತ್ರ ಮತ್ತು ಮಹತ್ವದ ದಿನ

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ನ್ಯಾಯಾಂಗ ಬಂಧನಕ್ಕೆ, ಶಿವಮೊಗ್ಗ ಜೈಲಿಗೆ ರವಾನೆ

'ಧರ್ಮಸ್ಥಳದಲ್ಲಿ ಹೆಣ ಹೂತಿದ್ದೇನೆ' ಎಂದು ಹಲವು ದಿನಗಳ ಕಾಲ ಸುದ್ದಿಯಲ್ಲಿದ್ದ ಆರೋಪಿ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅವಧಿ ಮುಗಿದಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಐಸಿಸಿ ಮತ್ತು Google Pay ಜಂಟಿ ಪ್ರಯತ್ನ: ಮಹಿಳಾ ವಿಶ್ವಕಪ್ ಟಿಕೆಟ್ ಮಾರಾಟಕ್ಕೆ ಹೊಸ ಡಿಜಿಟಲ್ ಸ್ಪರ್ಶ

ವಿಶೇಷ ಟಿಕೆಟ್‌ಗಳು ಗೂಗಲ್ ಪೇ ಮೂಲಕ ಸೆಪ್ಟೆಂಬರ್ 8ರವರೆಗೆ ಲಭ್ಯವಿರಲಿದ್ದು, ಸೆಪ್ಟೆಂಬರ್ 9 ರಿಂದ ಎಂದಿನಂತೆ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ ಎಂದು ICC ತಿಳಿಸಿದೆ.

ಸೈನಸ್ ಸಮಸ್ಯೆ: ಕರಿಮೆಣಸಿನ ಆವಿಯಿಂದ ಪರಿಹಾರ ಸಾಧ್ಯವೇ?

ಮೂಗು ಕಟ್ಟಿಕೊಂಡಾಗ ಅಥವಾ ಸೈನಸ್‌ಗಳಿಂದ ತಲೆನೋವು ಬಂದಾಗ ಬಿಸಿ ನೀರಿನ ಆವಿಗೆ ಕರಿಮೆಣಸು ಸೇರಿಸಿ ಉಸಿರಾಡುವುದು ಒಂದು ಜನಪ್ರಿಯ ವಿಧಾನ.