spot_img

ನಾರಾವಿ ಕುತ್ಲೂರಿನಲ್ಲಿ ಭೀಕರ ಬೈಕ್ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ

Date:

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿ ಕುತ್ಲೂರು ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಪ್ರಶಾಂತ್ ಮತ್ತು ದಿನೇಶ್ ಎಂದು ಗುರುತಿಸಲಾಗಿದೆ.

ತಾಲೂಕಿನ ಕೊಕ್ರಾಡಿ–ನಾರಾವಿ ಮಾರ್ಗದ ಕುತ್ಲೂರು ಪುರುಷಗುಡ್ಡೆ ಸಮೀಪ ಈ ಅಪಘಾತ ಸಂಭವಿಸಿದ್ದು, ಯುವಕರು ಯಾವುದೋ ಕಾರ್ಯಕ್ರಮ ಮುಗಿಸಿ ಹಿಂತಿರುಗುವಾಗ ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರೂ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ನಾಶವಾಗಿದ್ದು, ಸ್ಥಳೀಯರು ಶಬ್ದ ಕೇಳಿ ಹೊರಬಂದು ಕೂಡಲೇ ಘಟನೆಯ ಮಾಹಿತಿ ಪೊಲೀಸರಿಗೆ ತಿಳಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಶವಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.