spot_img

ಧರ್ಮಸ್ಥಳದಲ್ಲಿ ಭಾರಿ 5 ಕ್ವಿಂಟಾಲ್ ಘಂಟೆ ಪ್ರತಿಷ್ಠಾಪನೆ: ಬೆಂಗಳೂರಿನ ಉದ್ಯಮಿಯ ಕೊಡುಗೆ

Date:

spot_img

ಬೆಳ್ತಂಗಡಿ: ಮಹಾ ಶಿವರಾತ್ರಿಯ ಪವಿತ್ರ ದಿನ ಶಿವನ ಜಾಗರಣೆಯು ಭಕ್ತರಲ್ಲಿ ಭಕ್ತಿಭಾವವನ್ನು ಉಂಟುಮಾಡುತ್ತದೆ. ಸಮುದ್ರಮಂಥನದಲ್ಲಿ ಎಲ್ಲರೂ ಉತ್ತಮ ವಸ್ತುಗಳನ್ನು ಸ್ವೀಕರಿಸಿದರೆ, ಶಿವನು ಮಾತ್ರ ವಿಷವನ್ನು ಸೇವಿಸಿ ಲೋಕ ರಕ್ಷಿಸಿದನು. ಆದ್ದರಿಂದ ಶಿವನ ಆರಾಧನೆ ಅಪಾರ ಮಹತ್ವದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಫೆಬ್ರವರಿ 26ರಂದು ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಸ್ಥಾಪಿತವಾದ ಭಾರಿ ಗಾತ್ರದ ಘಂಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಘಂಟೆಯನ್ನು ಬೆಂಗಳೂರಿನ ಉದ್ಯಮಿ ದಿನೇಶ್ ಹಾಗೂ ಅವರ ಪತ್ನಿ ಸುನೀತಾ ದಾನವಾಗಿ ನೀಡಿದ್ದು, “ನಾನಿನ್ನೂ ಚಿಕ್ಕವಯಸ್ಸಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದೇನೆ. ದೇವಳಕ್ಕೆ ಕೊಡುಗೆ ನೀಡಬೇಕೆಂಬ ಆಶಯದಿಂದ ಈ ಘಂಟೆಯನ್ನು ಅರ್ಪಿಸಿದ್ದೇನೆ. ಮಹಾ ಶಿವರಾತ್ರಿಯಂದು ಇದರ ಉದ್ಘಾಟನೆಯಾಗಿರುವುದು ನನಗೆ ತುಂಬಾ ಸಂತೋಷ ನೀಡಿದೆ ” ಎಂದು ಹೇಳಿದರು.

ಈ ಸಮಾರಂಭದಲ್ಲಿ ಉದ್ಯಮಿ ಪ್ರಸಾದ್, ರವೀಂದ್ರ, ವಿಜಯ್ ಕುಮಾರ್, ಪತ್ನಿ ಸುನೀತಾ, ಧರ್ಮಸ್ಥಳದ ಎ. ವೀರು ಶೆಟ್ಟಿ ಹಾಗೂ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ಘಂಟೆಯ ಪ್ರಮುಖ ವಿಶೇಷತೆಗಳು:
ತೂಕ: 5 ಕ್ವಿಂಟಾಲ್
ಒಟ್ಟು ವೆಚ್ಚ: ₹10 ಲಕ್ಷ
ನಿರ್ಮಾಣ: 20 ದಿನಗಳಲ್ಲಿ ,ಲಕ್ನೋದಲ್ಲಿ
ವೈಶಿಷ್ಟ್ಯ: ಕಲ್ಲಿನ ವೃತ್ತ ಹಾಗೂ ಕಂಬದೊಂದಿಗೆ ಜೋಡಣೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಲಕ್ಷಾಂತರ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಕಲಾಪದ ವೇಳೆ ಮೊಬೈಲ್‌ನಲ್ಲಿ ‘ರಮ್ಮಿ’ ಆಟದಲ್ಲಿ ಮುಳುಗಿದ ಕೃಷಿ ಸಚಿವ

ಮಹಾರಾಷ್ಟ್ರ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಓರ್ವ ಸಚಿವರು ತಮ್ಮ ಮೊಬೈಲ್ ಫೋನ್‌ನಲ್ಲಿ 'ರಮ್ಮಿ' ಗೇಮ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಆಧಾರ್ ಕಾರ್ಡ್‌ಗೆ ಅವಧಿ ಇದೆಯೇ? ನಿಮ್ಮ ಆಧಾರ್ ಸಿಂಧುತ್ವವನ್ನು ಪರಿಶೀಲಿಸುವುದು ಹೇಗೆ?

ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.

ಉಪರಾಷ್ಟ್ರಪತಿ ಧಂಖರ್: ಭಾರತದ ಸಾರ್ವಭೌಮತೆಗೆ ಸವಾಲಿಲ್ಲ, ವಿದೇಶಿ ಹಸ್ತಕ್ಷೇಪ ಅಸಾಧ್ಯ

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ