spot_img

ಧರ್ಮಸ್ಥಳದಲ್ಲಿ ಭಾರಿ 5 ಕ್ವಿಂಟಾಲ್ ಘಂಟೆ ಪ್ರತಿಷ್ಠಾಪನೆ: ಬೆಂಗಳೂರಿನ ಉದ್ಯಮಿಯ ಕೊಡುಗೆ

Date:

ಬೆಳ್ತಂಗಡಿ: ಮಹಾ ಶಿವರಾತ್ರಿಯ ಪವಿತ್ರ ದಿನ ಶಿವನ ಜಾಗರಣೆಯು ಭಕ್ತರಲ್ಲಿ ಭಕ್ತಿಭಾವವನ್ನು ಉಂಟುಮಾಡುತ್ತದೆ. ಸಮುದ್ರಮಂಥನದಲ್ಲಿ ಎಲ್ಲರೂ ಉತ್ತಮ ವಸ್ತುಗಳನ್ನು ಸ್ವೀಕರಿಸಿದರೆ, ಶಿವನು ಮಾತ್ರ ವಿಷವನ್ನು ಸೇವಿಸಿ ಲೋಕ ರಕ್ಷಿಸಿದನು. ಆದ್ದರಿಂದ ಶಿವನ ಆರಾಧನೆ ಅಪಾರ ಮಹತ್ವದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಫೆಬ್ರವರಿ 26ರಂದು ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಸ್ಥಾಪಿತವಾದ ಭಾರಿ ಗಾತ್ರದ ಘಂಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಘಂಟೆಯನ್ನು ಬೆಂಗಳೂರಿನ ಉದ್ಯಮಿ ದಿನೇಶ್ ಹಾಗೂ ಅವರ ಪತ್ನಿ ಸುನೀತಾ ದಾನವಾಗಿ ನೀಡಿದ್ದು, “ನಾನಿನ್ನೂ ಚಿಕ್ಕವಯಸ್ಸಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದೇನೆ. ದೇವಳಕ್ಕೆ ಕೊಡುಗೆ ನೀಡಬೇಕೆಂಬ ಆಶಯದಿಂದ ಈ ಘಂಟೆಯನ್ನು ಅರ್ಪಿಸಿದ್ದೇನೆ. ಮಹಾ ಶಿವರಾತ್ರಿಯಂದು ಇದರ ಉದ್ಘಾಟನೆಯಾಗಿರುವುದು ನನಗೆ ತುಂಬಾ ಸಂತೋಷ ನೀಡಿದೆ ” ಎಂದು ಹೇಳಿದರು.

ಈ ಸಮಾರಂಭದಲ್ಲಿ ಉದ್ಯಮಿ ಪ್ರಸಾದ್, ರವೀಂದ್ರ, ವಿಜಯ್ ಕುಮಾರ್, ಪತ್ನಿ ಸುನೀತಾ, ಧರ್ಮಸ್ಥಳದ ಎ. ವೀರು ಶೆಟ್ಟಿ ಹಾಗೂ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ಘಂಟೆಯ ಪ್ರಮುಖ ವಿಶೇಷತೆಗಳು:
ತೂಕ: 5 ಕ್ವಿಂಟಾಲ್
ಒಟ್ಟು ವೆಚ್ಚ: ₹10 ಲಕ್ಷ
ನಿರ್ಮಾಣ: 20 ದಿನಗಳಲ್ಲಿ ,ಲಕ್ನೋದಲ್ಲಿ
ವೈಶಿಷ್ಟ್ಯ: ಕಲ್ಲಿನ ವೃತ್ತ ಹಾಗೂ ಕಂಬದೊಂದಿಗೆ ಜೋಡಣೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.