spot_img

ಧರ್ಮಸ್ಥಳದಲ್ಲಿ ಭಾರಿ 5 ಕ್ವಿಂಟಾಲ್ ಘಂಟೆ ಪ್ರತಿಷ್ಠಾಪನೆ: ಬೆಂಗಳೂರಿನ ಉದ್ಯಮಿಯ ಕೊಡುಗೆ

Date:

ಬೆಳ್ತಂಗಡಿ: ಮಹಾ ಶಿವರಾತ್ರಿಯ ಪವಿತ್ರ ದಿನ ಶಿವನ ಜಾಗರಣೆಯು ಭಕ್ತರಲ್ಲಿ ಭಕ್ತಿಭಾವವನ್ನು ಉಂಟುಮಾಡುತ್ತದೆ. ಸಮುದ್ರಮಂಥನದಲ್ಲಿ ಎಲ್ಲರೂ ಉತ್ತಮ ವಸ್ತುಗಳನ್ನು ಸ್ವೀಕರಿಸಿದರೆ, ಶಿವನು ಮಾತ್ರ ವಿಷವನ್ನು ಸೇವಿಸಿ ಲೋಕ ರಕ್ಷಿಸಿದನು. ಆದ್ದರಿಂದ ಶಿವನ ಆರಾಧನೆ ಅಪಾರ ಮಹತ್ವದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಫೆಬ್ರವರಿ 26ರಂದು ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಸ್ಥಾಪಿತವಾದ ಭಾರಿ ಗಾತ್ರದ ಘಂಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಘಂಟೆಯನ್ನು ಬೆಂಗಳೂರಿನ ಉದ್ಯಮಿ ದಿನೇಶ್ ಹಾಗೂ ಅವರ ಪತ್ನಿ ಸುನೀತಾ ದಾನವಾಗಿ ನೀಡಿದ್ದು, “ನಾನಿನ್ನೂ ಚಿಕ್ಕವಯಸ್ಸಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದೇನೆ. ದೇವಳಕ್ಕೆ ಕೊಡುಗೆ ನೀಡಬೇಕೆಂಬ ಆಶಯದಿಂದ ಈ ಘಂಟೆಯನ್ನು ಅರ್ಪಿಸಿದ್ದೇನೆ. ಮಹಾ ಶಿವರಾತ್ರಿಯಂದು ಇದರ ಉದ್ಘಾಟನೆಯಾಗಿರುವುದು ನನಗೆ ತುಂಬಾ ಸಂತೋಷ ನೀಡಿದೆ ” ಎಂದು ಹೇಳಿದರು.

ಈ ಸಮಾರಂಭದಲ್ಲಿ ಉದ್ಯಮಿ ಪ್ರಸಾದ್, ರವೀಂದ್ರ, ವಿಜಯ್ ಕುಮಾರ್, ಪತ್ನಿ ಸುನೀತಾ, ಧರ್ಮಸ್ಥಳದ ಎ. ವೀರು ಶೆಟ್ಟಿ ಹಾಗೂ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ಘಂಟೆಯ ಪ್ರಮುಖ ವಿಶೇಷತೆಗಳು:
ತೂಕ: 5 ಕ್ವಿಂಟಾಲ್
ಒಟ್ಟು ವೆಚ್ಚ: ₹10 ಲಕ್ಷ
ನಿರ್ಮಾಣ: 20 ದಿನಗಳಲ್ಲಿ ,ಲಕ್ನೋದಲ್ಲಿ
ವೈಶಿಷ್ಟ್ಯ: ಕಲ್ಲಿನ ವೃತ್ತ ಹಾಗೂ ಕಂಬದೊಂದಿಗೆ ಜೋಡಣೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.