ಧರ್ಮಸ್ಥಳದಲ್ಲಿ ಭಾರಿ 5 ಕ್ವಿಂಟಾಲ್ ಘಂಟೆ ಪ್ರತಿಷ್ಠಾಪನೆ: ಬೆಂಗಳೂರಿನ ಉದ್ಯಮಿಯ ಕೊಡುಗೆ

Date:

spot_img

ಬೆಳ್ತಂಗಡಿ: ಮಹಾ ಶಿವರಾತ್ರಿಯ ಪವಿತ್ರ ದಿನ ಶಿವನ ಜಾಗರಣೆಯು ಭಕ್ತರಲ್ಲಿ ಭಕ್ತಿಭಾವವನ್ನು ಉಂಟುಮಾಡುತ್ತದೆ. ಸಮುದ್ರಮಂಥನದಲ್ಲಿ ಎಲ್ಲರೂ ಉತ್ತಮ ವಸ್ತುಗಳನ್ನು ಸ್ವೀಕರಿಸಿದರೆ, ಶಿವನು ಮಾತ್ರ ವಿಷವನ್ನು ಸೇವಿಸಿ ಲೋಕ ರಕ್ಷಿಸಿದನು. ಆದ್ದರಿಂದ ಶಿವನ ಆರಾಧನೆ ಅಪಾರ ಮಹತ್ವದ್ದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಫೆಬ್ರವರಿ 26ರಂದು ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಮುಂಭಾಗದಲ್ಲಿ ಸ್ಥಾಪಿತವಾದ ಭಾರಿ ಗಾತ್ರದ ಘಂಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಘಂಟೆಯನ್ನು ಬೆಂಗಳೂರಿನ ಉದ್ಯಮಿ ದಿನೇಶ್ ಹಾಗೂ ಅವರ ಪತ್ನಿ ಸುನೀತಾ ದಾನವಾಗಿ ನೀಡಿದ್ದು, “ನಾನಿನ್ನೂ ಚಿಕ್ಕವಯಸ್ಸಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದೇನೆ. ದೇವಳಕ್ಕೆ ಕೊಡುಗೆ ನೀಡಬೇಕೆಂಬ ಆಶಯದಿಂದ ಈ ಘಂಟೆಯನ್ನು ಅರ್ಪಿಸಿದ್ದೇನೆ. ಮಹಾ ಶಿವರಾತ್ರಿಯಂದು ಇದರ ಉದ್ಘಾಟನೆಯಾಗಿರುವುದು ನನಗೆ ತುಂಬಾ ಸಂತೋಷ ನೀಡಿದೆ ” ಎಂದು ಹೇಳಿದರು.

ಈ ಸಮಾರಂಭದಲ್ಲಿ ಉದ್ಯಮಿ ಪ್ರಸಾದ್, ರವೀಂದ್ರ, ವಿಜಯ್ ಕುಮಾರ್, ಪತ್ನಿ ಸುನೀತಾ, ಧರ್ಮಸ್ಥಳದ ಎ. ವೀರು ಶೆಟ್ಟಿ ಹಾಗೂ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ಘಂಟೆಯ ಪ್ರಮುಖ ವಿಶೇಷತೆಗಳು:
ತೂಕ: 5 ಕ್ವಿಂಟಾಲ್
ಒಟ್ಟು ವೆಚ್ಚ: ₹10 ಲಕ್ಷ
ನಿರ್ಮಾಣ: 20 ದಿನಗಳಲ್ಲಿ ,ಲಕ್ನೋದಲ್ಲಿ
ವೈಶಿಷ್ಟ್ಯ: ಕಲ್ಲಿನ ವೃತ್ತ ಹಾಗೂ ಕಂಬದೊಂದಿಗೆ ಜೋಡಣೆ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.