spot_img

ಹುಕ್ಕೇರಿ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು!

Date:

spot_img

ಹುಕ್ಕೇರಿ : ಇಂಗಳಿ ಗ್ರಾಮದಲ್ಲಿ ನಡೆದ ಶ್ರೀರಾಮ ಸೇನೆಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಹುಕ್ಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.

ಜೂನ್ 26ರಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಒಂದು ಗೋವಿನೊಂದಿಗೆ ಠಾಣೆಗೆ ದೂರು ನೀಡಲು ತೆರಳಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದೇ ನಿರ್ಲಕ್ಷ್ಯ ವಹಿಸಿದ್ದು, ಈ ಪ್ರಕರಣವು ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿತು. ಅಲ್ಲದೆ, ಗಡಿಪಾರ ಆದ ರೌಡಿಶೀಟರ್ ಮಹಾವೀರ್ ಸೊಲ್ಲಾಪುರೆಯನ್ನು ಬಿಡಿಸಿ ಕಳುಹಿಸಿದ ಅಂಶಗಳೂ ಈ ಕ್ರಮಕ್ಕೆ ಕಾರಣವಾಗಿವೆ.

ಘಟನೆ ಸಂಬಂಧಿತ ಮಾಹಿತಿ ಮೆಲುಕು ಹಾಕದಿರುವುದು, ಎಫ್‌ಐಆರ್ ದಾಖಲು ಮಾಡುವಲ್ಲಿ ವಿಳಂಬ ಮತ್ತು ಸಂಘಟನೆಯ ಕಾರ್ಯಕರ್ತರ ಭದ್ರತೆ ಕಡೆಗಣಿಸಿದ ಹಿನ್ನೆಲೆಯಲ್ಲಿ ಎಸ್‌ಪಿ ತುರ್ತು ಕ್ರಮ ಕೈಗೊಂಡಿದ್ದಾರೆ. ಜುಲೈ 3ರಂದು ಶ್ರೀರಾಮ ಸೇನೆಯಿಂದ ‘ಇಂಗಳಿ ಚಲೋ’ ಪ್ರತಿಭಟನೆಗೂ ಮೊದಲೇ ಪಿಎಸ್‌ಐ ಅವರನ್ನು ಅಮಾನತು ಮಾಡಿ ಬೆಳಗಾವಿ ಎಸ್‌ಪಿ ಆದೇಶ ಹೊರಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಏಷ್ಯಾ ಕಪ್‌ 2025: ಭಾರತ ತಂಡದಿಂದ ಗಿಲ್‌, ಸಿರಾಜ್‌, ಅಯ್ಯರ್‌ಗೆ ಕೊಕ್‌? ಆಯ್ಕೆ ಸಮಿತಿ ದಿಟ್ಟ ನಿರ್ಧಾರಕ್ಕೆ ಸಜ್ಜು

ಏಷ್ಯಾ ಕಪ್‌ 2025ರ ಭಾರತ ತಂಡದ ಆಯ್ಕೆ ಕುತೂಹಲ ಮೂಡಿಸಿದ್ದು, ಆಗಸ್ಟ್ 19ರಂದು ನಡೆಯಲಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಕೆಲವೊಂದು ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಗೆಳೆಯರ ಬಳಗ ದಿಡಿಂಬಿರಿ ಇವರ ವತಿಯಿಂದ 2ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಬಜಗೋಳಿ ದಿಡಿಂಬಿರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ದಿನಾಂಕ 17/08/2025 ರಂದು ನಡೆಯಿತು.

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ

ಧಾರ್ಮಿಕ ಕ್ಷೇತ್ರದ ಬಗ್ಗೆ ಯಾರೇ ಒಳ್ಳೆಯ ಮಾತುಗಳನ್ನಾಡಿದರೂ ಅವರ ಚಾರಿತ್ರ್ಯಹರಣ ಮಾಡುವ ಮೂಲಕ ಬಾಯಿ ಮುಚ್ಚಿಸುವ ಷಡ್ಯಂತ್ರ ರೂಪಿಸುತ್ತಿರುವ ಅಪಾಯಕಾರಿ ರೌಡಿ ಮನಸ್ಥಿತಿಯನ್ನು ಹೊಂದಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸಿ ಕಾನೂನಾತ್ಮಕ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.

ಕಾರ್ಕಳ ಯುವ ಬ್ರಾಹ್ಮಣ ಪರಿಷತ್‌ನಿಂದ ಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಕಾರ್ಕಳ ತಾಲೂಕು ಯುವ ಬ್ರಾಹ್ಮಣ ಪರಿಷತ್ ಕಾರ್ಕಳ ಇದರ ವತಿಯಿಂದ ದಿನಾಂಕ 17.08.2025 ನೇ ಭಾನುವಾರ ಸಾಯಂಕಾಲ ಕಾರ್ಕಳ ಶ್ರೀ ಸೂರ್ಯನಾರಾಯಣ ಮಠದಲ್ಲಿ ನಡೆದಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳಾದ ಕೃಷ್ಣ ವೇಷ ಸ್ಪರ್ಧೆ, ಭಕ್ತಿಗೀತೆ, ರಸಪ್ರಶ್ನೆ ಹಾಗೂ ಮೊಸರು ಕುಡಿಕೆ ಕಾರ್ಯಕ್ರಮಗಳು ಬಹಳ ಅದ್ದೂರಿಯಿಂದ ಸಮಾಜದ ಹಿರಿಯರ, ಗಣ್ಯರ ಮತ್ತು ಸಮಾಜ ಬಾಂಧವರ ಪಾಲ್ಗೊಳ್ಳುವಿಕೆಯಿಂದ ನೆರವೇರಿತು.