spot_img

ಹುಕ್ಕೇರಿ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು!

Date:

spot_img

ಹುಕ್ಕೇರಿ : ಇಂಗಳಿ ಗ್ರಾಮದಲ್ಲಿ ನಡೆದ ಶ್ರೀರಾಮ ಸೇನೆಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಹುಕ್ಕೇರಿ ಪೊಲೀಸ್ ಠಾಣೆಯ ಪಿಎಸ್‌ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ.

ಜೂನ್ 26ರಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಒಂದು ಗೋವಿನೊಂದಿಗೆ ಠಾಣೆಗೆ ದೂರು ನೀಡಲು ತೆರಳಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದೇ ನಿರ್ಲಕ್ಷ್ಯ ವಹಿಸಿದ್ದು, ಈ ಪ್ರಕರಣವು ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿತು. ಅಲ್ಲದೆ, ಗಡಿಪಾರ ಆದ ರೌಡಿಶೀಟರ್ ಮಹಾವೀರ್ ಸೊಲ್ಲಾಪುರೆಯನ್ನು ಬಿಡಿಸಿ ಕಳುಹಿಸಿದ ಅಂಶಗಳೂ ಈ ಕ್ರಮಕ್ಕೆ ಕಾರಣವಾಗಿವೆ.

ಘಟನೆ ಸಂಬಂಧಿತ ಮಾಹಿತಿ ಮೆಲುಕು ಹಾಕದಿರುವುದು, ಎಫ್‌ಐಆರ್ ದಾಖಲು ಮಾಡುವಲ್ಲಿ ವಿಳಂಬ ಮತ್ತು ಸಂಘಟನೆಯ ಕಾರ್ಯಕರ್ತರ ಭದ್ರತೆ ಕಡೆಗಣಿಸಿದ ಹಿನ್ನೆಲೆಯಲ್ಲಿ ಎಸ್‌ಪಿ ತುರ್ತು ಕ್ರಮ ಕೈಗೊಂಡಿದ್ದಾರೆ. ಜುಲೈ 3ರಂದು ಶ್ರೀರಾಮ ಸೇನೆಯಿಂದ ‘ಇಂಗಳಿ ಚಲೋ’ ಪ್ರತಿಭಟನೆಗೂ ಮೊದಲೇ ಪಿಎಸ್‌ಐ ಅವರನ್ನು ಅಮಾನತು ಮಾಡಿ ಬೆಳಗಾವಿ ಎಸ್‌ಪಿ ಆದೇಶ ಹೊರಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಮತ್ತು ವಿಜಯ್ ರಾಘವೇಂದ್ರ ಅವರಿಬ್ಬರ ನಡುವೆ ಮದುವೆ ಸಂಬಂಧಿ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ವಾಪಸಾಗಿ ಚರ್ಚೆ ಮೂಡಿಸಿದ್ದ ಹಿನ್ನೆಲೆಯಲ್ಲಿ ಇದೀಗ ಮೇಘನಾ ರಾಜ್ ಸ್ಪಷ್ಟನೆ ನೀಡಿದ್ದಾರೆ.

ಮಣಿಪಾಲ ಎಂಐಟಿ ಬಳಿ ಬಸ್ ಅಪಘಾತ:ಬಸ್‌ ಚಕ್ರದಡಿಗೆ ಸಿಲುಕಿ ಮಹಿಳೆಯ ದೇಹ ಛಿದ್ರ ಛಿದ್ರ

ಮಣಿಪಾಲದ ಎಂಐಟಿ ಕಾಲೇಜು ಮುಂಭಾಗ ಖಾಸಗಿ ಬಸ್‌ ಚಕ್ರದಡಿಗೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ದ್ವೇಷ ಭಾಷಣ-ನಕಲಿ ಸುದ್ದಿಗಳ ವಿರುದ್ಧ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಎಫ್‌ಐಆರ್ ದಾಖಲು ಮಾಡಲಿ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣ ಹಾಗೂ ನಕಲಿ ಸುದ್ದಿಗಳ ಹರಡಿಕೆ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜ್ಯದ ಜಿಲ್ಲೆಗಳಿಗೆ ಹೊಸ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ಉಡುಪಿ ಜಿಲ್ಲೆಗೆ ರೋಹಿಣಿ ಸಿಂಧೂರಿ

ರಾಜ್ಯದ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಜಾರಿಗೆ ಮೇಲ್ವಿಚಾರಣೆ ಮತ್ತು ತಪಾಸಣೆಗೆ, ಹಿರಿಯ ಐಎಎಸ್ ಅಧಿಕಾರಿಗಳನ್ನು ಈ ಹುದ್ದೆಗಳಿಗೆ ನಿಯೋಜಿಸಲಾಗಿದೆ.