spot_img

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಯೂಟ್ಯೂಬರ್ ಪತ್ನಿ ಮತ್ತು ಆಕೆಯ ಪ್ರಿಯಕರ ಬಂಧನ

Date:

ಭಿವಾನಿ (ಹರಿಯಾಣ) : ಹರಿಯಾಣದ ಭಿವಾನಿಯಲ್ಲಿ ಅನೈತಿಕ ಸಂಬಂಧವೊಂದಕ್ಕೆ ಅಡ್ಡಿಯಾದ ಕಾರಣ ಪತಿಯೊಬ್ಬನು ತನ್ನ ಪತ್ನಿ ಹಾಗೂ ಆಕೆಯ ಪ್ರಿಯಕರನಿಂದ ಹತ್ಯೆಗೆ ಒಳಗಾದ ದಾರುಣ ಘಟನೆ ಬೆಳಕಿಗೆ ಬಂದಿದೆ. ಪತ್ನಿ ರವೀನಾ ಹಾಗೂ ಆಕೆಯ ಪ್ರೇಮಿ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮಾಹಿತಿಯ ಪ್ರಕಾರ, ಮೃತ ವ್ಯಕ್ತಿ ಪ್ರವೀಣ್ (ವಯಸ್ಸು 30) ಯೂಟ್ಯೂಬರ್ ರವೀನಾಳ ಪತಿ. ಇಬ್ಬರೂ 2017 ರಲ್ಲಿ ವಿವಾಹವಾಗಿದ್ದು, ಇವರಿಗೆ ಆರು ವರ್ಷದ ಮಗನೊಬ್ಬನಿದ್ದಾನೆ.

ಮಾರ್ಚ್ 25 ರಂದು ಪ್ರವೀಣ್ ತಡರಾತ್ರಿ ಮನೆಗೆ ಬಂದಾಗ, ಪತ್ನಿ ರವೀನಾ ಮತ್ತು ಆಕೆಯ ಪ್ರಿಯಕರ ಸುರೇಶ್ ಅಸಭ್ಯ ಭಂಗಿಯಲ್ಲಿ ಇರುವುದು ಕಂಡು ಬಂದು, ತೀವ್ರ ಜಗಳ ಸಂಭವಿಸಿದೆ. ಈ ಸಂದರ್ಭ, ಇಬ್ಬರೂ ಸೇರಿ ಪ್ರವೀಣ್‌ನನ್ನು ಕತ್ತು ಹಿಸುಕಿ ಹತ್ಯೆಗೈದಿದ್ದಾರೆ.

ಕೊಲೆಯ ನಂತರ ಶವವನ್ನು ಬೈಕ್‌ನಲ್ಲಿ ಸಾಗಿಸಿ ನಗರದ ಹೊರವಲಯದ ಚರಂಡಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಾಹಿತಿ ತನಿಖೆಯ ವೇಳೆ ಸಿಕ್ಕಿದೆ. ಪ್ರಕರಣ ಬಯಲಿಗೆ ಬಂದ ಬಳಿಕ ಇಬ್ಬರನ್ನೂ ಬಂಧಿಸಲಾಗಿದ್ದು, ನ್ಯಾಯಾಂಗ ವಶಕ್ಕೆ ಪಡೆಯಲಾಗಿದೆ.

ರವೀನಾ ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಸಕ್ರಿಯಳಾಗಿದ್ದು, ಸುಮಾರು ಎರಡು ವರ್ಷಗಳ ಹಿಂದೆ ಹಿಸಾರ್ ಮೂಲದ ಯೂಟ್ಯೂಬರ್ ಸುರೇಶ್ ಜೊತೆ ಇನ್‌ಸ್ಟಾಗ್ರಾಂ ಮುಖಾಂತರ ಪರಿಚಯವಾಗಿತ್ತು. ಈ ಸಂಬಂಧ ನಿಧಾನವಾಗಿ ಪ್ರೀತಿಗೆ ತಿರುಗಿದ್ದು, ಪ್ರವೀಣ್‌ ಇದನ್ನು ಪ್ರಶ್ನಿಸುತ್ತಿದ್ದಂತೆ ಜಗಳಗಳು ಹೆಚ್ಚಾಗಿದ್ದವು. ಸಾಮಾಜಿಕ ಮಾಧ್ಯಮದಲ್ಲಿ ರವೀನಾ ಅಪ್ಲೋಡ್ ಮಾಡುತ್ತಿದ್ದ ವಿಡಿಯೋಗಳ ಬಗ್ಗೆ ಪ್ರವೀಣ್ ಆಕ್ಷೇಪ ವ್ಯಕ್ತಪಡಿಸುತ್ತಿದ್ದ ಎಂಬುದೂ ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ತನಿಖೆ ಮುಂದುವರಿಸುತ್ತಿದ್ದು, ಕೊಲೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಬಹಿರಂಗವಾಗುವ ನಿರೀಕ್ಷೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.