spot_img

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಯೂಟ್ಯೂಬರ್ ಪತ್ನಿ ಮತ್ತು ಆಕೆಯ ಪ್ರಿಯಕರ ಬಂಧನ

Date:

ಭಿವಾನಿ (ಹರಿಯಾಣ) : ಹರಿಯಾಣದ ಭಿವಾನಿಯಲ್ಲಿ ಅನೈತಿಕ ಸಂಬಂಧವೊಂದಕ್ಕೆ ಅಡ್ಡಿಯಾದ ಕಾರಣ ಪತಿಯೊಬ್ಬನು ತನ್ನ ಪತ್ನಿ ಹಾಗೂ ಆಕೆಯ ಪ್ರಿಯಕರನಿಂದ ಹತ್ಯೆಗೆ ಒಳಗಾದ ದಾರುಣ ಘಟನೆ ಬೆಳಕಿಗೆ ಬಂದಿದೆ. ಪತ್ನಿ ರವೀನಾ ಹಾಗೂ ಆಕೆಯ ಪ್ರೇಮಿ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮಾಹಿತಿಯ ಪ್ರಕಾರ, ಮೃತ ವ್ಯಕ್ತಿ ಪ್ರವೀಣ್ (ವಯಸ್ಸು 30) ಯೂಟ್ಯೂಬರ್ ರವೀನಾಳ ಪತಿ. ಇಬ್ಬರೂ 2017 ರಲ್ಲಿ ವಿವಾಹವಾಗಿದ್ದು, ಇವರಿಗೆ ಆರು ವರ್ಷದ ಮಗನೊಬ್ಬನಿದ್ದಾನೆ.

ಮಾರ್ಚ್ 25 ರಂದು ಪ್ರವೀಣ್ ತಡರಾತ್ರಿ ಮನೆಗೆ ಬಂದಾಗ, ಪತ್ನಿ ರವೀನಾ ಮತ್ತು ಆಕೆಯ ಪ್ರಿಯಕರ ಸುರೇಶ್ ಅಸಭ್ಯ ಭಂಗಿಯಲ್ಲಿ ಇರುವುದು ಕಂಡು ಬಂದು, ತೀವ್ರ ಜಗಳ ಸಂಭವಿಸಿದೆ. ಈ ಸಂದರ್ಭ, ಇಬ್ಬರೂ ಸೇರಿ ಪ್ರವೀಣ್‌ನನ್ನು ಕತ್ತು ಹಿಸುಕಿ ಹತ್ಯೆಗೈದಿದ್ದಾರೆ.

ಕೊಲೆಯ ನಂತರ ಶವವನ್ನು ಬೈಕ್‌ನಲ್ಲಿ ಸಾಗಿಸಿ ನಗರದ ಹೊರವಲಯದ ಚರಂಡಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಾಹಿತಿ ತನಿಖೆಯ ವೇಳೆ ಸಿಕ್ಕಿದೆ. ಪ್ರಕರಣ ಬಯಲಿಗೆ ಬಂದ ಬಳಿಕ ಇಬ್ಬರನ್ನೂ ಬಂಧಿಸಲಾಗಿದ್ದು, ನ್ಯಾಯಾಂಗ ವಶಕ್ಕೆ ಪಡೆಯಲಾಗಿದೆ.

ರವೀನಾ ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಸಕ್ರಿಯಳಾಗಿದ್ದು, ಸುಮಾರು ಎರಡು ವರ್ಷಗಳ ಹಿಂದೆ ಹಿಸಾರ್ ಮೂಲದ ಯೂಟ್ಯೂಬರ್ ಸುರೇಶ್ ಜೊತೆ ಇನ್‌ಸ್ಟಾಗ್ರಾಂ ಮುಖಾಂತರ ಪರಿಚಯವಾಗಿತ್ತು. ಈ ಸಂಬಂಧ ನಿಧಾನವಾಗಿ ಪ್ರೀತಿಗೆ ತಿರುಗಿದ್ದು, ಪ್ರವೀಣ್‌ ಇದನ್ನು ಪ್ರಶ್ನಿಸುತ್ತಿದ್ದಂತೆ ಜಗಳಗಳು ಹೆಚ್ಚಾಗಿದ್ದವು. ಸಾಮಾಜಿಕ ಮಾಧ್ಯಮದಲ್ಲಿ ರವೀನಾ ಅಪ್ಲೋಡ್ ಮಾಡುತ್ತಿದ್ದ ವಿಡಿಯೋಗಳ ಬಗ್ಗೆ ಪ್ರವೀಣ್ ಆಕ್ಷೇಪ ವ್ಯಕ್ತಪಡಿಸುತ್ತಿದ್ದ ಎಂಬುದೂ ತನಿಖೆಯಿಂದ ತಿಳಿದುಬಂದಿದೆ.

ಪೊಲೀಸರು ತನಿಖೆ ಮುಂದುವರಿಸುತ್ತಿದ್ದು, ಕೊಲೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಬಹಿರಂಗವಾಗುವ ನಿರೀಕ್ಷೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮುಖೇಶ್ ಅಂಬಾನಿ

1957 ಏಪ್ರಿಲ್ 19 ರಂದು ಮುಕೇಶ್ ಅಂಬಾನಿಯವರು ಗುಜರಾತಿ ಇಂದು ಕುಟುಂಬದಲ್ಲಿ ಇರುವ ಅಂಬಾನಿ ಹಾಗೂ ಕೋಕಿಲಾ ಬೆನ್ ದಂಪತಿಗಳಿಗೆ ಜನಿಸಿದರು

ಕಲರ್ಸ್ ಕನ್ನಡದಲ್ಲಿ ಹೊಸ ಕೌಟುಂಬಿಕ ಧಾರಾವಾಹಿ ‘ಮುದ್ದು ಸೊಸೆ’

'ಮುದ್ದು ಸೊಸೆ' ಕಲರ್ಸ್ ಕನ್ನಡದಲ್ಲಿ ವಿದ್ಯಾಗೆ ವಿದ್ಯೆ ಬೇಕು, ಮನೆಯವರಿಗೆ ಮದುವೆ ಸ್ಕೂಲ್ ಬೆಂಚಿಂದ ಹಸೆಮಣೆ ಏರುವ ವಿದ್ಯಾಳ ಬದುಕಿನ ಕತೆ ಕಲರ್ಸ್ ಕನ್ನಡ ವಾಹಿನಿ ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ, ಮನಮಿಡಿಯುವ ಧಾರಾವಾಹಿಗಳನ್ನು ನೀಡುವ ಮೂಲಕ ಜನಪ್ರಿಯವಾಗಿದೆ.

ಅಪರೂಪದ ನಾಯಿ ಖರೀದಿಗೆ 50 ಕೋಟಿ? ಬೆಂಗಳೂರು ಶ್ವಾನ ಪ್ರೇಮಿಯ ಮನೆಗೆ ಇಡಿ ದಾಳಿ!

ಬೆಂಗಳೂರು ಶ್ವಾನ ಪ್ರೇಮಿ ಎಸ್. ಸತೀಶ್ ತನ್ನಿಂದ 50 ಕೋಟಿ ರೂ. ಮೊತ್ತದಲ್ಲಿ ನಾಯಿ ಖರೀದನೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಹೇಳಿಕೆ ಇದೀಗ ಇಡಿ (ಅನ್ವೇಷಣಾ ನಿರ್ದೇಶನಾಲಯ) ತನಿಖೆಗೆ ಕಾರಣವಾಗಿದೆ.

ಪ್ರೊಸೆಸ್ಡ್ ಆಹಾರದ ನಿಗೂಢ ನಂಟು: ಆರೋಗ್ಯಕ್ಕೆ ರುಚಿಯೇ ವಿಷವಾಗುತ್ತಿದೆ !

ಇತ್ತೀಚಿನ ದಿನಗಳಲ್ಲಿ ಪ್ಯಾಕ್ಟ್ ಫುಡ್ಸ್, ಇನ್‌ಸ್ಟಂಟ್ ಆಹಾರಗಳು, ಬೀದಿ ಬದಿಯ ಜಂಕ್‌ಫುಡ್ಸ್ ಮತ್ತು ಇತರ ಸಂಸ್ಕರಿಸಿದ ಆಹಾರಗಳ ಬಳಕೆಯು ಗಣನೀಯವಾಗಿ ಹೆಚ್ಚಾಗಿದೆ.