spot_img

“ನಾನು ಹಿಂದೂವಾಗಿಯೇ ಸಾಯುತ್ತೇನೆ” – ಡಿಕೆಶಿ ಹೇಳಿಕೆಗೆ ಈಶ್ವರಪ್ಪ ಪ್ರಶಂಸೆ

Date:

ಶಿವಮೊಗ್ಗ: “ನಾನು ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಮಾತನಾಡಿ, “ಡಿಕೆಶಿಯ ಈ ಹೇಳಿಕೆ ಯುವಜನತೆಗೆ ಸ್ಫೂರ್ತಿ ನೀಡುವಂತಿದೆ. ಗಾಂಧೀಜಿ ಹುತಾತ್ಮರಾಗುವ ವೇಳೆ ‘ಹೇ ರಾಮ್’ ಎಂದರು. ಅದು ಡಿಕೆಶಿಗೆ ಸ್ಫೂರ್ತಿ ನೀಡಿರಬಹುದು” ಎಂದರು.

“ಶಿವರಾತ್ರಿ ಕಾರ್ಯಕ್ರಮಕ್ಕೆ ಸದ್ಗುರು ಅವರ ಆಹ್ವಾನಕ್ಕೆ ಡಿಕೆಶಿ ಹೋಗಿರುವುದರಲ್ಲಿ ತಪ್ಪೇನೂ ಇಲ್ಲ. ಅಷ್ಟೇ ಅಲ್ಲ, ಆರೆಸ್ಸೆಸ್‌ನ ವಿಜಯದಶಮಿ ಉತ್ಸವಕ್ಕೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಕೂಡಾ ಹೋಗಿದ್ದರು” ಎಂದು ಈಶ್ವರಪ್ಪ ಉದಾಹರಣೆ ನೀಡಿದರು.

“ಕಾಂಗ್ರೆಸ್ ನಾಯಕರಿಗೂ ಹಿಂದೂ ಧರ್ಮದ ಮೇಲೆ ಒಲವಿದೆ, ಆದರೆ ಅದನ್ನು ಹೇಳುವ ಧೈರ್ಯ ಇಲ್ಲ” ಎಂದು ಟೀಕಿಸಿದ ಅವರು, “ನಾನು ಜೀವನದಲ್ಲಿ ಮೊದಲ ಬಾರಿ ಡಿಕೆಶಿಯನ್ನು ಹೊಗಳುತ್ತಿದ್ದೇನೆ. ಅವರ ಮಾತು ಸ್ವಾತಂತ್ರ್ಯ ಪೂರ್ವದ ಸಿದ್ಧಾಂತವನ್ನು ಪ್ರತಿಬಿಂಬಿಸುತ್ತದೆ” ಎಂದು ಹೇಳಿದರು.

ಇದೇ ವೇಳೆ ತಮ್ಮ ರಾಜಕೀಯ ಜೀವನದ ಬಗ್ಗೆ ಮಾತನಾಡಿದ ಅವರು, “ನಾನು ಇಂದು ಈ ಸ್ಥಾನಕ್ಕೆ ಬರುವುದಕ್ಕೆ ಬಿ.ಎಸ್. ಯಡಿಯೂರಪ್ಪ ಮತ್ತು ಆರೆಸ್ಸೆಸ್ ಕಾರಣ. ಅದನ್ನು ನಾನು ಎಂದಿಗೂ ಮರೆಯಲಾರೆ” ಎಂದು ಭಾವುಕತೆ ವ್ಯಕ್ತಪಡಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.