spot_img

ರಾಜ್ಯದ ಜಿಲ್ಲೆಗಳಿಗೆ ಹೊಸ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ: ಉಡುಪಿ ಜಿಲ್ಲೆಗೆ ರೋಹಿಣಿ ಸಿಂಧೂರಿ

Date:

spot_img

ಬೆಂಗಳೂರು : ಕರ್ನಾಟಕ ಸರ್ಕಾರ ಮಹತ್ವದ ಆಡಳಿತಾತ್ಮಕ ಹೆಜ್ಜೆ ಇಟ್ಟು, ರಾಜ್ಯದ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ಆದೇಶ ಹೊರಡಿಸಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಜಾರಿಗೆ ಮೇಲ್ವಿಚಾರಣೆ ಮತ್ತು ತಪಾಸಣೆಗೆ, ಹಿರಿಯ ಐಎಎಸ್ ಅಧಿಕಾರಿಗಳನ್ನು ಈ ಹುದ್ದೆಗಳಿಗೆ ನಿಯೋಜಿಸಲಾಗಿದೆ.

ಈ ಬಗ್ಗೆ ಇಂದು ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಪ್ರಕಟಣೆ ನೀಡಿದ್ದು, ಜಿಲ್ಲೆಗಳಿಗೆ ರಾಜ್ಯ ಮಟ್ಟದ ಪ್ರಮುಖ ಅಧಿಕಾರಿಗಳನ್ನು ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.

ಪ್ರಮುಖ ನೇಮಕಾತಿಗಳ ಪಟ್ಟಿಯಲ್ಲಿ:

ರೋಹಿಣಿ ಸಿಂಧೂರಿ ದಾಸರಿ – ಉಡುಪಿ

ತುಳಸಿ ಮದ್ದಿನೇನಿ – ದಕ್ಷಿಣ ಕನ್ನಡ

ಹರ್ಷ ಗುಪ್ತ – ಬೆಂಗಳೂರು ನಗರ

ಡಾ. ಪಿಸಿ ಜಾಫರ್ – ಬೆಂಗಳೂರು ಗ್ರಾಮಾಂತರ

ವಿ. ರಶ್ಮಿ ಮಹೇಶ್ – ರಾಮನಗರ

ಡಾ. ಶಮ್ಲಾ ಇಕ್ಬಾಲ್ – ದಾವಣಗೆರೆ

ಬಿಬಿ ಕಾವೇರಿ – ಶಿವಮೊಗ್ಗ

ಡಾ. ಎಸ್ ಸೆಲ್ವಕುಮಾರ್ – ಮೈಸೂರು

ವಿ. ಅನ್ಬುಕುಮಾರ್ – ಮಂಡ್ಯ

ಡಾ. ಎಂವಿ ವೆಂಕಟೇಶ – ಚಾಮರಾಜನಗರ

ಪಂಕಜ್ ಕುಮಾರ್ ಪಾಂಡೆ – ಕಲಬುರ್ಗಿ

ಡಾ. ಕೆವಿ ತ್ರಿಲೋಕ್ ಚಂದ್ರ – ಬಳ್ಳಾರಿ

ಹೀಗೆ 31 ಜಿಲ್ಲೆಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈ ಅಧಿಕಾರಿಗಳು ಜಿಲ್ಲೆಯಲ್ಲಿ ಯೋಜನೆಗಳ ಮೇಲ್ವಿಚಾರಣೆ, ಅನಿರೀಕ್ಷಿತ ಪರಿಶೀಲನೆ, ವರದಿ ಸಂಗ್ರಹ ಮತ್ತು ಸರ್ಕಾರಕ್ಕೆ ವರದಿ ಸಲ್ಲಿಸುವ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ ಐದು ವರ್ಷವೂ ನಾನೇ ಸಿಎಂ” ಎಂದ ಸಿದ್ದರಾಮಯ್ಯ – “ನನಗೆ ಬೇರೆ ದಾರಿ ಇಲ್ಲ, ಬೆಂಬಲಿಸುತ್ತೇನೆ” ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ

ಸಿದ್ದರಾಮಯ್ಯನವರ ಸಿಎಂ ಹುದ್ದೆಗೆ ಬೆಂಬಲ ಸೂಚಿಸಿರುವ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರಿಗೂ “ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಯಾರೂ ಅಪಸ್ವರ ಎತ್ತಬೇಡಿ.” ಎಂದು ಕಿವಿಮಾತು ನೀಡಿದ್ದಾರೆ.

ಸುರತ್ಕಲ್‌ನ ಮಧ್ಯ ಮಾಧವನಗರದಲ್ಲಿ ಖಾಸಗಿ ಬಸ್‌ಗಳ ಮುಖಾಮುಖಿ ಡಿಕ್ಕಿ – ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಮಧ್ಯ ಮಾಧವನಗರದಲ್ಲಿ ಬುಧವಾರ ಬೆಳಿಗ್ಗೆ ನಡೆದ ಭಾರೀ ರಸ್ತೆ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.

ಹಾಸನದಲ್ಲಿ ನವವಿವಾಹಿತೆಯ ಶವ ಪತ್ತೆ: ಪತಿಯ ಕುಟುಂಬದ ಮೇಲೆ ಹತ್ಯೆ ಆರೋಪ!

ನವವಿವಾಹಿತೆಯೊಬ್ಬರ ಶವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರೈಲ್ವೆ ಹಳಿ ಮೇಲೆ ಪತ್ತೆಯಾದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ (24) ಮೃತಪಟ್ಟ ದುರ್ದೈವಿ.

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಬೈಲೂರು ಮೈನ್ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಮೈನ್ ಇಲ್ಲಿನ ವಿದ್ಯಾರ್ಥಿಗಳಿಗೆ ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭ ನಡೆಯಿತು.