spot_img

ಐಬಿ ಅಧಿಕಾರಿಯ ದಾರುಣ ಅಂತ್ಯ: ಕೇರಳದಲ್ಲಿ ರೈಲಿಗೆ ಡಿಕ್ಕಿಯಾಗಿ ಸಾವು

Date:

ಕೇರಳದ ತಿರುವನಂತಪುರಂ ಪೆಟ್ಟಾ ರೈಲು ಹಳಿಯಲ್ಲಿ ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿ ಮೇಘಾ (25) ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಜಯಂತಿ ಜನತಾ ಎಕ್ಸ್ಪ್ರೆಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತರಾಗಿದ್ದಾರೆ.

ಘಟನೆಯ ವಿವರ:
ಮೇಘಾ, ನಿವೃತ್ತ ಐಟಿಐ ಪ್ರಾಂಶುಪಾಲ ಮಧುಸೂದನನ್ ಮತ್ತು ಪಾಲಕ್ಕಾಡ್ ಕಲೆಕ್ಟರೇಟ್ ಉದ್ಯೋಗಿ ನಿಶಾ ಅವರ ಏಕೈಕ ಪುತ್ರಿಯಾಗಿದ್ದರು. ರಾತ್ರಿ ಕರ್ತವ್ಯ ಮುಗಿಸಿ ವಿಮಾನ ನಿಲ್ದಾಣದಿಂದ ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಲೋಕೋ ಪೈಲಟ್ ಮಾಹಿತಿ
ಸ್ಥಳೀಯರಿಂದ ಮಾಹಿತಿ ಪಡೆದ ಪೆಟ್ಟಾ ಪೊಲೀಸರು ಘಟನೆ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ಕೂಲಂಕಷ ತನಿಖೆ ಆರಂಭಿಸಿದ್ದಾರೆ. ಲೋಕೋ ಪೈಲಟ್ ನೀಡಿದ ಮಾಹಿತಿಯಂತೆ, ಮೇಘಾ ಮೊಬೈಲ್‌ನಲ್ಲಿ ಮಾತನಾಡುತ್ತಾ ಹಳಿಯಲ್ಲಿ ನಡೆದು ಹೋಗುತ್ತಿದ್ದರು. ರೈಲು ಬರುತ್ತಿರುವುದನ್ನು ನೋಡಿ ದಿಢೀರ್ ತಲೆ ಇಟ್ಟು ಮಲಗಿದ್ದಾರೆ ಎಂದು ತಿಳಿಸಿದ್ದಾರೆ.

ಪೊಲೀಸರ ತನಿಖೆ:
ಮೇಘಾ ಅವರ ಐಡಿಬಿ ಗುರುತು ಪತ್ತೆಯಾದ ಬಳಿಕ ಆಕೆ ಫೋನ್‌ನಲ್ಲಿ ಕೊನೆಯ ಬಾರಿ ಯಾರೊಂದಿಗೆ ಮಾತನಾಡಿದರು ಎಂಬುದನ್ನು ಪತ್ತೆ ಹಚ್ಚಲು ಸೈಬರ್ ಪೊಲೀಸ್ ಸಹಾಯ ಪಡೆಯಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.