spot_img

ಮುದ್ರಾಡಿ ಪ್ರೌಢಶಾಲೆಯಲ್ಲಿ “ಇಳೆಗೈಸಿರಿ” ವನಮಹೋತ್ಸವ ಕಾರ್ಯಕ್ರಮ

Date:

spot_img

ಹೆಬ್ರಿ: ಗಿಡಮರಗಳನ್ನು ನೆಡುವುದರಿಂದ ಜಾಗತಿಕ ತಾಪಮಾನವನ್ನು ಗಣನೀಯವಾಗಿ ತಗ್ಗಿಸಬಹುದು.ಜೊತೆಗೆ ಮಣ್ಣಿನ ಸವಕಳಿಯನ್ನು ತಡೆಗಟ್ಟಬಹುದು. ನೆಟ್ಟಿರುವ ಗಿಡಮರಗಳು ಶುದ್ಧ ಆಮ್ಲಜನಕವನ್ನು ಪ್ರಕೃತಿಗೆ ಬಿಡುಗಡೆ ಮಾಡುವುದರಿಂದ ಆರೋಗ್ಯ ಮಟ್ಟವನ್ನು ಸುಧಾರಿಸಿಕೊಳ್ಳಬಹುದು ಎಂದು ಸೀತಾನದಿ ಉಪವಲಯ ಅರಣ್ಯಾಧಿಕಾರಿ ಪ್ರದೀಪ್ ರವರು ಹೇಳಿದರು.

ಅವರು ಮುದ್ರಾಡಿ ಎಂ. ಎನ್.ಡಿ. ಎಸ್. ಎಂ.ಅನುದಾನಿತ ಪ್ರೌಢಶಾಲೆಯ ಕಲ್ಪನಾ ಪರಿಸರ ಸಂಘ ಮತ್ತು ಹೆಬ್ರಿ ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಡೆದ “ಇಳೆಗೈಸಿರಿ” ವನಮಹೋತ್ಸವ ಕಾರ್ಯಕ್ರಮದಲ್ಲಿ ಪ್ರತಿ ಮಗುವಿನ ಮನೆಗೊಂದು ಗಿಡವನ್ನು ವಿತರಿಸಿ ಮಾತನಾಡಿದರು. ಗಿಡ ಮರಗಳನ್ನು ಬೆಳೆಸುವ, ಅವುಗಳನ್ನು ಪಾಲಿಸುವ ಜೊತೆಗೆ ಪ್ರಕೃತಿಯನ್ನು ರಕ್ಷಿಸುವ ಗುರುತರವಾದ ಹೊಣೆಗಾರಿಕೆ ಇಂದಿನ ಯುವ ಪೀಳಿಗೆಯದ್ದಾಗಿದ್ದು ಅದಕ್ಕಾಗಿ ಎಲ್ಲರೂ ಕಟಿಬದ್ಧರಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಾಗರ್ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಯಾದ ಅಶೋಕ್ ಕುಮಾರ್ ಶೆಟ್ಟಿ ವಹಿಸಿದ್ದರು. ಮುದ್ರಾಡಿ ವಲಯದ ಗಸ್ತು ಅರಣ್ಯ ಪಾಲಕರಾಗಿರುವ ದೇವಾನಂದ್, ಕಲ್ಪನಾ ಪರಿಸರ ಸಂಘದ ಅಧ್ಯಕ್ಷ ಶೋಭಿತ್ ಯು. ಪೂಜಾರಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಪರಿಸರ ಸಂಘದ ಮಾರ್ಗದರ್ಶಿ ಶಿಕ್ಷಕಿ ಶ್ಯಾಮಲಾ ಕೊಠಾರಿ ಕಾರ್ಯಕ್ರಮ ನಿರೂಪಿಸಿ, ಮಹೇಶ್ ನಾಯ್ಕ್ ಕೆ. ವಂದಿಸಿದರು. ಶಿಕ್ಷಕರಾದ ರಘುಪತಿ ಹೆಬ್ಬಾರ್, ಚಂದ್ರಕಾಂತಿ ಹೆಗ್ಡೆ, ಶಿಕ್ಷಕೇತರ ಸಿಬ್ಬಂದಿ ಮಹೇಶ ಎಂ., ಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್ ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಗವದ್ಗೀತೆ ಪ್ರಚಾರಕಿ ಮೀನಾಕ್ಷಿ ಪೈ ಅವರಿಗೆ ಬಿಜೆಪಿ ನಗರ ಯುವ ಮೋರ್ಚಾದ ವತಿಯಿಂದ ಗೌರವಾರ್ಪಣೆ

ಮೀನಾಕ್ಷಿ ಪೈ ಅವರನ್ನು ಶ್ರೀ ಗುರು ಪೂರ್ಣಿಮಾ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ಶ್ರೀವತ್ಸ ಅವರ ನೇತೃತ್ವದಲ್ಲಿ ಗೌರವಿಸಿ ಗುರು ವಂದನೆ ಸಲ್ಲಿಸಲಾಯಿತು.

ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ‘ಯಕ್ಷ ಗುರು’ ಬನ್ನಂಜೆ ಸಂಜೀವ ಸುವರ್ಣರಿಗೆ ಗೌರವಾರ್ಪಣೆ

ಶ್ರೀ ಗುರು ಪೂರ್ಣಿಮಾ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ಶ್ರೀವತ್ಸರವರ ನೇತೃತ್ವದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಖ್ಯಾತ ಯಕ್ಷ ಗುರು, ಉಡುಪಿಯ 'ಯಕ್ಷ ಸಂಜೀವ ಯಕ್ಷಗಾನ ಕೇಂದ್ರ'ದ ಮುಖ್ಯಸ್ಥರಾದ ಬನ್ನಂಜೆ ಸಂಜೀವ ಸುವರ್ಣ ಅವರನ್ನು ಅವರ ನಿವಾಸದಲ್ಲಿ ಗೌರವಿಸಿ ಗುರು ವಂದನೆ ಸಲ್ಲಿಸಲಾಯಿತು.

‘ನ್ಯಾಷನಲ್ ಕ್ರಶ್’ ಅನಿರೀಕ್ಷಿತ ಪಾತ್ರದಲ್ಲಿ : ರಶ್ಮಿಕಾ ಮಂದಣ್ಣ ನಿರ್ಧಾರಕ್ಕೆ ಅಚ್ಚರಿ!

ತಮ್ಮ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಮುಂಬರುವ ಹೈ- ಆಕ್ಷನ್ ಎಂಟರ್‌ಟೈನರ್ 'AA22XA6' ಚಿತ್ರದಲ್ಲಿ ಮೊದಲ ಬಾರಿಗೆ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಡಾರ್ಕ್ ಅಂಡರ್‌ಆರ್ಮ್ಸ್ ಸಮಸ್ಯೆಯೇ? ಕಪ್ಪಾದ ಕಂಕುಳನ್ನು ಬೆಳ್ಳಗಾಗಿಸಲು ಇಲ್ಲಿದೆ ಸುಲಭ ಮನೆಮದ್ದುಗಳು!

ಕಪ್ಪಾದ ಕಂಕುಳನ್ನು ಬೆಳ್ಳಗಾಗಿಸಲು ಕೆಲವು ಸುಲಭ ಮನೆಮದ್ದುಗಳನ್ನು ಬಳಸಬಹುದು.