ಬೈಂದೂರಿನಲ್ಲಿ ಅಕ್ರಮ ದನಗಳ ಸಾಗಾಟ: ಪೊಲೀಸರ ಕಾರ್ಯಾಚರಣೆ ವೇಳೆ ಆರೋಪಿಗಳು ಪರಾರಿ, ಬ್ರೀಜಾ ಕಾರು ವಶಕ್ಕೆ!

Date:

spot_img

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಕಾರ್ಯಾಚರಣೆ ವೇಳೆ ಕಾರು ಬಿಟ್ಟು ಪರಾರಿಯಾಗಿದ್ದಾರೆ. ಕೆಂಪು ಬಣ್ಣದ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಪತ್ತೆ ಹಚ್ಚಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಕರಣದ ವಿವರ: ಜುಲೈ 7, 2025 ರಂದು ಬೆಳಿಗ್ಗೆ ಬೈಂದೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ನವೀನ್ ಬೋರ್ಕರ್ (ತನಿಖೆ) ಅವರಿಗೆ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಕೆಂಪು ಬಣ್ಣದ ಬ್ರೀಜಾ ಕಾರಿನಲ್ಲಿ ದನಗಳನ್ನು ಕಳವು ಮಾಡಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಬೈಂದೂರು ಒತ್ತಿನಣೆ ತಿರುವಿನಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ವಾಹನಗಳ ತಪಾಸಣೆ ಆರಂಭಿಸಿದರು.

ಬೆಳಿಗ್ಗೆ 6:00 ಗಂಟೆಗೆ ಬೈಂದೂರು ಕಡೆಯಿಂದ ಬಂದ KA-47-M-8960 ನೋಂದಣಿ ಸಂಖ್ಯೆಯ ಕೆಂಪು ಬಣ್ಣದ ಬ್ರೀಜಾ ಕಾರನ್ನು ತಡೆದು ನಿಲ್ಲಿಸಲು ಪ್ರಯತ್ನಿಸಿದಾಗ, ಕಾರಿನಲ್ಲಿದ್ದವರು ವಾಹನವನ್ನು ಹಿಂದಕ್ಕೆ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಆದರೆ, ಹಿಂಬದಿಯಲ್ಲಿ ಬೇರೆ ವಾಹನಗಳಿದ್ದ ಕಾರಣ ಸಾಧ್ಯವಾಗಲಿಲ್ಲ. ಕೂಡಲೇ ಕಾರನ್ನು ಅಲ್ಲೇ ಬಿಟ್ಟು, ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಇಳಿದು ಓಡಿ ಪರಾರಿಯಾಗಿದ್ದಾರೆ.

ಪೊಲೀಸರು ಕಾರನ್ನು ಪರಿಶೀಲಿಸಿದಾಗ, ಅದಕ್ಕೆ ಟಿಂಟ್ ಗ್ಲಾಸ್ ಅಳವಡಿಸಲಾಗಿತ್ತು. ಕಾರಿನ ಡಿಕ್ಕಿಯನ್ನು ತೆರೆದು ನೋಡಿದಾಗ, ಯಾವುದೇ ಪರವಾನಿಗೆ ಪಡೆಯದೆ ನಾಲ್ಕು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಾಲು ಕಟ್ಟಿ, ಒಂದರ ಮೇಲೆ ಒಂದನ್ನು ಹಾಕಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಮಾಂಸ ಮಾಡುವ ಉದ್ದೇಶದಿಂದ ಈ ದನಗಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 132/2025 ಅಡಿಯಲ್ಲಿ ಕಲಂ: 303(2) BNS, 4, 5, 7, 12 ಕರ್ನಾಟಕ ಜಾನುವಾರು ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 (Karnataka Prevention of Cow Slaughter & Cattle Preservation Act 2020), ಪ್ರಾಣಿ ಹಿಂಸೆ ತಡೆ ಕಾಯ್ದೆ 1960 ರ ಕಲಂ: 11(1)(D), ಹಾಗೂ ಸೆಕ್ಷನ್ 66 ಜೊತೆಗೆ 192 (A) IMV ಕಾಯ್ದೆ ಮತ್ತು CMV ನಿಯಮ 100(2) R/w 177 IMV ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.