spot_img

ಅಕ್ರಮ ಕೆಂಪು ಕಲ್ಲು ಸಾಗಾಟ: ಲಾರಿ ಸಮೇತ ಚಾಲಕ ಬಂಧನ

Date:

spot_img

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು, ಅದರ ಚಾಲಕನನ್ನು ಬಂಧಿಸಿದ್ದಾರೆ.

ಪ್ರಕರಣದ ವಿವರ

ಆಗಸ್ಟ್ 7ರಂದು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಸೋಮನಾಥ ರೈ ಮತ್ತು ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಈ ಕಾರ್ಯಾಚರಣೆ ನಡೆಸಿದ್ದಾರೆ. ವಿಟ್ಲ ಕಸಬ ಗ್ರಾಮದ ಪ್ರಸಾದ್ ಸರ್ವೀಸ್ ಸ್ಟೇಷನ್ ಬಳಿಯ ರಸ್ತೆಯಲ್ಲಿ ಕೇಪು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ KA-21-C-6056 ನಂಬರ್‌ನ ಲಾರಿಯನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ.

ಲಾರಿಯ ಚಾಲಕ ಹಕಿಂ (30) ಎಂಬಾತನನ್ನು ಬಂಧಿಸಲಾಗಿದೆ. ಈತ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿ. ಈತ ಯಾವುದೇ ಪರವಾನಿಗೆ ಮತ್ತು ದಾಖಲಾತಿಗಳಿಲ್ಲದೆ ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ಕೆಂಪು ಕಲ್ಲುಗಳನ್ನು ಕಳ್ಳತನ ಮಾಡಿ ಸಾಗಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸುಮಾರು ₹10 ಲಕ್ಷ ಮೌಲ್ಯದ ಲಾರಿ ಮತ್ತು ₹14,000 ಮೌಲ್ಯದ ಕೆಂಪು ಕಲ್ಲುಗಳನ್ನು ಜಪ್ತಿ ಮಾಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ಜೈವಿಕ ಇಂಧನ ದಿನಾಚರಣೆ

ಪ್ರತಿ ವರ್ಷ ಆಗಸ್ಟ್ 10ರಂದು ವಿಶ್ವ ಜೈವಿಕ ಇಂಧನ ದಿನ (World Biofuel Day) ವನ್ನು ಆಚರಿಸಲಾಗುತ್ತದೆ. ಪೆಟ್ರೋಲಿಯಂ ಮೂಲದ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ, ಪರಿಸರ ಸ್ನೇಹಿ ಮತ್ತು ನವೀಕರಿಸಬಹುದಾದ ಇಂಧನಗಳ ಬಗ್ಗೆ ಅರಿವು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ

ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿಯುತ್ತೀರಾ?: ಇಲ್ಲಿದೆ ಆರೋಗ್ಯ ತಜ್ಞರ ಅಭಿಪ್ರಾಯ

ಆರೋಗ್ಯ ತಜ್ಞರ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಡೈರಿ ಉತ್ಪನ್ನಗಳನ್ನು ಸೇವಿಸುವುದರಿಂದ ಕೆಲವರಿಗೆ ಪ್ರಯೋಜನವಾದರೆ, ಇನ್ನು ಕೆಲವರಿಗೆ ತೊಂದರೆ ಉಂಟಾಗಬಹುದು.

ಭಾರತದ ವಾಹನ ಮಾರುಕಟ್ಟೆಗೆ ಕ್ವಾಲ್ಕಾಮ್‌ನ ‘ಡಿಜಿಟಲ್ ಚಾಸಿಸ್’: ಸ್ಮಾರ್ಟ್‌ ಕಾರ್‌ಗಳು ಇನ್ನಷ್ಟು ಸುರಕ್ಷಿತ

ಕ್ವಾಲ್ಕಾಮ್ ತನ್ನ ಸ್ನಾಪ್‌ಡ್ರಾಗನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಭಾರತದ ವಾಹನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ.

ವೀರೇಂದ್ರ ಹೆಗ್ಗಡೆಯವರ ಒಳ್ಳೆ ಕೆಲಸ ಕಾಣಿಸುತ್ತಿಲ್ಲವೇ?: ಅಪಪ್ರಚಾರದ ವಿರುದ್ಧ ವಚನಾನಂದ ಶ್ರೀಗಳ ಆಕ್ರೋಶ

ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರವಾಗಿ ಪ್ರಬಲವಾಗಿ ಮಾತನಾಡಿದರು.