spot_img

ಹುಬ್ಬಳ್ಳಿಯಲ್ಲಿ ಪೌಷ್ಟಿಕ ಆಹಾರ ಅಕ್ರಮ ದಾಸ್ತಾನು – 26 ಮಂದಿ ಬಂಧನ!

Date:

spot_img

ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಸರಕಾರದಿಂದ ಉಚಿತವಾಗಿ ವಿತರಿಸಬೇಕಾದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಂಗ್ರಹಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು 26 ಮಂದಿಯನ್ನು ಬಂಧಿಸಿದ್ದು, ಅವರಲ್ಲಿ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಳೇ ಗಬ್ಬೂರಿನ ಒಂದು ಗೋದಾಮಿನಲ್ಲಿ ಈ ಪೌಷ್ಟಿಕ ಆಹಾರ ದಾಸ್ತಾನು ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದಾಗ 329 ಚೀಲಗಳಲ್ಲಿ ಸಂಗ್ರಹಿಸಲಾಗಿದ್ದ 4.84 ಟನ್ ವಿವಿಧ ಬಗೆಯ ಪೌಷ್ಟಿಕ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಅಲ್ಲದೆ, ಈ ಕೃತ್ಯಕ್ಕೆ ಬಳಸಲಾಗುತ್ತಿದ್ದ 3 ಲಕ್ಷ ರೂಪಾಯಿ ಮೌಲ್ಯದ ಬೊಲೆರೊ ವಾಹನವನ್ನೂ ಸಹ ವಶಕ್ಕೆ ಪಡೆಯಲಾಗಿದೆ.

ಗೋದಾಮಿನ ಮಾಲೀಕ ಮೊಹ್ಮದ್ ಗೌಸ್ ಖಲಿಪಾ, ಬಾಡಿಗೆದಾರ ಗೌತಮ್ ಸಿಂಗ್ ಠಾಕೂರ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರಾದ ಶಮಿಮಾಬಾನು ಮುಜಾವರ, ಶಮಿಮಾಬಾನು ದಾರುಗಾರ, ಬೇಬಿಆಯಿಶಾ ಕಾರಿಗಾರ, ರೇಷ್ಮಾ ವಡ್ಡೋ, ಶಾಹೀನಾ ಚಕ್ಕೆಹಾರಿ, ಫೈರೋಜಾ ಮುಲ್ಲಾ, ಶಕುಂತಲಾ ನ್ಯಾಮತಿ, ಚಿತ್ರಾ ಉರಾಣಿಕರ್ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಕಮಿಷನರ್ ಎನ್. ಶಶಿಕುಮಾರ ಮಾಹಿತಿ ನೀಡಿದ್ದು, ಸರಕಾರ ಪೂರೈಸಿದ ಪೌಷ್ಟಿಕ ಆಹಾರ ಪದಾರ್ಥಗಳನ್ನು ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದ ವಿಚಾರ ತನಿಖೆಯಲ್ಲಿ ಬಹಿರಂಗವಾಗಿದೆ. ಈ ಪ್ರಕರಣದಲ್ಲಿ ಇನ್ನೂ ಕೆಲ ಪ್ರಮುಖ ಆರೋಪಿಗಳು ಭಾಗಿಯಾಗಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಲಕ್ಷಾಂತರ ರೂ. ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ.

ಕಲಾಪದ ವೇಳೆ ಮೊಬೈಲ್‌ನಲ್ಲಿ ‘ರಮ್ಮಿ’ ಆಟದಲ್ಲಿ ಮುಳುಗಿದ ಕೃಷಿ ಸಚಿವ

ಮಹಾರಾಷ್ಟ್ರ ವಿಧಾನಸಭೆಯ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಓರ್ವ ಸಚಿವರು ತಮ್ಮ ಮೊಬೈಲ್ ಫೋನ್‌ನಲ್ಲಿ 'ರಮ್ಮಿ' ಗೇಮ್ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಆಧಾರ್ ಕಾರ್ಡ್‌ಗೆ ಅವಧಿ ಇದೆಯೇ? ನಿಮ್ಮ ಆಧಾರ್ ಸಿಂಧುತ್ವವನ್ನು ಪರಿಶೀಲಿಸುವುದು ಹೇಗೆ?

ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.

ಉಪರಾಷ್ಟ್ರಪತಿ ಧಂಖರ್: ಭಾರತದ ಸಾರ್ವಭೌಮತೆಗೆ ಸವಾಲಿಲ್ಲ, ವಿದೇಶಿ ಹಸ್ತಕ್ಷೇಪ ಅಸಾಧ್ಯ

ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ