spot_img

ಆರೋಗ್ಯದಲ್ಲಿ ಬಾಳೆಹಣ್ಣಿನ ಮಹತ್ವ

Date:

ಎಲ್ಲಾ ಹಣ್ಣುಗಳಿಗಿಂತಲೂ ಸುಲಭವಾಗಿ ದೊರಕುವ ಮತ್ತು ವರ್ಷಪೂರ್ತಿ ಲಭ್ಯವಿರುವ ಹಣ್ಣು ಎಂದರೆ ಬಾಳೆಹಣ್ಣು. ಹಳ್ಳಿಗಳಲ್ಲಿ ಊರಿನಿಂದ ಬರುವವರು ಹೆಚ್ಚಾಗಿ ಒಂದು ಡಜನ್ ಬಾಳೆಹಣ್ಣು ಕೊಂಡೊಯ್ಯುವ ಪದ್ಧತಿ ಇನ್ನೂ ಉಳಿದಿದೆ. ಬಾಳೆಹಣ್ಣನ್ನು ಸೇವಿಸುವುದರಿಂದಾಗುವ ಪ್ರಯೋಜನಗಳಿಂದ ಅದನ್ನು ನಿತ್ಯ ಆಹಾರದ ಅವಿಭಾಜ್ಯ ಅಂಗವನ್ನಾಗಿ ಮಾಡಿವೆ.

ಬಾಳೆಹಣ್ಣಿನಲ್ಲಿರುವ ಟ್ರಿಪ್ಟೋಫಾನ್ ಎಂಬ ಪ್ರೊಟೀನ್ ಅಂಶ, ದೇಹದಲ್ಲಿ ಸಿರೊಟೋನಿಸ್ ಆಗಿ ಪರಿವರ್ತನೆಗೊಳ್ಳುತ್ತದೆ. ಇದರಿಂದ ಮಾನಸಿಕ ಶಾಂತಿ ಹೆಚ್ಚಾಗಿ, ಒತ್ತಡ ಕಡಿಮೆಯಾಗುತ್ತದೆ. ಇದಕ್ಕಾಗಿಯೇ ಕೆಲವರು ಊಟದ ನಂತರ ಬಾಳೆಹಣ್ಣು ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಇದು ಜೀರ್ಣಕ್ರಿಯೆ ಸುಧಾರಿಸುವ ಜೊತೆಗೆ ಶರೀರಕ್ಕೆ ಅಗತ್ಯವಾದ ಪೌಷ್ಟಿಕಾಂಶಗಳನ್ನು ಸರಿಯಾಗಿ ಒದಗಿಸುತ್ತದೆ.

ಕ್ರೀಡಾಪಟುಗಳ ಶಕ್ತಿಯ ಮೂಲವೆಂದರೆ ಬಾಳೆಹಣ್ಣು. ಇದರಲ್ಲಿರುವ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ ಶರೀರಕ್ಕೆ ತಕ್ಷಣ ಶಕ್ತಿ ನೀಡುವ ಮೂಲಕ ದೀರ್ಘಕಾಲ ಚೈತನ್ಯ ತುಂಬಲು ಸಹಕಾರಿಯಾಗುತ್ತವೆ. ಇದನ್ನು ವೈದ್ಯರೂ ಊಟದ ಬಳಿಕ ಅಥವಾ ವ್ಯಾಯಾಮದ ಬಳಿಕ ಸೇವಿಸಲು ಸಲಹೆ ನೀಡುತ್ತಾರೆ.

ಪೌಷ್ಟಿಕ ಅಂಶಗಳ ದೃಷ್ಟಿಯಿಂದ ನೋಡಿದರೆ, ಬಾಳೆಹಣ್ಣು ಪೋಟ್ಯಾಸಿಯಮ್, ಮೆಗ್ನೀಸಿಯಂ, ವಿಟಮಿನ್ ಎ, ಬಿ, ಸಿ ಮತ್ತು ವಿಟಮಿನ್ ಬಿ6 ಅನ್ನು ಒಳಗೊಂಡಿದ್ದು, ಹೃದಯದ ಆರೋಗ್ಯ ಕಾಪಾಡಲು ಹಾಗೂ ತೂಕ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಮಕ್ಕಳಿಗೆ ಪ್ರತಿದಿನ ಬಾಳೆಹಣ್ಣು ನೀಡುವುದರಿಂದ ಆಸ್ತಮಾ ತಡೆಯಲು ಸಾಧ್ಯವಿದೆ. ದೇಹದ ನರಮಂಡಲವನ್ನು ಬಲಪಡಿಸುವ ಜೊತೆಗೆ ಬಿಳಿ ರಕ್ತಕಣಗಳ ಉತ್ಪತ್ತಿಯನ್ನು ಹೆಚ್ಚಿಸುತ್ತದೆ. ಹಸಿರು ಬಾಳೆಹಣ್ಣಿಗಿಂತ ಹೆಚ್ಚು ಪ್ರಯೋಜನ ನೀಡುವ ಬಣ್ಣ ಬದಲಾದ ಕಪ್ಪು ಬಾಳೆಹಣ್ಣು ಇನ್ನೂ ಹೆಚ್ಚು ಪರಿಣಾಮಕಾರಿ.

ನಿದ್ರಾ ಸಮಸ್ಯೆ, ಹೊಟ್ಟೆ ನೋವು, ಅಜೀರ್ಣ, ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಬಾಳೆಹಣ್ಣು ಸಹಕಾರಿಯಾಗಿದೆ. ಇದರಲ್ಲಿರುವ ವಿಟಮಿನ್ ಬಿ-6 ಹಾಗೂ ಮೆಗ್ನೀಸಿಯಂ ಸ್ನಾಯುಗಳನ್ನು ಸಡಿಲಗೊಳಿಸುವ ಮೂಲಕ ಗುಣಮಟ್ಟದ ನಿದ್ರೆ ನೀಡುತ್ತದೆ. ಬಾಳೆಹಣ್ಣು ನಿಯಮಿತವಾಗಿ ಸೇವಿಸಿದರೆ ರಕ್ತದೊತ್ತಡ ಸಮತೋಲನಗೊಳ್ಳುವ ಜೊತೆಗೆ ದೇಹದ ಪ್ರತಿರೋಧಕ ಶಕ್ತಿ ಸುಧಾರಿಸುತ್ತದೆ.

ಆದ್ದರಿಂದ, ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಬಾಳೆಹಣ್ಣನ್ನು ಆಹಾರದಲ್ಲಿ ಸೇರಿಸಿಕೊಳ್ಳಿ!

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆರ್‌ಸಿಬಿ ಅಭಿಮಾನಿ ಮೂಲ್ಕಿ ಮೂಲದ ಅಕ್ಷತಾ ಕಾಲ್ತುಳಿತದಿಂದ ಸಾವು: ಟೀಶರ್ಟ್‌ನಿಂದ ಗುರುತು ಹಚ್ಚಿದ ಪತಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಿದ್ದಾಪುರದ ಅಕ್ಷತಾ (27) ಮೃತಪಟ್ಟಿದ್ದಾರೆ. ಆರ್‌ಸಿಬಿ ಟೀಶರ್ಟ್‌ನಿಂದ ಪತ್ನಿಯ ಗುರುತನ್ನು ಗಂಡ ಆಶಯ್ ಪತ್ತೆ ಹಚ್ಚಿದರು.

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ11 ಮಂದಿ ಮೃತ್ಯು : ಸಿಎಂ ಸಿದ್ದರಾಮಯ್ಯರವರಿಂದ ₹10 ಲಕ್ಷ ಪರಿಹಾರ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಿದ್ದರಾಮಯ್ಯಮೃತಪಟ್ಟ 11 ಮಂದಿ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

“ಇನ್ನು ಕೆಲದಿನ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” : ಅಭಿಮಾನಿಗಳಿಗೆ ಶಾಕ್ ಕೊಟ್ಟ ಶೋಭಾ ಶೆಟ್ಟಿ

ಬಿಗ್ ಬಾಸ್ ಖ್ಯಾತಿಯ ನಟಿ ಹಾಗೂ ಕನ್ನಡ-ತೆಲುಗು ಚಿತ್ರರಂಗದಲ್ಲಿ ಚಿರಪರಿಚಿತರಾದ ಶೋಭಾ ಶೆಟ್ಟಿ ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “ನಾನು ಕೆಲವು ದಿನಗಳವರೆಗೆ ಸಾಮಾಜಿಕ ಜಾಲತಾಣದಿಂದ ದೂರವಿರುತ್ತೇನೆ” ಎಂಬ ಪೋಸ್ಟ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಆರ್‌ಸಿಬಿ ವಿಜಯೋತ್ಸವ ದುರಂತ: ಕಾಲ್ತುಳಿತದಲ್ಲಿ 11 ಅಭಿಮಾನಿಗಳ ಸಾವು – ವಿರಾಟ್ ಕೊಹ್ಲಿ ಹಾಗೂ ಆರ್‌ಸಿಬಿಯಿಂದ ಸಂತಾಪ

ಆರ್‌ಸಿಬಿ ವಿಜಯೋತ್ಸವ ದುರಂತದ ಕುರಿತು ಪ್ರತಿಕ್ರಿಯಿಸಿರುವ ಆರ್‌ಸಿಬಿ ತಾರೆ ವಿರಾಟ್ ಕೊಹ್ಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಶೋಕದ ಭಾವನೆ ಹಂಚಿಕೊಂಡಿದ್ದು, “ಈ ದುಃಖದ ಸುದ್ದಿ ಕೇಳಿ ನಾನು ಶಬ್ದವಿಲ್ಲದವನಾಗಿದ್ದೇನೆ. ಹೃದಯ ಒಡೆದುಹೋಗಿದೆ” ಎಂದು ಬರೆದುಕೊಂಡಿದ್ದಾರೆ.