ಆರೋಗ್ಯದಲ್ಲಿ ಬಾಳೆಹಣ್ಣಿನ ಮಹತ್ವ

Date:

spot_img

ಎಲ್ಲಾ ಹಣ್ಣುಗಳಿಗಿಂತಲೂ ಸುಲಭವಾಗಿ ದೊರಕುವ ಮತ್ತು ವರ್ಷಪೂರ್ತಿ ಲಭ್ಯವಿರುವ ಹಣ್ಣು ಎಂದರೆ ಬಾಳೆಹಣ್ಣು. ಹಳ್ಳಿಗಳಲ್ಲಿ ಊರಿನಿಂದ ಬರುವವರು ಹೆಚ್ಚಾಗಿ ಒಂದು ಡಜನ್ ಬಾಳೆಹಣ್ಣು ಕೊಂಡೊಯ್ಯುವ ಪದ್ಧತಿ ಇನ್ನೂ ಉಳಿದಿದೆ. ಬಾಳೆಹಣ್ಣನ್ನು ಸೇವಿಸುವುದರಿಂದಾಗುವ ಪ್ರಯೋಜನಗಳಿಂದ ಅದನ್ನು ನಿತ್ಯ ಆಹಾರದ ಅವಿಭಾಜ್ಯ ಅಂಗವನ್ನಾಗಿ ಮಾಡಿವೆ.

ಬಾಳೆಹಣ್ಣಿನಲ್ಲಿರುವ ಟ್ರಿಪ್ಟೋಫಾನ್ ಎಂಬ ಪ್ರೊಟೀನ್ ಅಂಶ, ದೇಹದಲ್ಲಿ ಸಿರೊಟೋನಿಸ್ ಆಗಿ ಪರಿವರ್ತನೆಗೊಳ್ಳುತ್ತದೆ. ಇದರಿಂದ ಮಾನಸಿಕ ಶಾಂತಿ ಹೆಚ್ಚಾಗಿ, ಒತ್ತಡ ಕಡಿಮೆಯಾಗುತ್ತದೆ. ಇದಕ್ಕಾಗಿಯೇ ಕೆಲವರು ಊಟದ ನಂತರ ಬಾಳೆಹಣ್ಣು ತಿನ್ನುವ ಅಭ್ಯಾಸ ಹೊಂದಿರುತ್ತಾರೆ. ಇದು ಜೀರ್ಣಕ್ರಿಯೆ ಸುಧಾರಿಸುವ ಜೊತೆಗೆ ಶರೀರಕ್ಕೆ ಅಗತ್ಯವಾದ ಪೌಷ್ಟಿಕಾಂಶಗಳನ್ನು ಸರಿಯಾಗಿ ಒದಗಿಸುತ್ತದೆ.

ಕ್ರೀಡಾಪಟುಗಳ ಶಕ್ತಿಯ ಮೂಲವೆಂದರೆ ಬಾಳೆಹಣ್ಣು. ಇದರಲ್ಲಿರುವ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೂಕೋಸ್ ಶರೀರಕ್ಕೆ ತಕ್ಷಣ ಶಕ್ತಿ ನೀಡುವ ಮೂಲಕ ದೀರ್ಘಕಾಲ ಚೈತನ್ಯ ತುಂಬಲು ಸಹಕಾರಿಯಾಗುತ್ತವೆ. ಇದನ್ನು ವೈದ್ಯರೂ ಊಟದ ಬಳಿಕ ಅಥವಾ ವ್ಯಾಯಾಮದ ಬಳಿಕ ಸೇವಿಸಲು ಸಲಹೆ ನೀಡುತ್ತಾರೆ.

ಪೌಷ್ಟಿಕ ಅಂಶಗಳ ದೃಷ್ಟಿಯಿಂದ ನೋಡಿದರೆ, ಬಾಳೆಹಣ್ಣು ಪೋಟ್ಯಾಸಿಯಮ್, ಮೆಗ್ನೀಸಿಯಂ, ವಿಟಮಿನ್ ಎ, ಬಿ, ಸಿ ಮತ್ತು ವಿಟಮಿನ್ ಬಿ6 ಅನ್ನು ಒಳಗೊಂಡಿದ್ದು, ಹೃದಯದ ಆರೋಗ್ಯ ಕಾಪಾಡಲು ಹಾಗೂ ತೂಕ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ. ಮಕ್ಕಳಿಗೆ ಪ್ರತಿದಿನ ಬಾಳೆಹಣ್ಣು ನೀಡುವುದರಿಂದ ಆಸ್ತಮಾ ತಡೆಯಲು ಸಾಧ್ಯವಿದೆ. ದೇಹದ ನರಮಂಡಲವನ್ನು ಬಲಪಡಿಸುವ ಜೊತೆಗೆ ಬಿಳಿ ರಕ್ತಕಣಗಳ ಉತ್ಪತ್ತಿಯನ್ನು ಹೆಚ್ಚಿಸುತ್ತದೆ. ಹಸಿರು ಬಾಳೆಹಣ್ಣಿಗಿಂತ ಹೆಚ್ಚು ಪ್ರಯೋಜನ ನೀಡುವ ಬಣ್ಣ ಬದಲಾದ ಕಪ್ಪು ಬಾಳೆಹಣ್ಣು ಇನ್ನೂ ಹೆಚ್ಚು ಪರಿಣಾಮಕಾರಿ.

ನಿದ್ರಾ ಸಮಸ್ಯೆ, ಹೊಟ್ಟೆ ನೋವು, ಅಜೀರ್ಣ, ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಬಾಳೆಹಣ್ಣು ಸಹಕಾರಿಯಾಗಿದೆ. ಇದರಲ್ಲಿರುವ ವಿಟಮಿನ್ ಬಿ-6 ಹಾಗೂ ಮೆಗ್ನೀಸಿಯಂ ಸ್ನಾಯುಗಳನ್ನು ಸಡಿಲಗೊಳಿಸುವ ಮೂಲಕ ಗುಣಮಟ್ಟದ ನಿದ್ರೆ ನೀಡುತ್ತದೆ. ಬಾಳೆಹಣ್ಣು ನಿಯಮಿತವಾಗಿ ಸೇವಿಸಿದರೆ ರಕ್ತದೊತ್ತಡ ಸಮತೋಲನಗೊಳ್ಳುವ ಜೊತೆಗೆ ದೇಹದ ಪ್ರತಿರೋಧಕ ಶಕ್ತಿ ಸುಧಾರಿಸುತ್ತದೆ.

ಆದ್ದರಿಂದ, ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಬಾಳೆಹಣ್ಣನ್ನು ಆಹಾರದಲ್ಲಿ ಸೇರಿಸಿಕೊಳ್ಳಿ!

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ