spot_img

ಮಧ್ವಾಚಾರ್ಯರ ಜನ್ಮಸ್ಥಳ ಪಾಜಕದಲ್ಲಿ ಉಪಾಧ್ಯಾಯ ಮೂಡುಬೆಳ್ಳೆಯವರಿಂದ ರಚಿಸಲ್ಪಟ್ಟ ಕಾವಿ ಚಿತ್ರಗಳು

Date:

ಶ್ರೀ ಮಧ್ವಾಚಾರ್ಯರ ಜನ್ಮಸ್ಥಳ ಪಾಜಕ ಕ್ಷೇತ್ರ ಮಠದಲ್ಲಿ ಇತ್ತೀಚೆಗೆ ರಚಿಸಿರುವ ಕಾವಿ ಚಿತ್ರಕಲೆಯನ್ನು ಕಾಣೆಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮಧ್ವನವಮಿಯ ಪ್ರಥಮ ದಿನದಂದು ಉದ್ಘಾಟಿಸಿದರು. ಇಲ್ಲಿ ಮಧ್ವಾಚಾರ್ಯರ ಜೀವನ ಚರಿತ್ರೆಗೆ ಸಂಬಂಧಪಟ್ಟಪ್ರಮುಖ ಎಂಟು ಕಾವಿ ಚಿತ್ರಗಳನ್ನು ರಚಿಸಲಾಗಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಲಾವಿದ ಡಾ. ಉಪಾಧ್ಯಾಯ ಮೂಡುಬೆಳ್ಳೆಯವರು ಈ ಚಿತ್ರಗಳನ್ನು ರಚಿಸಿದ್ದಾರೆ. ಉದ್ಘಾಟನೆಯ ಸಂದರ್ಭದಲ್ಲಿ ಶ್ರೀ ಮಠದ ಅರ್ಚಕರಾದ ವೇದಮೂರ್ತಿ ಮಾಧವ ಉಪಾಧ್ಯಾಯ, ವಾದಿರಾಜ ಉಪಾಧ್ಯಾಯ, ವೇದಮೂರ್ತಿ ನಂದಳಿಕೆ ವಿಠ್ಠಲ ಭಟ್, ಡಾ.ಉಪಾಧ್ಯಾಯ ಮೂಡುಬೆಳ್ಳೆ, ಕ್ಯಾಮಲಿನ್ ನ್ಯಾಷನಲ್ ಅವಾರ್ಡ್ ವಿಜೇತ ಡಾ. ಪ್ರಮೋದನ ಉಪಾಧ್ಯಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಚಿತ್ರಗಳು ದೊಡ್ಡ ಗಾತ್ರದಲ್ಲಿ ಅದ್ಭುತವಾಗಿ ಮೂಡಿಬಂದಿವೆ. ಈ ಬಾರಿಯ ಮಧ್ವನವಮಿಗೆ ಇದೊಂದು ವಿಶೇಷ ಕೊಡುಗೆಯಾಗಿದೆ.
ಚಿತ್ರಗಳಲ್ಲಿ ಶ್ರೀ ಮಧ್ವಾಚಾರ್ಯರ ಹುಟ್ಟು, ತಂದೆಯಿಂದ ಅಕ್ಷರಾಭ್ಯಾಸ, ತಾಯಿಯ ಕರೆಗೆ ಓಗೊಟ್ಟು ಕುಂಜಾರುಗಿರಿ ದುರ್ಗಾ ಬೆಟ್ಟದಿಂದ ಪಾಜಕಕ್ಕೆ ನೆಗೆಯುತ್ತಿರುವ ಬಾಲಕ ವಾಸುದೇವ, ಮಧ್ವಾಚಾರ್ಯರ ಸನ್ಯಾಸ್ಯಾಶ್ರಮ ಸ್ವೀಕಾರ, ಶ್ರೀ ಕ್ಷೇತ್ರ ಬದರಿಯಲ್ಲಿ ಭಗವಾನ್ ವೇದವ್ಯಾಸರಿಂದ ವೇದ ವಿಚಾರಗಳ ವಿಮರ್ಶೆ, ಉಡುಪಿಯಲ್ಲಿ ಪ್ರತಿಷ್ಠಾಪಿಸಲು ಪಡುಗಡಲ ತೀರದಿಂದ ದ್ವಾರಕಾಧೀಶ ಶ್ರೀ ಕೃಷ್ಣನ ಪ್ರತಿಮೆಯನ್ನು ಹೊತ್ತು ತರುತ್ತಿರುವ ಶ್ರೀ ಮಧ್ವಾಚಾರ್ಯರು, ಶ್ರೀ ಮಧ್ವಾಚಾರ್ಯರ ಪ್ರತಿರೂಪವಾದ ವಾಯುದೇವರು, ಶ್ರೀ ಮಧ್ವಾಚಾರ್ಯರು ಪೂಜಿಸುತ್ತಿದ್ದ ಅನಂತಾಸನ ದೇವರು ಹಾಗೂ ಮಠದ ಹೊರ ಬದಿ ಗೋಡೆಯಲ್ಲಿ ಶೇಷಶಯನ ಶ್ರೀಮನ್ನಾರಾಯಣ, ಗರುಡವಾಹನ ವಿಷ್ಣು (ಶ್ರೀಕರ) ಇತ್ಯಾದಿ ಚಿತ್ರಗಳು ಭವ್ಯವಾಗಿ ಮೂಡಿಬಂದಿವೆ.
ಇಡಿಯ ಮಠವನ್ನು ಸಾಂಪ್ರದಾಯಿಕ ವಿನ್ಯಾಸಗಳಿಂದ ಅಂದಗೊಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.