ಮಧ್ವಾಚಾರ್ಯರ ಜನ್ಮಸ್ಥಳ ಪಾಜಕದಲ್ಲಿ ಉಪಾಧ್ಯಾಯ ಮೂಡುಬೆಳ್ಳೆಯವರಿಂದ ರಚಿಸಲ್ಪಟ್ಟ ಕಾವಿ ಚಿತ್ರಗಳು

Date:

spot_img

ಶ್ರೀ ಮಧ್ವಾಚಾರ್ಯರ ಜನ್ಮಸ್ಥಳ ಪಾಜಕ ಕ್ಷೇತ್ರ ಮಠದಲ್ಲಿ ಇತ್ತೀಚೆಗೆ ರಚಿಸಿರುವ ಕಾವಿ ಚಿತ್ರಕಲೆಯನ್ನು ಕಾಣೆಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮಧ್ವನವಮಿಯ ಪ್ರಥಮ ದಿನದಂದು ಉದ್ಘಾಟಿಸಿದರು. ಇಲ್ಲಿ ಮಧ್ವಾಚಾರ್ಯರ ಜೀವನ ಚರಿತ್ರೆಗೆ ಸಂಬಂಧಪಟ್ಟಪ್ರಮುಖ ಎಂಟು ಕಾವಿ ಚಿತ್ರಗಳನ್ನು ರಚಿಸಲಾಗಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಲಾವಿದ ಡಾ. ಉಪಾಧ್ಯಾಯ ಮೂಡುಬೆಳ್ಳೆಯವರು ಈ ಚಿತ್ರಗಳನ್ನು ರಚಿಸಿದ್ದಾರೆ. ಉದ್ಘಾಟನೆಯ ಸಂದರ್ಭದಲ್ಲಿ ಶ್ರೀ ಮಠದ ಅರ್ಚಕರಾದ ವೇದಮೂರ್ತಿ ಮಾಧವ ಉಪಾಧ್ಯಾಯ, ವಾದಿರಾಜ ಉಪಾಧ್ಯಾಯ, ವೇದಮೂರ್ತಿ ನಂದಳಿಕೆ ವಿಠ್ಠಲ ಭಟ್, ಡಾ.ಉಪಾಧ್ಯಾಯ ಮೂಡುಬೆಳ್ಳೆ, ಕ್ಯಾಮಲಿನ್ ನ್ಯಾಷನಲ್ ಅವಾರ್ಡ್ ವಿಜೇತ ಡಾ. ಪ್ರಮೋದನ ಉಪಾಧ್ಯಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಚಿತ್ರಗಳು ದೊಡ್ಡ ಗಾತ್ರದಲ್ಲಿ ಅದ್ಭುತವಾಗಿ ಮೂಡಿಬಂದಿವೆ. ಈ ಬಾರಿಯ ಮಧ್ವನವಮಿಗೆ ಇದೊಂದು ವಿಶೇಷ ಕೊಡುಗೆಯಾಗಿದೆ.
ಚಿತ್ರಗಳಲ್ಲಿ ಶ್ರೀ ಮಧ್ವಾಚಾರ್ಯರ ಹುಟ್ಟು, ತಂದೆಯಿಂದ ಅಕ್ಷರಾಭ್ಯಾಸ, ತಾಯಿಯ ಕರೆಗೆ ಓಗೊಟ್ಟು ಕುಂಜಾರುಗಿರಿ ದುರ್ಗಾ ಬೆಟ್ಟದಿಂದ ಪಾಜಕಕ್ಕೆ ನೆಗೆಯುತ್ತಿರುವ ಬಾಲಕ ವಾಸುದೇವ, ಮಧ್ವಾಚಾರ್ಯರ ಸನ್ಯಾಸ್ಯಾಶ್ರಮ ಸ್ವೀಕಾರ, ಶ್ರೀ ಕ್ಷೇತ್ರ ಬದರಿಯಲ್ಲಿ ಭಗವಾನ್ ವೇದವ್ಯಾಸರಿಂದ ವೇದ ವಿಚಾರಗಳ ವಿಮರ್ಶೆ, ಉಡುಪಿಯಲ್ಲಿ ಪ್ರತಿಷ್ಠಾಪಿಸಲು ಪಡುಗಡಲ ತೀರದಿಂದ ದ್ವಾರಕಾಧೀಶ ಶ್ರೀ ಕೃಷ್ಣನ ಪ್ರತಿಮೆಯನ್ನು ಹೊತ್ತು ತರುತ್ತಿರುವ ಶ್ರೀ ಮಧ್ವಾಚಾರ್ಯರು, ಶ್ರೀ ಮಧ್ವಾಚಾರ್ಯರ ಪ್ರತಿರೂಪವಾದ ವಾಯುದೇವರು, ಶ್ರೀ ಮಧ್ವಾಚಾರ್ಯರು ಪೂಜಿಸುತ್ತಿದ್ದ ಅನಂತಾಸನ ದೇವರು ಹಾಗೂ ಮಠದ ಹೊರ ಬದಿ ಗೋಡೆಯಲ್ಲಿ ಶೇಷಶಯನ ಶ್ರೀಮನ್ನಾರಾಯಣ, ಗರುಡವಾಹನ ವಿಷ್ಣು (ಶ್ರೀಕರ) ಇತ್ಯಾದಿ ಚಿತ್ರಗಳು ಭವ್ಯವಾಗಿ ಮೂಡಿಬಂದಿವೆ.
ಇಡಿಯ ಮಠವನ್ನು ಸಾಂಪ್ರದಾಯಿಕ ವಿನ್ಯಾಸಗಳಿಂದ ಅಂದಗೊಳಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಹೆ ಎಂಇಟಿ ಫಲಿತಾಂಶ 2026: ಜ್ಞಾನಸುಧಾ ವಿದ್ಯಾರ್ಥಿಗಳ ದಾಖಲೆಯ ರ‍್ಯಾಂಕ್‌

ಮಾಹೆ ಎಂಇಟಿ 2026 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ದಾಖಲೆಯ ರ‍್ಯಾಂಕ್ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ತಮಿಳುನಾಡು ಬಿಜೆಪಿಗೆ ಶಾಕ್: ಸುಮತಿ ವೆಂಕಟೇಶ್ ರಾಜೀನಾಮೆ

ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾಂಗ್ರೆಸ್ ಸಚಿವರ ಅಸಮಾಧಾನ ಶಮನ: ಡಿಕೆಶಿ ಸಂಧಾನ ಯಶಸ್ವಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಖಾತೆ ಹಂಚಿಕೆ ಬಿಕ್ಕಟ್ಟು ತಡರಾತ್ರಿ ಸುಖಾಂತ್ಯಗೊಂಡಿದ್ದು, ಸಚಿವರ ಅಸಮಾಧಾನವನ್ನು ಸಿಎಂ ಡಿಕೆಶಿ ಶಮನಗೊಳಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತ vs ಅಫ್ಘಾನಿಸ್ತಾನ 2 ನೇ ಟೆಸ್ಟ್ ಪಂದ್ಯದ ಲೈವ್ ಅಪ್ಡೇಟ್ಸ್

ಚಂಡೀಗಢದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಎರಡನೇ ಟೆಸ್ಟ್ ಪಂದ್ಯದ ರೋಚಕ ಕದನ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.