spot_img

ಹಿರಿಯಡ್ಕದಲ್ಲಿ ಶ್ರೀ ಆಂಜನೇಯ ಭಜನಾ ಮಂಡಳಿ ಉದ್ಘಾಟನೆ

Date:

spot_img

ಹಿರಿಯಡ್ಕ: ಹಿರಿಯಡ್ಕದ ಮಾಣೈಮಠ ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಶ್ರೀ ಆಂಜನೇಯ ಭಜನಾ ಮಂಡಳಿ, ಮಾಣೈ ಎಂಬ ನಾಮಾಂಕಿತದೊಂದಿಗೆ ಹೊಸ ಕುಣಿತ ಭಜನಾ ಮಂಡಳಿಯನ್ನು ಶ್ರೀ ಮುಖ್ಯಪ್ರಾಣ ದೇವರ ಪ್ರಧಾನ ಅರ್ಚಕರಾದ ಶ್ರೀ ಮಾಧವ ಉಪಾಧ್ಯಾಯ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಅವರು ಈ ಹೊಸ ಭಜನಾ ಮಂಡಳಿಗೆ ಶುಭಾಶೀರ್ವಾದ ಮಾಡಿ, ತನ್ನ ಸಹಕಾರದ ಭರವಸೆ ನೀಡಿದರು. ಮಂಡಳಿಯು ಉತ್ತಮವಾಗಿ ದೇವರ ಸೇವೆ ಮಾಡುವ ಮೂಲಕ ಈ ಸ್ಥಳದ ಹೆಸರನ್ನು ಇನ್ನಷ್ಟು ಹೆಚ್ಚಿಸಲಿ ಎಂದು ಹೇಳಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕಿನ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಮುಖ್ಯಪ್ರಾಣ ದೇವರಿಗೆ ಹೊಸ ಭಜನಾ ಮಂಡಳಿಯಿಂದ ಕುಣಿತ ಭಜನಾ ಸೇವೆ, ರಂಗಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿ ಮಂಡಳಿಗೆ ಶುಭ ಹಾರೈಸಿದರು. ಈ ಭಜನಾ ಮಂಡಳಿಗೆ ಶ್ರೀ ರೋಹಿತ್ ಕಬ್ಯಾಡಿರವರು ಉತ್ತಮವಾಗಿ ತರಬೇತಿ ನೀಡುವ ಮೂಲಕ ಸಜ್ಜುಗೊಳಿಸಿದ್ದರು.

ಈ ಭಜನಾ ಮಂಡಳಿಗೆ ಸಹಕರಿಸಿದ ಶ್ರೀ ರಾಘವೇಂದ್ರ ಆಚಾರ್ಯ ಹಾಗೂ ಶ್ರೀಮತಿ ಶಶಿಕಲಾರವರನ್ನು ಗೌರವಿಸಲಾಯಿತು. ಈ ಎಲ್ಲಾ ಕಾರ್ಯಕ್ರಮದಲ್ಲಿ ಶ್ರೀ ಗೋಕುಲದಾಸ್ ನಾಯಕ್ ಕೊಂಡಾಡಿ, ಶ್ರೀ ಆಂಜನೇಯ ಭಜನಾ ಮಂಡಳಿಯ ಸಂಚಾಲಕರು ಸುಧೀರ್ ನಾಯಕ್, ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಸುಧೀರ್ ನಾಯಕ್, ಉಪಾಧ್ಯಕ್ಷರಾದ ಶ್ರೀಮತಿ ಮಮತ, ಕಾರ್ಯದರ್ಶಿ ಸಾಕ್ಷಿ ಮೂಲ್ಯ, ಜೊತೆ ಕಾರ್ಯದರ್ಶಿ ಗೀತಾ, ಕೋಶಾಧಿಕಾರಿ ನಾಗರತ್ನ, ಜೊತೆ ಕೋಶಾಧಿಕಾರಿ ಅಕ್ಷಯ್ ಆಚಾರ್ಯ, ಊರಿನ ಗಣ್ಯರು, ಹಿರಿಯರು, ಮಂಡಳಿಯ ಸದಸ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೃದಯಾಘಾತದ ಮುನ್ಸೂಚನೆ: 10 ವರ್ಷಗಳ ಮೊದಲೇ ಈ ಬದಲಾವಣೆಗಳು ಕಾಣಿಸಿಕೊಳ್ಳಬಹುದು

ಹೃದಯಾಘಾತವು ಇದ್ದಕ್ಕಿದ್ದಂತೆ ಸಂಭವಿಸುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ, ನಮ್ಮ ದೇಹವು ಹಲವು ವರ್ಷಗಳ ಮೊದಲೇ ಅದರ ಲಕ್ಷಣಗಳನ್ನು ಸೂಚಿಸಲು ಪ್ರಾರಂಭಿಸುತ್ತದೆ ಎಂದು ವೈದ್ಯರು ಮತ್ತು ಇತ್ತೀಚಿನ ಸಂಶೋಧನೆಗಳು ತಿಳಿಸಿವೆ.

ಅಳಿಯನಿಂದಲೇ ಅತ್ತೆಯ ಭೀಕರ ಕೊಲೆ: ತುಮಕೂರಿನ ಶವದ ತುಂಡುಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕೊರಟಗೆರೆ ರಸ್ತೆಗಳಲ್ಲಿ ಶವದ ತುಂಡುಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅಳಿಯನೇ ತನ್ನ ಅತ್ತೆಯನ್ನು ಕೊಲೆ ಮಾಡಿ, ದೇಹವನ್ನು ತುಂಡು ತುಂಡಾಗಿ ಬಿಸಾಡಿರುವುದು ಬೆಳಕಿಗೆ ಬಂದಿದೆ.

ಧರ್ಮಸ್ಥಳದಲ್ಲಿ ಮತ್ತೊಂದು ವಿವಾದ: ಯೂಟ್ಯೂಬರ್ ‘ಕುಡ್ಲಾ ರಾಂ ಪೇಜ್’ ವಿರುದ್ಧ ಪ್ರಕರಣ ದಾಖಲು

ಧರ್ಮಸ್ಥಳದಲ್ಲಿ ವಿಡಿಯೋ ಚಿತ್ರೀಕರಣದ ವಿಚಾರದಲ್ಲಿ ನಡೆದ ವಾಗ್ವಾದವು ಹಲ್ಲೆ ಪ್ರಕರಣವಾಗಿ ಪರಿವರ್ತನೆಯಾಗಿದ್ದು, 'ಕುಡ್ಲಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್‌ನ ಯೂಟ್ಯೂಬರ್ ಮತ್ತು ಇಬ್ಬರು ಸಹಚರರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ ಹೆಸರು ಹಾಳಾಗಲು ಬಿಡಲ್ಲ, ಹೆಗ್ಗಡೆಯವರ ಜೊತೆ ನಾವಿದ್ದೇವೆ: ಜನಾರ್ದನ ಪೂಜಾರಿ

ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.