
ಉಡುಪಿ : ಉಡುಪಿಯ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭಾನುವಾರ (ಸೆಪ್ಟೆಂಬರ್ 21) ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಈ ಮೂಲಕ ಉಡುಪಿ ನಗರದ ಬಹುದಿನಗಳ ಕನಸು ನನಸಾಗಿದೆ.

ಉಡುಪಿ-ತೀರ್ಥಹಳ್ಳಿ ಹೆದ್ದಾರಿ 169 ಎ ಗೆ ಸಂಪರ್ಕ ಕಲ್ಪಿಸುವ ಈ ಮೇಲ್ಸೇತುವೆಯು 28.52 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಈ ಸಮಾರಂಭದಲ್ಲಿ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಸುನೀಲ್ ಕುಮಾರ್ ಕಾರ್ಕಳ, ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ, ಶ್ರೀ ಗುರ್ಮೆ ಸುರೇಶ್ ಶೆಟ್ಟಿ, ಶ್ರೀ ಕಿರಣ್ ಕೊಡ್ಲಿ, ಶ್ರೀ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಶ್ರೀ ಲಾಲಾಜಿ ಮಂಡನ್, ದ.ಕ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕಂಪಲಾ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನವೀನ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಶ್ರೀಮತಿ ಟಿ. ಸ್ವರೂಪಾ ಸೇರಿದಂತೆ ಜಿಲ್ಲಾಡಳಿತದ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.



































