spot_img

ಭಾರತ-ಇಂಗ್ಲೆಂಡ್ 2ನೇ T20ಗೆ ಸಜ್ಜು, ಪ್ರಶಂಸನೀಯ ಪ್ರದರ್ಶನಕ್ಕೆ ನಿರೀಕ್ಷೆ

Date:

spot_img

ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ಚಾಂಪಿಯನ್ಸ್ ರ ಆಟವಾಡಿ 7 ವಿಕೆಟ್‌ಗಳಿಂದ ಇಂಗ್ಲೆಂಡ್‌ ವಿರುದ್ಧ ಗೆಲುವು ದಾಖಲಿಸಿದ ಟೀಮ್ ಇಂಡಿಯಾ, ಶನಿವಾರ ಚೆನ್ನೈ T20 ಪಂದ್ಯದಲ್ಲೂ ಅದೇ ಲಯ ಕಾಪಾಡಲು ದೃಢಸಂಕಲ್ಪಗೊಂಡಿದೆ. 5 ಪಂದ್ಯಗಳ ಸುದೀರ್ಘ ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್‌ ತಿರುಗಿಬೀಳಲು ಸಾಧ್ಯತೆಯಿದ್ದು, ಸ್ಪರ್ಧೆ ಕಠಿಣವಾಗಲಿದೆ.

ಶಮಿ ಗೈರಲ್ಲೂ ಉತ್ತಮ ಪ್ರದರ್ಶನ
ಮೊಹಮ್ಮದ್ ಶಮಿ ತವರಿನ ಕೋಲ್ಕತಾದಲ್ಲಿ ಆಡಲಿಲ್ಲದಿದ್ದರೂ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಅಕ್ಷರ್ ಪಟೇಲ್ ಅವರ ಬೌಲಿಂಗ್ ಮೂಲಕ ಭಾರತ ಬಲಿಷ್ಠ ಪ್ರದರ್ಶನ ನೀಡಿತು. ಚಕ್ರವರ್ತಿ ಒಂದು ಓವರ್‌ನಲ್ಲಿ ಎರಡು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ಇಂಗ್ಲೆಂಡ್ ತಂಡವನ್ನು ಸಂಕಷ್ಟಕ್ಕೆ ಸಿಕ್ಕಿಸಿದರು.

ಅಭಿಷೇಕ್ ಗಾಯ, ಸ್ಯಾಮ್ಬನ್‌ಫಾರ್ಮ್ ಗಮನಕ್ಕೆ
ಬ್ಯಾಟಿಂಗ್‌ನಲ್ಲಿ ಅಭಿಷೇಕ್ ಶರ್ಮ ಅವರ 232ರಷ್ಟು ಸ್ಟ್ರೈಕ್‌ರೇಟ್ ಮಿಂಚಿಸಿತ್ತು, ಆದರೆ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ. ಸಂಜು ಸ್ಯಾಮ್ಬನ್ ಸಿಡಿದು ನಿಂತರೂ ಇನ್ನಿಂಗ್ಸ್‌ ಅನ್ನು ಆಳಕ್ಕೆ ಕೊಂಡೊಯ್ಯುವಲ್ಲಿ ವಿಫಲರಾದರು. ನಾಯಕ ಸೂರ್ಯಕುಮಾರ್ ಯಾದವ್ ಈ ಪಂದ್ಯದಲ್ಲಿ ಖಾತೆ ತೆರೆಯುವ ನಿರೀಕ್ಷೆಯಿದೆ.

ಚೆಪಾಕ್ ಅಂಗಳದಲ್ಲಿ ಸ್ಪಿನ್ನರ್‌ಗಳಿಗೆ ಮೇಲುಗೈ
ಚೆಪಾಕ್ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗುವ ನಿರೀಕ್ಷೆಯಿದ್ದು, ಭಾರತ ತಂಡವು ವಿವಿಧತೆ ಹೊಂದಿರುವ ಗುಣಮಟ್ಟದ ಸ್ಪಿನ್ನರ್‌ಗಳನ್ನು ಹೊಂದಿರುವುದರಿಂದ ಕಮಾಲಿನ ಆಟದ ನಿರೀಕ್ಷೆಯಿದೆ. ಶಮಿ ತಂಡಕ್ಕೆ ಮರಳಿದರೆ, ನಿತೀಶ್ ಕುಮಾರ್ ರೆಡ್ಡಿ ಅವರು ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯಿದೆ.

ಪುನರ್‌ಪ್ರದರ್ಶನದ ನಿರೀಕ್ಷೆ
ಬಟ್ಲರ್, ಲಿವಿಂಗ್‌ಸ್ಟೋನ್, ಬ್ರೂಕ್ ಮುಂತಾದ ಟT20 ಸ್ಪೆಷಲಿಸ್ಟ್ ಆಟಗಾರರನ್ನೊಳಗೊಂಡ ಬಲಿಷ್ಠ ಇಂಗ್ಲೆಂಡ್ ತಂಡ ಚೆನ್ನೈಯಲ್ಲಿ ತಿರುಗಿಬೀಳಲು ಪ್ರಯತ್ನಿಸಲಿದೆ. ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ ಎಡವಟ್ಟನು ಮರೆತು, ಇಂಗ್ಲೆಂಡ್ ತಂಡ ಉತ್ತಮ ಆಟವನ್ನು ನೀಡಲು ಸಜ್ಜಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಕಲಂಬಾಡಿಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜನನಿ ಮಿತ್ರ ಮಂಡಳಿ (ರಿ) ವಾoಟ್ರಾಯ್ ಪದವು, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ ಹಳೆ ವಿದ್ಯಾರ್ಥಿ ಸಂಘ, ಕಲಂಬಾಡಿ ಪದವು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ

ಶಿರೂರು ಮಠದ ಭಾವಿ ಪರ್ಯಾಯ ಶ್ರೀ ವೇದವರ್ಧನ ತೀರ್ಥರಿಗೆ ಬ್ರಾಹ್ಮಣ ಮಹಾಸಭಾದಿಂದ ಫಲ ಕಾಣಿಕೆ ಅರ್ಪಣೆ

ಶಿರೂರು ಮಠದ ಭಾವಿ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ, ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೌರವಪೂರ್ವಕವಾಗಿ ಫಲ ಕಾಣಿಕೆ ಅರ್ಪಿಸಿ ಅವರಿಂದ ಆಶೀರ್ವಾದ ಪಡೆಯಲಾಯಿತು.

ಬಿಜೆಪಿ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ವಿರುದ್ಧದ ಪ್ರಕರಣಕ್ಕೆ ಮರುಜೀವ, ಹಣ ಬಿಡುಗಡೆಗೆ ಉದ್ಯಮಿ ಹೈಕೋರ್ಟ್ ಮೊರೆ

ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.

75 ವಿಐಪಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದ ‘ಹನಿ ಮನಿ’ ಲೇಡಿ: ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದ ‘ಚಿತ್ರಾಂಗಿಣಿ’!

ಮಹಾರಾಷ್ಟ್ರದಲ್ಲಿ 75ಕ್ಕೂ ಹೆಚ್ಚು ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂ. ಸುಲಿಗೆ ಮಾಡಿದ ಮಹಿಳೆಯ ಪ್ರಕರಣ ಭಾರೀ ಕೋಲಾಹಲ ಸೃಷ್ಟಿಸಿದೆ.