spot_img

ಪಾಕಿಸ್ತಾನದ ಎರ್‌ಬೇಸ್‌ಗಳನ್ನೇ ನೆಲಸಮ ಮಾಡಿದ ಭಾರತ! ‘ಸಿಂದೂರದ ಶಕ್ತಿಯೇ ಇದು’ ಎಂದ ಪ್ರಧಾನಿ ಮೋದಿ

Date:

spot_img
spot_img

ಬಿಹಾರ, ಮೇ 30 : ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ “ಆಪರೇಷನ್ ಸಿಂದೂರ್” ನ ಹೆಸರಿನಲ್ಲಿ ಭಾರತೀಯ ಸೇನೆಯು ಪಾಕಿಸ್ತಾನದ ಏರ್ ಬೇಸ್‌ಗಳು ಮತ್ತು ಉಗ್ರರ ತಾಣಗಳನ್ನು ಕ್ಷಣಾರ್ಧದಲ್ಲಿ ನಾಶಮಾಡಿದ ಶೌರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ ನಡೆಸಿದ ಚುನಾವಣಾ ರ‍್ಯಾಲಿಯಲ್ಲಿ ಉಲ್ಲೇಖಿಸಿದರು.

ಬಿಹಾರದ ಕರಾಕತ್ ಪಟ್ಟಣದಲ್ಲಿ ಶುಕ್ರವಾರ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಹಲ್ಗಾಮ್ ದಾಳಿಯ ಬಳಿಕ ದೇಶದ ಭದ್ರತೆಗೆ ಪ್ರತಿಸ್ಪಂದನೆ ನೀಡುವ ಮಾತು ನೀಡಿದ್ದೇನೆ ಮತ್ತು ಅದನ್ನು ಈಡೇರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. “ಪಾಕಿಸ್ತಾನದ ಸೇನೆಯ ರಕ್ಷಣೆಯಡಿ ಅಡಗಿದ್ದ ಉಗ್ರರು, ನಮ್ಮ ಪಡೆಗಳ ತೀವ್ರ ದಾಳಿಗೆ ನಲುಗಿದರು. ಕೆಲವೇ ನಿಮಿಷಗಳಲ್ಲಿ ಪಾಕಿಸ್ತಾನದಲ್ಲಿನ ಹಲವು ಭಯೋತ್ಪಾದಕ ತಾಣಗಳು ಮತ್ತು ವಾಯುನೆಲೆಗಳು ನಾಶವಾಗಿವೆ,” ಪಾಕಿಸ್ತಾನ ಮತ್ತು ಜಗತ್ತಿಗೆ ಸಿಂದೂರದ ಶಕ್ತಿ ಏನೆಂದು ತೋರಿಸಿದ್ದೇವೆ,” ಎಂದು ಮೋದಿ ಹೇಳಿದರು.

“ಪಹಲ್ಲಾಮ್ ಘಟನೆಯ ಎರಡು ದಿನಗಳ ನಂತರ ನಾನು ಬಿಹಾರಕ್ಕೆ ಭೇಟಿ ನೀಡಿ ಭಯೋತ್ಪಾದಕ ಅಡಗುತಾಣಗಳನ್ನು ನೆಲಸಮ ಮಾಡಲಾಗುವುದು ಎಂದು ಬಿಹಾರದ ಮಣ್ಣಿನಿಂದ ದೇಶಕ್ಕೆ ಭರವಸೆ ನೀಡಿದ್ದೆ. ಅವರಿಗೆ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ನೀಡಲಾಗುವುದು ಎಂದು ನಾನು ಹೇಳಿದ್ದೆ. ಈಗ ನಾನು ಬಿಹಾರಕ್ಕೆ ಹಿಂತಿರುಗಿದ್ದೇನೆ, ನಾನು ನನ್ನ ಭರವಸೆಯನ್ನು ಈಡೇರಿಸಿದ್ದೇನೆ” ಎಂದು ಹೆಮ್ಮೆಯಿಂದ ಪ್ರಧಾನಿ ಮೋದಿ ಇಡೀ ಜಗತ್ತಿಗೆ ಸಿಂದೂರದ ಶಕ್ತಿಯ ಬಗ್ಗೆ ತಿಳಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ನಿಧನಕ್ಕೆ ದಿನಕರ ಶೆಟ್ಟಿ ಪಳ್ಳಿ ಸಂತಾಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಪಾಸ್‌ಪೋರ್ಟ್‌ ವಿಷಯಕ್ಕೆ ಜಗಳ: ಮಗಳ ಎದುರೇ ಹೆಂಡತಿಯನ್ನು ಗುಂಡಿಟ್ಟು ಕೊಂದ ಪತಿ

ಪಾಸ್‌ಪೋರ್ಟ್ ವಿಚಾರವಾಗಿ ನಡೆದ ಜಗಳದಲ್ಲಿ ಪತಿಯೋರ್ವ ತನ್ನ ಮಗಳ ಎದುರೇ ಪತ್ನಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಮಂಗಳವಾರ (ಅ. 14) ಬೆಳಗ್ಗೆ ನಡೆದಿದೆ.

ಜಿಟೆಕ್ಸ್ ಗ್ಲೋಬಲ್ 2025: ವೀಸಾ ಉಲ್ಲಂಘನೆ ಪತ್ತೆಗೆ ಎ.ಐ. ಶಸ್ತ್ರ ಸಜ್ಜಿತ ಸ್ಮಾರ್ಟ್ ಕಾರುಗಳು – ದುಬೈಯಿಂದ ತಂತ್ರಜ್ಞಾನದ ಹೊಸ ದಾಪುಗಾಲು

ದುಬೈನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ತಂತ್ರಜ್ಞಾನ ಪ್ರದರ್ಶನವಾದ ಜಿಟೆಕ್ಸ್ ಗ್ಲೋಬಲ್ 2025 ಮತ್ತೊಮ್ಮೆ ವಿಶ್ವದ ಗಮನವನ್ನು ಸೆಳೆದಿದೆ

ಭಾರತದಲ್ಲಿ AI ಹಬ್‌: $15 ಬಿಲಿಯನ್ ಹೂಡಿಕೆಗೆ ಮುಂದಾದ ಗೂಗಲ್; ಪ್ರಧಾನಿ ಮೋದಿಗೆ ಮಾಹಿತಿ ನೀಡಿದ ಸುಂದರ್ ಪಿಚೈ

ಟೆಕ್ ದೈತ್ಯ ಗೂಗಲ್‌ ಸಂಸ್ಥೆಯ ಮುಖ್ಯಸ್ಥ ಸುಂದರ್ ಪಿಚೈ ಅವರು ಮಂಗಳವಾರ (ಅ. 14) ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಕೃತಕ ಬುದ್ಧಿಮತ್ತೆ (AI) ಕುರಿತು ಮಹತ್ವದ ಮಾತುಕತೆ ನಡೆಸಿದರು.